ಸಿಲಿಂಡರ್ ಸ್ಫೋಟಕಕ್ಕೆ ಸಂಬಂಧಿಸಿದಂತೆ ಅಯ್ಯಪ್ಪ ಮಾಲಾಧಾರಿಗಳ ಸಾ*ನ ಸಂಖ್ಯೆ 6ಕ್ಕೆ ಏರಿಕೆ.

ಹುಬ್ಬಳ್ಳಿ :- ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರಲ್ಲಿ 6 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (20), ರಾಜು ಮೂಗೇರಿ (21), ಲಿಂಗಾರಾಜು ಬೀರನೂರ (24), ಶಂಕರ್ ಚವ್ಹಾಣ್ (29) ಮತ್ತು ಮಂಜು ವಾಗ್ಮೋಡೆ (22) ಮೃತ ದುರ್ದೈವಿಗಳು. ಮೂವರಿಗೆ ಚಿಕಿತ್ಸೆ ಮುಂದುವರೆದಿದೆ.

ಮೃತರಾದ ನಿಜಲಿಂಗಪ್ಪ ಬೇಪುರಿಯ ದೇಹ ಶೇ.86 ರಷ್ಟು, ಸಂಜಯ್ ಸವದತ್ತಿಯ ದೇಹ ಶೇ.80 ರಷ್ಟು, ರಾಜು ಮೂಗೇರಿಯ ದೇಹ ಶೇ.74 ರಷ್ಟು, ಲಿಂಗಾರಾಜು ಬೀರನೂರ ದೇಹ ಶೇ.86 ರಷ್ಟು, ಶಂಕರ್ ಚವ್ಹಾಣ್ ದೇಹ ಶೇ.99 ರಷ್ಟು ಮತ್ತು ಮಂಜು ವಾಗ್ಮೋಡೆ ದೇಹ ಶೇ.70 ರಷ್ಟು ಸುಟ್ಟಿತ್ತು. ಇನ್ನೂ ಚಿಂತಾಜನಕ ಸ್ಥಿತಿಯಲ್ಲಿರುವ ಪ್ರಕಾಶ್ ಬಾರಕೇರ್ ದೇಹ ಶೇ91 ರಷ್ಟು, ತೇಜಸ್ವರ್ ಸಾತರೆಯ ದೇಹ ಶೇ74 ರಷ್ಟು ಸುಟ್ಟಿದೆ. ವಿನಾಯಕ್ ಭಾರಕೇರ್ ದೇಹ ಶೇ25 ರಷ್ಟು ಸುಟ್ಟಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಹುಬ್ಬಳ್ಳಿಯ ಉಣಕಲ್ ಸಮೀಪ ಇರುವ ಅಚ್ಚವ್ಚನ ಕಾಲೋನಿಯಲ್ಲಿ ಡಿಸೆಂಬರ್ 22 ರಂದು ಬೆಳಗಿನ ಜಾವ ಸಿಲಿಂಡರ್ ಸ್ಪೋಟಗೊಂಡು 9 ಜನ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಜನರಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗತಿತ್ತು. ಇವರಲ್ಲಿ 6 ಜನರು ಮೃತಪಟ್ಟಿದ್ದಾರೆ.

ಚಿಕಿತ್ಸೆ ಫಲಿಸದೆ ಗುರುವಾರ ರಂದು ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ ಮೃತಪಟ್ಟಿದ್ದರು. ಶುಕ್ರವಾರ (ಡಿ.27) ರಂದು ರಾಜು ಮೂಗೇರಿ ಮತ್ತು ಲಿಂಗರಾಜ ಬೀರನೂರ ಸಾವಿಗೀಡಾಗಿದ್ದರು. ರವಿವಾರ (ಡಿ.29) ಶಂಕರ್ ಚವ್ಹಾಣ್ ಮತ್ತು ಮಂಜು ವಾಗ್ಮೋಡೆ ಮೃತಪಟ್ಟಿದ್ದಾರೆ. ಕುಟುಂಬಸ್ತರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರಿನಿಂದ ತಜ್ಞ ವೈದ್ಯರನ್ನು ಕರೆಸಿ ಅಯ್ಯಪ್ಪ ಮಾಲಾಧಾರಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅದಲ್ಲದೇ, ಕಿಮ್ಸ್ ವೈದ್ಯರು ರಾಜ್ಯ ಮತ್ತು ದೇಶದ ವಿವಿಧ ಭಾಗದ ತಜ್ಞ ವೈದ್ಯರಿಂದ ಮಾಹಿತಿ ಪಡೆದುಕೊಂಡು ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ ಮಾಲಾಧಾರಿಗಳಿಗೆ ಶೇ70 ಕ್ಕಿಂತ ಹೆಚ್ಚು ಸುಟ್ಟ ಗಾಯವಾದ ಕಾರಣ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ.
9 ಜನ ಮೂಲಾಧಾರಿಗಳ ಪೈಕಿ 12 ವರ್ಷದ ವಿನಾಯಕ್ ಬಾರಕೇರ ಮಾತ್ರ ಚಿಕಿತ್ಸೆಗೆ ಸ್ಪಂದಿಸಿದ್ದಾನೆ. ಹೀಗಾಗಿ, ಬಾಲಕನನ್ನು ಐಸೋಲೇಶನ್ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!