ಸುತ್ತೂರು ಕ್ಷೇತ್ರ ಕೇವಲ ಧಾರ್ಮಿಕ ಕ್ಷೇತ್ರ ಅಲ್ಲ. ಅಧ್ಯಾತ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರ : ಸಿಎಂ ಸಿದ್ದರಾಮಯ್ಯ.

ಮೈಸೂರು :- ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗದ್ದುಗೆ ದರ್ಶನ ಪಡೆದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಜಾತ್ಯತೀತ ಸಮಾಜ ನಿರ್ಮಾಣ ಸಂವಿಧಾನದ ಮೂಲ ಉದ್ದೇಶ. ಶರಣಶ್ರೇಷ್ಠರಾದ ಬಸವಾದಿ ಶರಣರ ಆಶಯವೂ ಆಗಿದೆ. ಇದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು ಬಸವಣ್ಣನವರ ಆಶಯದಂತೆ ಜಾತಿ, ಧರ್ಮದ ಹೆಸರಿನ ಮನುಷ್ಯ ತಾರತಮ್ಯ ಹಾಗೂ ಮೌಡ್ಯಗಳನ್ನು ತೊರೆಯಬೇಕು ಎಂದು ಕರೆ ನೀಡಿದರು.
ನಮಗೆ ಸಿಕ್ಕಿರುವ ರಾಜಕೀಯ ಸ್ವಾತಂತ್ರ್ಯ ಆರ್ಥಿಕವಾಗಿ, ಸಮಾಜಿಕವಾಗಿ ಇಲ್ಲ . ಇದು ಸಿಗದ ಹೊರತು ಸ್ವಾತಂತ್ರ್ಯದ ಆಶಯ ಪೂರ್ತಿ ಆಗುವುದಿಲ್ಲ ಎನ್ನುವ ಮಾತನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಜಾರಿ ಸಭೆಯಲ್ಲೇ ಹೇಳಿದ್ದರು. ಅವತ್ತಿನ‌ ಅವರು ಮಾತು ಇವತ್ತಿಗೂ ಸತ್ಯ ಎಂದರು.
ಬಸವಣ್ಣನವರು 850 ವರ್ಷಗಳ ಹಿಂದೆ “ಇವ ನಾರವ ಎಂದು ಪ್ರಶ್ನಿಸದೆ, ಇವ ನಮ್ಮವ” ಎಂದು ಹೇಳಿ ಅಂದಿದ್ದರು. ಆದರೂ ಇವತ್ತಿಗೂ ನಾವು ಜಾತಿ ಕೇಳುವುದನ್ನು ನಿಲ್ಲಿಸಿಲ್ಲ, ಜಾತಿ-ಧರ್ಮದ ಅನಿಷ್ಠ ತಾರತಮ್ಯವನ್ನು ಇವತ್ತಿಗೂ ಕಾಣುತ್ತೇನೆ ಎಂದರು. ನಾನು ವೈಯುಕ್ತಿಕವಾಗಿ ಬಸವಣ್ಣನವರ ಅಪ್ಪಟ ಹಿಂಬಾಲಕ. ಅದಕ್ಕೇ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋ ಕಡ್ಡಾಯಗೊಳಿಸಿದೆ ಎಂದರು.
ವಿದ್ಯಾವಂತರೂ ಕರ್ಮ‌ಸಿದ್ಧಾಂತವನ್ನು ಆಚರಿಸುವ ದುರಂತವನ್ನು ನಾವು ಕಾಣುತ್ತೇವೆ. ಯಾವ ದೇವರೂ ಬಡವನಾಗಿರು, ಹಸಿದುಕೊಂಡಿರು, ಹರಿದ ಬಟ್ಟೆಯಲ್ಲಿರು ಎಂದು ಹಣೆಬರಹ ಬರೆಯುವುದಿಲ್ಲ. ಇಂಥಾ ಮೌಡ್ಯವನ್ನು ವಿದ್ಯಾವಂತರೂ ಆಚರಿಸುತ್ತಿದ್ದಾರೆ. ಹೀಗಾದಾಗ ಅವರ ವಿದ್ಯೆಗೆ ಗೌರವ ಬರುತ್ತದಾ ಎಂದು ಪ್ರಶ್ನಿಸಿದರು.

ಜಾತಿ ಆಧಾರದಲ್ಲಿ ಮನುಷ್ಯನ ಯೋಗ್ಯತೆ ಅಳೆಯುವ ಪದ್ಧತಿಯನ್ನು ನಮ್ಮ ಸಂವಿಧಾನ ವಿರೋಧಿಸಿತು. ಪ್ರತಿಭೆ ಮತ್ತು ಸಾಮರ್ಥ್ಯ ಪ್ರತಿಯೊಬ್ಬರ ಸ್ವತ್ತು. ಅವಕಾಶಗಳು ಸಿಗಬೇಕಷ್ಟೆ. ಅವಕಾಶ ಸಿಕ್ಕಾಗ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತವೆ. ಇದಕ್ಕೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದರು.
ಸುತ್ತೂರು ಮಠ ಶಿಕ್ಷಣ ಮತ್ತು ಅನ್ನ ದಾಸೋಹ ನಡೆಸುತ್ತಾ ಇಡೀ ಸಮಾಜದ ಆಸ್ತಿಯಾಗಿದೆ. ಜಾತ್ಯತೀತ ಮೌಲ್ಯಗಳು ಸುತ್ತೂರು ಮಠದ ಮೌಲ್ಯಗಳೂ ಆಗಿವೆ ಎಂದರು. ಕಾಯಕ ಮತ್ತು ದಾಸೋಹ ಎರಡೂ ಬಸವಾದಿ ಶರಣರ ಆಶಯವಾಗಿತ್ತು. ಕಾಯಕ ಅಂದ್ರೆ ಉತ್ಪತ್ತಿ, ದಾಸೋಹ ಅಂದರೆ ವಿತರಣೆ ಎಂದು ವಿಶ್ಲೇಷಿಸಿದರು. ನಾವು ಉಚಿತವಾಗಿ ಅಕ್ಕಿ ಕೊಟ್ಟಿದ್ದರಿಂದ ಬಡವರು, ಶ್ರಮಿಕರು ಸೋಮಾರಿಗಳಾಗುತ್ತಿದ್ದಾರೆ ಎನ್ನುವುದು ದುಡಿಯದ ಗ್ರ ಮೈಗಳ್ಳರು, ದುಡಿಯದೆ ಬೊಜ್ಜು ಬೆಳೆಸಿಕೊಂಡವರು ಮಾತ್ರ ಹೇಳಲು ಸಾಧ್ಯ ಎಂದರು.
ಬರಿ ಬಾಯಿ ಮಾತಿನಲ್ಲಿ ಬಸವಣ್ಣ ಮತ್ತು ಅಂಬೇಡ್ಕರ್ ಅವರ ಆಶಯಗಳು ಜಾರಿ ಆಗುವುದಿಲ್ಲ. ಆಶಯಗಳಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಬೇಕು. ಈ ಉದ್ದೇಶದಿಂದಲೇ ನಾವು ಗ್ಯಾರಂಟಿಗಳನ್ನು ಜಾರಿಗೊಳಿಸಿದೆವು ಎಂದು ಕರೆ ನೀಡಿದರು.

ನಾವು ಗ್ಯಾರಂಟಿಗಳನ್ನು ಜಾರಿಗೊಳಿಸಿದಾಗ ರಾಜ್ಯದ ಬೊಕ್ಕಸ ದಿವಾಳಿ ಆಗತ್ತೆ ಎಂದು ಬೊಬ್ಬೆ ಹೊಡೆಯುತ್ತಿದ್ದ ಬಿಜೆಪಿಯವರೇ ಈಗ ನಮ್ಮ ಗ್ಯಾರಂಟಿಗಳನ್ನು ಕಾಪಿ ಹೊಡೆದು ಅವರು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಘೋಷಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಆರ್ಥಿಕ, ಸಾಮಾಜಿಕ ಚಲನೆ ಸಿಕ್ಕಾಗ ಮಾತ್ರ ಜಾತಿ ವ್ಯವಸ್ಥೆ ಹೋಗಲು ಸಾಧ್ಯ. ನಮ್ಮ ಗ್ಯಾರಂಟಿಗಳು ಪ್ರತೀ ಬಡವ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಚಲನೆ ನೀಡಿವೆ. ಜನರ ಕೊಳ್ಳುವ ಶಕ್ತಿಯನ್ನು ನಾವು ಹೆಚ್ಚಿಸಿದ್ದರಿಂದಲೇ ರಾಜ್ಯದ ಆರ್ಥಿಕ ಪರಿಸ್ಥಿತಿ ಕೂಡ ಸದೃಢವಾಗಿದೆ ಎಂದರು. ಬಡವರ ಆರ್ಥಿಕ ಅಸಹಾಯಕತೆಯನ್ನು ಶೋಷಿಸುವ ಮೈಕ್ರೋ ಫೈನಾನ್ಸ್ ಗಳ ಅತಿರೇಕದ ವಸೂಲಿ ನಿಯಂತ್ರಿಸಲು ಸುಗ್ರೀವಾಜ್ಞೆ ಮೂಲಕ ಕಠಿಣ ಕಾನೂನು ತರುತ್ತಿದ್ದೇವೆ ಎಂದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!