ಸ್ಟಾರ್ ಆಫ್ ಮೈಸೂರು ಮತ್ತು ಮೈಸೂರು ಮಿತ್ರ ಪತ್ರಿಕೆಗಳ ಸಂಸ್ಥಾಪಕ-ಸಂಪಾದಕ ಡಾ.ಕೆ.ಬಿ. ಗಣಪತಿ ನಿಧನ

ಸ್ಟಾರ್ ಆಫ್ ಮೈಸೂರು ಮತ್ತು ಮೈಸೂರು ಮಿತ್ರ ಪತ್ರಿಕೆಗಳ ಸಂಸ್ಥಾಪಕ-ಸಂಪಾದಕ ಡಾ.ಕೆ.ಬಿ. ಗಣಪತಿ ನಿಧನ

ಮೈಸೂರು: ಸ್ಟಾರ್ ಆಫ್ ಮೈಸೂರು’ ಮತ್ತು ‘ಮೈಸೂರು ಮಿತ್ರ’ ಪತ್ರಿಕೆಗಳ ಸಂಸ್ಥಾಪಕ-ಸಂಪಾದಕ ಗಣಪತಿ (85) ಇಂದು ಬೆಳಗ್ಗೆ ನಗರದಲ್ಲಿ ನಿಧನರಾದರು. ಅವರು ತಮ್ಮ ಪತ್ನಿ ರಾಲಿ ಗಣಪತಿ, ಪುತ್ರರಾದ ವಿಕ್ರಮ್ ಮುತ್ತಣ್ಣ ಮತ್ತು ಮಿಕ್ಕಿ ಬೋಪಣ್ಣ, ಸೊಸೆಯಂದಿರು, ಮೊಮ್ಮಕ್ಕಳು ಮತ್ತು ಅಪಾರ ಬಂಧುಗಳು, ಸ್ನೇಹಿತರು, ಹಿತೈಷಿಗಳು, ಗೌರವಾನ್ವಿತ ಓದುಗರು, ಜಾಹೀರಾತುದಾರರು ಮತ್ತು ಪೋಷಕರನ್ನು ಅಗಲಿದ್ದಾರೆ. ಪಾರ್ಥಿವ ಶರೀರವನ್ನು ಮಧ್ಯಾಹ್ನ 12 ಗಂಟೆಗೆ ಅವರ ನಿವಾಸಕ್ಕೆ ತರಲಾಗುವುದು.

ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ. ಗಣಪತಿ ಮೂಲತಃ ಕೊಡಗಿನವರು. ಮ್ಮದೇ ಅಂಕಣದ ಮೂಲಕ ಗಮನ ಸೆಳೆದಿದ್ದ ಗಣಪತಿ ಅವರು ಸದಾ ಸುದ್ದಿ ಮನೆಯಲ್ಲಿ ಕ್ರೀಯಾಶೀವಾಗಿದ್ದವರು.
ಹಿರಿಯ ಪತ್ರಕರ್ತರಾದ ಕೆ.ಬಿ.ಗಣಪತಿ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಘನತೆಯಿಂದ ಪತ್ರಿಕೋದ್ಯಮ ನಡೆಸಿದ ಗಣಪತಿ ಅವರ ನಿಧನದಿಂದ
ಸುದ್ದಿಮನೆಯ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶೋಕಿಸಿದ್ದಾರೆ. ಗಣಪತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ವಿಳಾಸ: ‘ಫೋರ್ತ್ ಎಸ್ಟೇಟ್’ #375, 8ನೇ ಮುಖ್ಯ, 9ನೇ ಅಡ್ಡ ಲಲಿತಾದ್ರಿ ರಸ್ತೆ, ಕೆ.ಸಿ. ಲೇಔಟ್, ಮೈಸೂರು – 5700 11]. ಇಂದು (ಜುಲೈ 13) ಸಂಜೆ 4 ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಕುಟುಂಬವನ್ನು ಮೊ.: 98805-31002 ಅಥವಾ 99005-01179 ನಲ್ಲಿ ಸಂಪರ್ಕಿಸಬಹುದು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!