ಹಣ್ಣುಗಳ ರಾಣಿ ಎಂದೇ ಕರೆಸಿಕೊಳ್ಳುವ ಈ ಹಣ್ಣಿನ ಹೆಸರು ಗೊತ್ತಾ?..

ಹಣ್ಣುಗಳು ಎಂದೊಡನೆ ಎಂತವರಿಗಾದರೂ ತಿನ್ನಬೇಕೆಂಬ ಆಸೆ ಆಗುತ್ತದೆ. ನಮಗೆ ಗೊತ್ತೇ ಇರದ ಅದೆಷ್ಟೋ ವಿಶಿಷ್ಟ ಜಾತಿಯ ಹಣ್ಣುಗಳು ಈ ಸೃಷ್ಟಿಯಲ್ಲಿವೆ.ಸಾಮಾನ್ಯವಾಗಿ ಹಣ್ಣುಗಳ ರಾಜ ಎಂದ ಕೇಳಿದ ಕೂಡಲೇ ನೆನಪಿಗೆ ಬರುವುದೇ ಈ ಮಾವಿನಹಣ್ಣು. ಹಾಗಾದ್ರೆ ಹಣ್ಣುಗಳ ರಾಣಿ ಎಂದು ಯಾವ ಹಣ್ಣನ್ನು ಕರೆಯುತ್ತಾರೆ ಎಂದು ನಿಮಗೆ ತಿಳಿದಿದೆಯೇ. ಹಣ್ಣುಗಳ ರಾಣಿ ಕೂಡ ಇದೆಯೇ ಎಂದು ನಿಮಗೆ ಅಚ್ಚರಿಯಾಗಬಹುದು. ಹೌದು, ಈ ಬಗ್ಗೆ ಹೆಚ್ಚಿನವರಿಗೆ ತಿಳಿದೇ ಇಲ್ಲ. ಕ್ವೀನ್ ಆಫ್ ಫ್ರೂಟ್ಸ್ ಎನ್ನುವ ಖ್ಯಾತಿಗೆ ಪಾತ್ರರಾಗಿರುವ ಈ ಹಣ್ಣಿನ ಕುರಿತಾದ ಕೆಲವು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಣ್ಣುಗಳ ರಾಣಿ ಎಂದೇ ಖ್ಯಾತಿ ಪಡೆದಿರುವ ಹಣ್ಣು ಮ್ಯಾಂಗೋಸ್ಟೀನ್. ಇದೊಂದು ಉಷ್ಣವಲಯದಲ್ಲಿ ಬೆಳೆಯಲಾಗುವ ಹಣ್ಣಾಗಿದ್ದು, ಇಲ್ಲಿಯವರೆಗೆ ಈ ಹಣ್ಣಿನ ಹೆಸರನ್ನು ಕೇಳಿರಲೇ ಇಲ್ಲವಲ್ಲ ಎಂದು ನಿಮಗೆ ಅನಿಸಬಹುದು. ಆದರೆ ಇದೇ ಹಣ್ಣುಗಳ ರಾಣಿ.

ಇನ್ನು ಈ ಹಣ್ಣು ಯಾವ ರೀತಿ ಇರುತ್ತದೆ ಎಂಬುದನ್ನು ನೋಡುವುದಾದರೆ, ಈ ಮ್ಯಾಂಗೋಸ್ಟೀನ್ ಹಣ್ಣು ನೋಡುವುದಕ್ಕೆ ಗಾಢ ನೇರಳೆ ಬಣ್ಣದಲ್ಲಿದ್ದು, ಒಳಗೆ ಬಿಳಿ ಬಣ್ಣದ ತಿರುಳನ್ನು ಹೊಂದಿದ್ದು, ನೋಡುವುದಕ್ಕೆ ಮಾತ್ರವಲ್ಲ ರುಚಿ ಕೂಡ ಅಷ್ಟೇ ಅದ್ಭುತ. ಈ ಹಣ್ಣಿನ ಸೇವನೆಯಿಂದ ಆರೋಗ್ಯ ಲಾಭಗಳು ಸಾಕಷ್ಟು ಇವೆ.ಥೈಲ್ಯಾಂಡ್, ಮಲೇಷಿಯಾ, ಇಂಡೋನೇಷ್ಯಾ ಹಾಗೂ ಫಿಲಿಪೈನ್ಸ್ ನಲ್ಲಿ ಹೇರಳವಾಗಿ ಬೆಳೆಯಲಾಗುವ ಈ ಹಣ್ಣು ಋತುಮಾನದ ಹಣ್ಣಾಗಿದೆ. ಕೇರಳ, ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಈ ಹಣ್ಣು ಕಾಣಸಿಗುತ್ತದೆ.

ಭಾರತದಲ್ಲಿ ಈ ಹಣ್ಣು ಮೇ ಆಗಸ್ಟ್ ತಿಂಗಳಿನಲ್ಲಿ ಹೇರಳವಾಗಿ ಕಾಣಸಿಗುತ್ತದೆ. ಇದು ರುಚಿಯಲ್ಲಿ ಮಾವಿನ ಹಣ್ಣಿನಂತೆ ಇದ್ದು, ಹೀಗಾಗಿ ಇದಕ್ಕೆ ಮ್ಯಾಂಗೋಸ್ಟೀನ್ ಎಂಬ ಹೆಸರು ಬಂದಿತಂತೆ. ಅಷ್ಟೇ ಅಲ್ಲದೇ, 1930ರ ದಶಕದಲ್ಲಿ ಅಮೆರಿಕಾದ ಸಸ್ಯಶಾಸ್ತ್ರಜ್ಞ ಡೇವಿಡ್ ಫೇರ್ಚೈಲ್ಡ್ ಮ್ಯಾಂಗೋಸ್ಟೀನ್ಗೆ “ಹಣ್ಣುಗಳ ರಾಣಿ” ಎಂದು ಕರೆದಿದ್ದು, ಅಂದಿನಿಂದ ರಸಭರಿತವಾದ ಈ ಹಣ್ಣು ಈ ಹೆಸರಿನಿಂದಲೇ ಜನಪ್ರಿಯವಾಯಿತು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!