ಹಳದಿ ಮಾರ್ಗದ ಮೆಟ್ರೋ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರುವಾಗಲಿದೆ

ಸ್ವಾತಂತ್ರ್ಯ ದಿನ ರಜೆ, ವಾರಾಂತ್ಯ ಹಿನ್ನೆಲೆಯಲ್ಲಿ ಊರು, ಪ್ರವಾಸಕ್ಕೆ ತೆರಳಿದ ಜನರು ಸೋಮವಾರ (ಆ.18) ಬೆಳಗ್ಗೆ ಬೆಂಗಳೂರಿಗೆ (Bengaluru) ಮರಳುತ್ತಾರೆ. ಇದರಿಂದ ಸಹಜವಾಗಿ ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣಿಕರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ

ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲುಗಳುಬೆಳಿಗ್ಗೆ 5:00 ಗಂಟೆಗೆ ಆರಂಭವಾಗಲಿವೆ. ಮೊದಲ ಮೆಟ್ರೋ ರೈಲು ಸೇವೆ ಆರ್.ವಿ ರಸ್ತೆಯಿಂದ ಡೆಲ್ಯಾ ಎಲೆಕ್ಟ್ರಾನಿಕ್ಸ್, ಬೊಮ್ಮಸಂದ್ರ ನಿಲ್ದಾಣಗಳಿಂದ ಹೊರಡಲಿದೆ. ಈ ವಿಶೇಷ ವ್ಯವಸ್ಥೆ ಕೇವಲ ಸೋಮವಾರಕ್ಕೆ ಮಾತ್ರ ಅನ್ವಯವಾಗುತ್ತದೆ. ಮರುದಿನ ಮಂಗಳವಾರ (ಆ.19) ದಿಂದ ಹಳದಿ ಮಾರ್ಗದ ಮೆಟ್ರೋ ಸೇವೆಗಳು ಎಂದಿನಂತೆ ಬೆಳಿಗ್ಗೆ 6:30 ರಿಂದ ಪ್ರಾರಂಭವಾಗಲಿವೆ.
ಹಿಸುತ್ತವೆ.

ಹಳದಿ ಮಾರ್ಗ ಎಲ್ಲಿಂದ ಎಲ್ಲಿಯವರೆಗೆ ಸಂಚಾರ
ಆರ್​ ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೂ ಸಂಪರ್ಕ ಕಲಿಸಲಾಗಿದ್ದು, ಒಟ್ಟು 19.15 ಕಿಲೋ ಮೀಟರ್ ಉದ್ದದ ಮಾರ್ಗವಾಗಿದೆ. ಬೆಂಗಳೂರಿನ ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿಯಿಂದ ಬೆಂಗಳೂರಿನ ಕೇಂದ್ರ ಭಾಗದ ನಡುವೆ ಸಂಪರ್ಕ ಕೊಂಡಿಯಾಗಿದೆ.

ಹಳದಿ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳಿವೆ. ಹಳದಿ ಮಾರ್ಗದ ರೈಲು 3 ಮೆಟ್ರೋ ಲೈನ್‌ಗೆ ಕೂಡುತ್ತದೆ. ಹಳದಿ ಮಾರ್ಗವು ಹಸಿರು ಮಾರ್ಗ, ಗುಲಾಬಿ, ನೀಲಿ ಮಾರ್ಗಕ್ಕೆಕ್ಕೆ ಕೂಡುತ್ತದೆ. ಜಯದೇವ ಆಸ್ಪತ್ರೆ ನಿಲ್ದಾಣವು ಅತಿ ಎತ್ತರ ಹಾಗೂ ದೊಡ್ಡ ಮೆಟ್ರೋ ನಿಲ್ದಾಣ ಎಂಬ ಖ್ಯಾತಿ ಪಡೆದಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಹಳದಿ ಮಾರ್ಗದ ವಿಶೇಷತೆಗಳೇನು? ಇಲ್ಲಿದೆ ವಿವರ, ಫೋಟೋಸ್​ ನೋಡಿ

ನಮ್ಮ ಮೆಟ್ರೋ ಹಳದಿ ಮಾರ್ಗದ ನಿಲ್ದಾಣಗಳು: ಬೊಮ್ಮಸಂದ್ರ, ಹೆಬ್ಬಗೋಡಿ, ಹುಸ್ಕೂರ್ ರಸ್ತೆ, ಇನ್ಫೋಸಿಸ್‌ ಫೌಂಡೇಶನ್ ಕೋನಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್‌ ಸಿಟಿ, ಬೆರತೇನ ಅಗ್ರಹಾರ, ಹೊಸ ರೋಡ್, ಸಿಂಗಸಂದ್ರ, ಕೂಡ್ಲು ಗೇಟ್, ಹೊಂಗಸಂದ್ರ, ಬೊಮ್ಮನಹಳ್ಳಿ, ಸೆಂಟ್ರಲ್ ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜಯದೇವ ಆಸ್ಪತ್ರೆ, ರಾಗಿ ಗುಡ್ಡ ದೇವಸ್ಥಾನ, ಆರ್‌.ವಿ (ರಾಷ್ಟ್ರೀಯ ವಿದ್ಯಾಲಯ) ರಸ್ತೆ.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!