ಹೆಚ್ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧದ ಭೂ ಒತ್ತುವರಿ ಆರೋಪ ; ತೆರೆವು ಕಾರ್ಯಾಚರಣೆ.

ರಾಮನಗರ :- ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧ ಕೇಳಿ ಬಂದಿರುವ ಭೂಒತ್ತುವರಿ ಆರೋಪ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣ ಸಂಬಂಧ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಇದೀಗ ಕಂದಾಯ ಇಲಾಖೆ ಒತ್ತುವರಿ ತೆರೆವು ಕಾರ್ಯಾಚರಣೆಗೆ ಮುಂದಾಗಿದೆ. ಪ್ರಭಾವಿ ರಾಜಕಾರಣಿಯೊಬ್ಬರ, ಅದರಲ್ಲೂ ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕೆಲವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ಮುಂದಾಗಿರುವ ಅಪರೂಪದ ಪ್ರಕರಣ ಇದಾಗಿದೆ. ಹೆಚ್ಡಿಕೆ ಕುಟುಂಬದ ವಿರುದ್ಧ ಕೇಳಿಬಂದಿರುವ ಭೂಒತ್ತುವರಿ ಆರೋಪ ಸಂಬಂಧ ತನಿಖೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್ಐಟಿ ರಚನೆ ಮಾಡಿದ್ದರು. ಕೇತಗಾನಹಳ್ಳಿಯ ಸರ್ವೆ ನಂ.7, 8, 9, 10, 16, 17, 79 ರಲ್ಲಿ 14 ಎಕರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಕಂದಾಯ ಇಲಾಖೆ, ಸರ್ವೆ ಇಲಾಖೆಯಿಂದ ಜಂಟಿ ಸರ್ವೆ ನಡೆದಿದೆ. ಇದೀಗ ಸರ್ಕಾರಕ್ಕೆ ಸರ್ವೆ ವರದಿ ಸಲ್ಲಿಸಿ ಒತ್ತುವರಿ ತೆರವು ಮಾಡಲು ಇಲಾಖೆ ಮುಂದಾಗಿದೆ. ಇಂದು ಕಂದಾಯ ಇಲಾಖೆ ಅಧಿಕಾರಿಗಳಿಂದ ಒತ್ತುವರಿ ತೆರವು ಸಾಧ್ಯತೆ ಇದೆ. ಒತ್ತುವರಿ ತೆರವಿಗೆ ಕುಮಾರಸ್ವಾಮಿ ತೋಟದ ಮನೆಯ ಮುಂದೆ ಎರಡು ಜೆಸಿಬಿಗಳು ಸಿದ್ಧವಾಗಿವೆ.

 

 

 

 

ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್
ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ ಕುಟುಂಬದವರು ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪವಿದೆ. ಈ ವಿಚಾರವಾಗಿ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ರಚನೆ ಮಾಡಿತ್ತು. ಇದಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಪ್ರಕರಣ ಸಂಬಂಧ ಹೈಕೋರ್ಟಿನಲ್ಲಿ ಸೋಮವಾರ ವಿಚಾರಣೆ ನಡೆದಿತ್ತು. ನ್ಯಾಯಮೂರ್ತಿ ಕೆ ಸೋಮಶೇಖರ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು, ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು.
ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಎಸ್ಐಟಿ ರಚನೆ ಮಾಡಿದ್ದಾರೆ. ಹಾಗಾದರೆ ಕಂದಾಯ ಇಲಾಖೆ ಅಷ್ಟೊಂದು ಶಕ್ತಿಶಾಲಿಯಾಗಿದೆಯೇ? ರಾಜ್ಯ ಸರ್ಕಾರವು ಸಂವಿಧಾನಕ್ಕಿಂತ ಮಿಗಿಲಾಗಿದೆಯೇ? 14 ಎಕರೆ ಭೂ ಒತ್ತುವರಿ ತೆರವು ಮಾಡಲಾಗಿದೆ ಎಂದು ತಿಳಿಸಲಾಗಿದೆ. ಹಾಗಾದರೆ ಉಳಿದ 71 ಎಕರೆ ಭೂಮಿ ಒತ್ತುವರಿಯನ್ನು ತೆರವು ಮಾಡಬೇಕಾಗಿದೆ ಅಲ್ಲವೇ ಎಂದು ವಿಭಾಗಿಯ ಪೀಠ ಸರ್ಕಾರವನ್ನು ಪ್ರಶ್ನಿಸಿತು.
ಇಷ್ಟೇ ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳನ್ನು ಬ್ರೈನ್ ಮ್ಯಾಪಿಂಗ್ಗೆ ಒಳಪಡಿಸಲು ಆದೇಶಿಸಿದರೆ ಸತ್ಯ ಹೊರಬರಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿತ್ತು. ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಇದೀಗ ಕಂದಾಯ ಇಲಾಖೆ ಭೂ ಒತ್ತುವರಿ ತೆರವು ಕಾರ್ಯಚರಣೆಗೆ ಮುಂದಾಗಿದೆ.

 

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!