ಹೆಚ್ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧದ ಭೂ ಒತ್ತುವರಿ ಆರೋಪ ; ತೆರೆವು ಕಾರ್ಯಾಚರಣೆ.

ರಾಮನಗರ :- ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧ ಕೇಳಿ ಬಂದಿರುವ ಭೂಒತ್ತುವರಿ ಆರೋಪ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣ ಸಂಬಂಧ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಇದೀಗ ಕಂದಾಯ ಇಲಾಖೆ ಒತ್ತುವರಿ ತೆರೆವು ಕಾರ್ಯಾಚರಣೆಗೆ ಮುಂದಾಗಿದೆ. ಪ್ರಭಾವಿ ರಾಜಕಾರಣಿಯೊಬ್ಬರ, ಅದರಲ್ಲೂ ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕೆಲವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ಮುಂದಾಗಿರುವ ಅಪರೂಪದ ಪ್ರಕರಣ ಇದಾಗಿದೆ. ಹೆಚ್ಡಿಕೆ ಕುಟುಂಬದ ವಿರುದ್ಧ ಕೇಳಿಬಂದಿರುವ ಭೂಒತ್ತುವರಿ ಆರೋಪ ಸಂಬಂಧ ತನಿಖೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್ಐಟಿ ರಚನೆ ಮಾಡಿದ್ದರು. ಕೇತಗಾನಹಳ್ಳಿಯ ಸರ್ವೆ ನಂ.7, 8, 9, 10, 16, 17, 79 ರಲ್ಲಿ 14 ಎಕರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಕಂದಾಯ ಇಲಾಖೆ, ಸರ್ವೆ ಇಲಾಖೆಯಿಂದ ಜಂಟಿ ಸರ್ವೆ ನಡೆದಿದೆ. ಇದೀಗ ಸರ್ಕಾರಕ್ಕೆ ಸರ್ವೆ ವರದಿ ಸಲ್ಲಿಸಿ ಒತ್ತುವರಿ ತೆರವು ಮಾಡಲು ಇಲಾಖೆ ಮುಂದಾಗಿದೆ. ಇಂದು ಕಂದಾಯ ಇಲಾಖೆ ಅಧಿಕಾರಿಗಳಿಂದ ಒತ್ತುವರಿ ತೆರವು ಸಾಧ್ಯತೆ ಇದೆ. ಒತ್ತುವರಿ ತೆರವಿಗೆ ಕುಮಾರಸ್ವಾಮಿ ತೋಟದ ಮನೆಯ ಮುಂದೆ ಎರಡು ಜೆಸಿಬಿಗಳು ಸಿದ್ಧವಾಗಿವೆ.

 

 

 

 

ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್
ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ ಕುಟುಂಬದವರು ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪವಿದೆ. ಈ ವಿಚಾರವಾಗಿ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ರಚನೆ ಮಾಡಿತ್ತು. ಇದಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಪ್ರಕರಣ ಸಂಬಂಧ ಹೈಕೋರ್ಟಿನಲ್ಲಿ ಸೋಮವಾರ ವಿಚಾರಣೆ ನಡೆದಿತ್ತು. ನ್ಯಾಯಮೂರ್ತಿ ಕೆ ಸೋಮಶೇಖರ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು, ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು.
ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಎಸ್ಐಟಿ ರಚನೆ ಮಾಡಿದ್ದಾರೆ. ಹಾಗಾದರೆ ಕಂದಾಯ ಇಲಾಖೆ ಅಷ್ಟೊಂದು ಶಕ್ತಿಶಾಲಿಯಾಗಿದೆಯೇ? ರಾಜ್ಯ ಸರ್ಕಾರವು ಸಂವಿಧಾನಕ್ಕಿಂತ ಮಿಗಿಲಾಗಿದೆಯೇ? 14 ಎಕರೆ ಭೂ ಒತ್ತುವರಿ ತೆರವು ಮಾಡಲಾಗಿದೆ ಎಂದು ತಿಳಿಸಲಾಗಿದೆ. ಹಾಗಾದರೆ ಉಳಿದ 71 ಎಕರೆ ಭೂಮಿ ಒತ್ತುವರಿಯನ್ನು ತೆರವು ಮಾಡಬೇಕಾಗಿದೆ ಅಲ್ಲವೇ ಎಂದು ವಿಭಾಗಿಯ ಪೀಠ ಸರ್ಕಾರವನ್ನು ಪ್ರಶ್ನಿಸಿತು.
ಇಷ್ಟೇ ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳನ್ನು ಬ್ರೈನ್ ಮ್ಯಾಪಿಂಗ್ಗೆ ಒಳಪಡಿಸಲು ಆದೇಶಿಸಿದರೆ ಸತ್ಯ ಹೊರಬರಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿತ್ತು. ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಇದೀಗ ಕಂದಾಯ ಇಲಾಖೆ ಭೂ ಒತ್ತುವರಿ ತೆರವು ಕಾರ್ಯಚರಣೆಗೆ ಮುಂದಾಗಿದೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!