ಹೈಕೋರ್ಟ್ ವರ್ಚುವಲ್ ವಿಚಾರಣೆಗೆ ಟಾಯ್ಲೆಟ್ನಲ್ಲಿ ಕುಳಿತು ಹಾಜರಾದ ಆರೋಪಿ;

ಕೊವಿಡ್ -19 ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ವರ್ಚುವಲ್ ಮೀಟಿಂಗ್ ದೈನಂದಿನ ಜೀವನದ ಭಾಗವಾಗಿದ್ದು, ವೈಯಕ್ತಿಕ ಮತ್ತು ವೃತ್ತಿಪರ ಸ್ಥಳಗಳ ನಡುವಿನ ಗೆರೆಗಳನ್ನು ಮಸುಕುಗೊಳಿಸುತ್ತಿವೆ. ಆನ್ಲೈನ್ ಮೀಟಿಂಗ್ ಸಮಯದಲ್ಲಿ ಬೆಡ್ರೂಂನಿಂದ ವಿಡಿಯೊ ಕರೆಗಳಿಗೆ ಹಾಜರಾಗುವುದು, ಮೀಟಿಂಗ್ ವೇಳೆಯೂ ಬೇರೆ ಕೆಲಸ ಮಾಡುವುದು ಅಸಾಮಾನ್ಯವೇನಲ್ಲ. ಆದರೆ, ಗುಜರಾತ್ ಹೈಕೋರ್ಟ್ ವಿಚಾರಣೆಗೆ ಶೌಚಾಲಯದಿಂದಲೇ ವ್ಯಕ್ತಿಯೊಬ್ಬರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುವ ಮೂಲಕ ನೆಟ್ಟಿಗರನ್ನು ಬೆರಗುಗೊಳಿಸಿದ್ದಾರೆ. ಇಂತಹ ಘಟನೆಗಳು ಕಾನೂನಿಗೆ ಮಾಡುವ ಅವಮಾನ ಎಂದು ಹಲವರು ಆಕ್ರೋಶ ಹೊರಹಾಕಿದ್ದಾರೆ.

ಗುಜರಾತ್ ಹೈಕೋರ್ಟ್ನ ವರ್ಚುವಲ್ ವಿಚಾರಣೆಗೆ ಹಾಜರಾದ ವ್ಯಕ್ತಿಯೊಬ್ಬರು ಟಾಯ್ಲೆಟ್ ಸೀಟಿನ ಮೇಲೆ ಕುಳಿತು ವಿಚಾರಣೆಯಲ್ಲಿ ಭಾಗಿಯಾದ ಕ್ಷಣವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಜೂನ್ 20ರಂದು ನ್ಯಾಯಮೂರ್ತಿ ನಿರ್ಜಾರ್ ಎಸ್ ದೇಸಾಯಿ ಅವರ ಪೀಠದ ಮುಂದೆ ಈ ಘಟನೆ ನಡೆದಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಆ ವ್ಯಕ್ತಿ “ಸಮದ್ ಬ್ಯಾಟರಿ” ಎಂಬ ಹೆಸರಿನಲ್ಲಿ ವರ್ಚುವಲ್ ಕೋರ್ಟ್ ವಿಚಾರಣೆಗೆ ಲಾಗಿನ್ ಆಗಿದ್ದಾನೆ. ಆತ ಕುತ್ತಿಗೆಗೆ ಬ್ಲೂಟೂತ್ ಇಯರ್ಫೋನ್ ಧರಿಸಿರುವುದು ಕಂಡುಬಂದಿದೆ. ಕೋರ್ಟ್ ವಿಚಾರಣೆ ಪ್ರಾರಂಭವಾಗುತ್ತಿದ್ದಂತೆ ಅವನು ಆರಂಭದಲ್ಲಿ ತನ್ನ ಫೋನ್ ಅನ್ನು ದೂರದಲ್ಲಿ ಇರಿಸಿದನು. ಆಗ ಆತ ಟಾಯ್ಲೆಟ್ನಲ್ಲಿ ಕುಳಿತಿರುವುದು ಕಂಡಿತು. ಹಾಗೇ, ಬಾತ್ರೂಂನಿಂದ ಹೊರಬರುವ ಮೊದಲು ಅವನು ತನ್ನನ್ನು ತಾನು ಒರೆಸಿಕೊಳ್ಳುವುದನ್ನು ದೃಶ್ಯಗಳು ತೋರಿಸುತ್ತವೆ. ಅವನು ಮತ್ತೊಂದು ರೂಂನಲ್ಲಿ ಕುಳಿತು ವಿಚಾರಣೆಗೆ ಹಾಜರಾಗುವ ಮೊದಲು ಸ್ವಲ್ಪ ಹೊತ್ತು ಮೊಬೈಲನ್ನು ಮೇಜಿನ ಮೇಲಿಟ್ಟು ಕಣ್ಮರೆಯಾಗುತ್ತಾನೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!