ಹೈ ವೋಲೇಜ್ ಕದನದಲ್ಲಿ ಜಯದ ನಗೆ ಬೀರಿದ ಭಾರತ ತಂಡಕ್ಕೆ ಸಿದ್ದರಾಮಯ್ಯ, ಡಿಕೆಶಿ ಅಭಿನಂದನೆ.

ಮೈಸೂರು: ಪಾಕಿಸ್ತಾನ ವಿರುದ್ಧ ಭಾರತ ಗೆಲುವು ಸಾಧಿಸುತ್ತಿದ್ದಂತೆ ಭಾರತದ ಸೆಲೆಬ್ರಿಟಿಗಳು, ರಾಜಕಾರಣಿಗಳು, ಕ್ರಿಕೆಟ್ ಪ್ರೇಮಿಗಳಿಂದ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಪ್ರಮುಖ ರಾಜಕೀಯ ನಾಯಕರು ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ.

ಚಾಂಪಿಯನ್ ಟ್ರೋಫಿ ಪಂದ್ಯಾಕೂಟದಲ್ಲಿ ಪಾಕಿಸ್ತಾನದ ವಿರುದ್ಧದ ಇಂದಿನ ಅಭೂತಪೂರ್ವ ಗೆಲುವನ್ನು ನೋಡಿ ಆನಂದಿಸಿದೆ. ಭಾರತದ ಲಯಬದ್ದ ಬೌಲಿಂಗ್, ವಿರಾಟ್ ಕೊಹ್ಲಿಯ ಅಮೋಘ ಬ್ಯಾಟಿಂಗ್, ತಂಡದ ಸಂಘಟಿತ ಹೋರಾಟ ಪಾಕಿಸ್ತಾನವನ್ನು ಬಗ್ಗುಬಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಜಯದ ನಗೆ ಬೀರಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು, ನಮ್ಮವರ ಈ ಗೆಲುವಿನ ಓಟ ಪಂದ್ಯಾವಳಿಯುದ್ದಕ್ಕೂ ಹೀಗೆಯೇ ಮುಂದುವರೆಯಲಿ, ಭಾರತ ಚಾಂಪಿಯನ್ ಆಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಸಹ ತಂಡವನ್ನು ಅಭಿನಂದಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ

ಶಹಬ್ಬಾಶ್ ಹುಡುಗ್ರಾ! ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಪಾಕಿಸ್ತಾನ ವಿರುದ್ಧ ಅಭೂತಪೂರ್ವ ಗೆಲುವು ಸಾಧಿಸಿದ ಟೀಂ ಇಂಡಿಯಾಗೆ ಹೃದಯ ಪೂರ್ವಕ ಅಭಿನಂದನೆಗಳು. ಇದು ಇಡೀ ದೇಶವೇ ಹೆಮ್ಮೆಪಡುವ ಗೆಲುವಾಗಿದೆ. ವಿರಾಟ್ ಕೊಹ್ಲಿ ಅವರ ಶತಕದಾಟ, ಶ್ರೇಯಸ್ ಅಯ್ಯರ್ ಅವರ ಬ್ಯಾಟಿಂಗ್ ರೋಮಾಂ ಚಕ ಅನುಭವ ನೀಡಿತು. ಜೈಹೋ ಟೀಂ ಇಂಡಿಯಾ ಎಂದು ಟೀಟಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!