ಹೊಸ ವರ್ಷದ ಸಂಭ್ರಮಾಚರಣೆಗೆ ಬಾರ್ಗೆ ಕಳ್ಳತನ ಮಾಡಲು ಹೋಗಿ ಕಂಠಪೂರ್ತಿ ಕುಡಿದು ಅಲ್ಲೇ ಮಲಗಿದ ಕಳ್ಳ

ತೆಲಂಗಾಣ :- ಹೊಸ ವರ್ಷದ ಸಂಭ್ರಮಾಚರಣೆಗೆ ದುಡಿಲ್ಲದೇ ಕಾರಣ ತೆಲಂಗಾಣ ವ್ಯಕ್ತಿಯೊಬ್ಬ ಮದ್ಯದ ಅಂಗಡಿಗೆ ನುಗ್ಗಿ ಮದ್ಯದ ಬಾಟಲಿಗಳನ್ನು ದೋಚಿದ್ದಾನೆ. ಕದ್ದ ಬಾಟಲಿಯೊಂದಿಗೆ ಬಾರ್ನಿಂದ ಹೊರಗಡೆ ಬರುವ ಮುನ್ನ ಅಲ್ಲಿದ್ದ ಒಂದಿಷ್ಟು ಮದ್ಯವನ್ನು ಕುಡಿದು ಮತ್ತೆ ಹೋಗುವ ಎಂದು ಪ್ಲಾನ್ ಮಾಡಿದ್ದಾನೆ. ಆದರೆ ಕಂಠಪೂರ್ತಿ ಕುಡಿದ ಕಳ್ಳ ಅಲ್ಲೇ ಮಲಗಿದ್ದು, ಮರುದಿನ ಬೆಳಿಗ್ಗೆ ಅಂಗಡಿಯ ಮಾಲೀಕನ ಕೈ ಸಿಕ್ಕಿಬಿದ್ದಿದ್ದಾನೆ. ತೆಲಂಗಾಣದ ಮೇದಕ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಭಾನುವಾರ ರಾತ್ರಿ ‘ಕನಕದುರ್ಗಾ ವೈನ್ಸ್’ ಹೆಸರಿನ ಅಂಗಡಿಗೆ ನುಗ್ಗಿ ಛಾವಣಿಯ ಕೆಲವು ಹೆಂಚುಗಳನ್ನು ಕಿತ್ತು ಸಿಸಿಟಿವಿ ಕ್ಯಾಮೆರಾ ನಿಷ್ಕ್ರಿಯಗೊಳಿಸಿ ದುಬಾರಿ ಬೆಲೆಯ ಮದ್ಯದ ಬಾಟಲಿಗಳನ್ನು ಕದ್ದಿದ್ದ ಕಳ್ಳ, ಇನ್ನೇನು ಅಂಗಡಿಯಿಂದ ಪಾರಾಗಬೇಕು ಎನ್ನುವಷ್ಟರಲ್ಲಿ ಚಳಿಗೆ ಸ್ಪಲ್ಪ ಕುಡಿದು ಮತ್ತೆ ಹೋಗುವ ಎಂದು ಯೋಚಿಸಿದ್ದಾನೆ. ಆದರೆ ಮದ್ಯದ ಆಸೆಗೆ ಕಂಠಪೂರ್ತಿ ಕುಡಿದಿದ್ದಾನೆ. ಸೋಮವಾರ ಮುಂಜಾನೆ ಅಂಗಡಿ ಮಾಲೀಕ ಅಂಗಡಿಯ ಬಾಗಿಲು ತೆಗೆದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ಕಂಡು ಶಾಕ್ ಆಗಿದ್ದಾರೆ.

ಸೋಮವಾರ ಬೆಳಗ್ಗೆ ಪೊಲೀಸರು ಸ್ಥಳಕ್ಕೆ ಬಂದ ನಂತರ ಘಟನೆಯ ದೃಶ್ಯಗಳು ಆನ್ಲೈನ್ನಲ್ಲಿ ಕಾಣಿಸಿಕೊಂಡಿವೆ. ಕಳ್ಳ ಮದ್ಯದಂಗಡಿಯಲ್ಲಿ ನೆಲದ ಮೇಲೆ ಮಲಗಿದ್ದು ನಗದು ಮತ್ತು ಮದ್ಯದ ಬಾಟಲಿಗಳು ಅವನ ಸುತ್ತಲೂ ಬಿದ್ದಿರುವುದನ್ನು ತೋರಿಸುವ ಫೋಟೋ ವೈರಲ್ ಆಗಿದೆ.
ಈ ಕುರಿತು ಮಾಹಿತಿ ನೀಡಿದ ಸಬ್ ಇನ್ಸ್ಪೆಕ್ಟರ್ ಅಹ್ಮದ್ ಮೊಯಿನುದ್ದೀನ್ “ಕಳ್ಳನನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಂಧಿಸಲಾಗಿದೆ. ಆತನ್ನು ಆಂಬ್ಯುಲೆನ್ಸ್ನಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಸಲು ಅವನಿಗೆ ಪ್ರಜ್ಞೆ ಮರಳಲು ಪೊಲೀಸ್ ತಂಡ ಕಾಯುತ್ತಿದೆ ” ಎಂದು ಹೇಳಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!