ಹೊಸ ವರ್ಷಾಚರಣೆ ಪ್ರಯುಕ್ತ ಬೆಂಗಳೂರಿನಲ್ಲಿ ಬಿಗಿ ಭದ್ರತೆ, 2 ಕೋಟಿ ರೂ. ಅಧಿಕ ಮೌಲ್ಯದ ಡ್ರಗ್ಸ್​​​​​ ಜಪ್ತಿ.

ಬೆಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ ಬೆಂಗಳೂರಿನಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಮೂವರು ವಿದೇಶಿ ಡ್ರಗ್ ಪೆಡ್ಲರ್‌ಗಳು ಸೇರಿದಂತೆ 70 ಜನರನ್ನು ಬಂಧಿಸಲಾಗಿದೆ ಮತ್ತು ಎರಡೂವರೆ ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಲಾಗಿದೆ. ರಾತ್ರಿ 1 ಗಂಟೆ ಒಳಗಾಗಿ ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಪಬ್‌ಗಳು ಮುಚ್ಚಬೇಕು ಎಂದು ಸೂಚಿಸಲಾಗಿದೆ. ನಗರದ ಮೇಲ್ಸೇತುವೆಗಳನ್ನು ಬಂದ್ ಮಾಡಲಾಗುತ್ತದೆ ಮತ್ತು ಹೆಚ್ಚಿನ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಪೊಲೀಸ್​ ಆಯುಕ್ತ ಬಿ. ದಯಾನಂದ್​ ತಿಳಿಸಿದರು.
ಹೊಸ ವರ್ಷಾಚರಣೆ ದಿನ ಬೆಂಗಳೂರು ನಗರದಲ್ಲಿ ಯಾವುದೇ ರೀತಿಯಾದ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಮಾದಕ ಜಾಲದ ಮೇಲೂ ಕೂಡ ಕಣ್ಣಿಡಲಾಗಿದೆ. ಈಗಾಗಲೇ‌ ಮೂವರು ವಿದೇಶಿ ಡ್ರಗ್ ಪೆಡ್ಲರ್ ಸೇರಿದಂತೆ‌ 70 ಜನರನ್ನು ಬಂಧಿಸಲಾಗಿದೆ. ಎರಡೂವರೆ ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್​​ ಸೇರಿದಂತೆ, ವಿವಿಧ ಮಾದಕ ವಸ್ತು ಜಪ್ತಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.

ಕಮಿಷನರ್​ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೆಸ್ಟೋರೆಂಟ್, ಹೋಟೆಲ್ ಮತ್ತು ಪಬ್​ಗಳನ್ನು ಹೊಸ ವರ್ಷಾಚರಣೆ ದಿನ (ಡಿಸೆಂಬರ್​.31) ರಂದು ರಾತ್ರಿ 1 ಗಂಟೆಯ ಒಳಗಾಗಿ ಬಂದ್​​ ಮಾಡಬೇಕೆಂದು ಸೂಚನೆ ನೀಡಲಾಗಿದೆ. ಅಂದು, ನಶೆಯಲ್ಲಿ ಮೇಲ್ಸೇತುವೆಗಳ ಮೇಲೆ ರಂಪಾಟ ಮಾಡುವ, ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಇರುತ್ತದೆ. ಹೀಗಾಗಿ, ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಮೇಲ್ಸೇತುವೆ ಸೇರಿದಂತೆ ನಗರದ ಎಲ್ಲ ಮೇಲ್ಸೇತುವೆಗಳನ್ನು ಬಂದ್​ ಮಾಡಲಾಗುತ್ತದೆ. ಬೆಂಗಳೂರು ಹೊರ ವಲಯದಲ್ಲಿ ನಡೆಯುವ ರೇವ್ ಪಾರ್ಟಿ ಸೇರಿದಂತೆ ಎಲ್ಲ ಪಾರ್ಟಿಗಳ ಮೇಲೆ ಕಣ್ಣಿಡಲಾಗಿದೆ. ಇನ್ನು, ನಗರದಲ್ಲಿ ಎಂಜಿ ರೋಡ್, ಬ್ರಿಗೆಡ್ ರೋಡ್, ಕೋರಮಂಗಲ, ಇಂದಿರಾನಗರ ಸೇರಿ ಎಲ್ಲಿ ಹೆಚ್ಚು ಜನರು ಸೇರುತ್ತಾರೆ ಅಲ್ಲಿ ಸೇಫ್ಟಿ ಐಲ್ಯಾಂಡ್, ಸಿಸಿಟಿವಿ, ಡ್ರೋಣ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅಲ್ಲದೇ, ಶ್ವಾನದಳದಿಂದ ತಪಾಸಣೆ ಮಾಡಲಾಗುತ್ತೆ. ಹೆಚ್ಚಿನ ಲೈಟಿಂಗ್ ವ್ಯವಸ್ಥೆ, ಬ್ಯಾರಿಕೇಡ್ ವ್ಯವಸ್ಥೆ, ಅಗ್ನಿಶಾಮಕ ದಳ ವಾಹನ ಇರುತ್ತದೆ ಎಂದು ತಿಳಿಸಿದರು.
ಬ್ರಿಗೆಡ್, ಎಂಜಿ ರೋಡ್​​ನಲ್ಲಿ ಏಕಮುಖ ಸಂಚಾರವಿರುತ್ತದೆ. ಡಿಸೆಂಬರ್​ 31ರಂದು ರಾತ್ರಿ 11 ಗಂಟೆಯಿಂದ ಎಂಜಿ ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ದ್ವಾರಗಳನ್ನು ಮುಚ್ಚಲಾಗುತ್ತದೆ. ಹತ್ತಿರದ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಲ್ಲಿ ರೈಲುಗಳು ನಿಲ್ಲುತ್ತವೆ ಎಂದು ಮಾಹಿತಿ ನೀಡಿದರು. ಬೆಂಗಳೂರು ಸೈಬರ್ ವಂಚನೆಗೆ ಒಳಗಾಗಿದ್ದರೆ ಟೋಲ್ ಫ್ರೀ ನಂಬರ್ 1930ಗೆ ಕರೆ ಮಾಡಿ ಮಾಹಿತಿ ನೀಡಿ. ಅದನ್ನ ಹೊರತುಪಡಿಸಿ ಪೊಲೀಸ್ ಸಿಬ್ಬಂದಿಯ ವೈಯಕ್ತಿಕ ನಂಬರ್​​ಗೆ ಕರೆ ಮಾಡಬೇಡಿ. ಏಕೆಂದರೆ, ಅಧಿಕಾರಿಗಳು ಬೇರೆ ಕೆಲಸದಲ್ಲಿ ನಿರತರಾಗಿದ್ದರೆ ಕೂಡಲೇ ಪ್ರತಿಕ್ರಿಯೆ ನೀಡಲು ಸಾಧ್ಯವಾಗುವುದಿಲ್ಲ. ಹೀಗಾಗಿ, 1930 ಕರೆ ಮಾಡಿ ಮಾಹಿತಿ ನೀಡಿ ಎಂದು ಮನವಿ ಮಾಡಿಕೊಂಡರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!