ಹೋಟೆಲ್ನ ಬಿಸಿಬಿಸಿ ತಿಂಡಿ ಪಾರ್ಸೆಲ್ಗೆ ಬಳಸುವ ಪ್ಲಾಸ್ಟಿಕ್ ನಿಷೇಧ!

ಬೆಂಗಳೂರು :- (ಕೆಎಂಶಿ) ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ಇನ್ನು ಮುಂದೆ ಪ್ಲಾಸ್ಟಿಕ್ ಬಳಸದಂತೆ ರಾಜ್ಯ ಸರ್ಕಾರ ನಿಷೇಧಿಸಿದೆ.
ಈ ಸಂಬಂಧ ಸುದ್ದಿಗಾರರಿಗೆ ಮಾಹಿತಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್.
ಇಡ್ಲಿ, ವಡೆ, ಸಾಂಬಾರ್, ಕಾಫಿ, ಟೀ ಸೇರಿದಂತೆ ಪ್ಲಾಸ್ಟಿಕ್ ಚೀಲ ಗಳಲ್ಲಿ ಬಿಸಿ ಬಿಸಿ ತಿಂಡಿ ಪಾರ್ಸೆಲ್ ನೀಡುವುದು ಮಾರಣಾಂತಿಕ ರೋಗಕ್ಕೆ ಕಾರಣವಾಗಲಿದೆ ಎಂದಿ ದ್ದಾರೆ. ಇಡ್ಲಿ ತಯಾರಿಕೆ ವೇಳೆ ಪ್ಲಾಸ್ಟಿಕ್ ಬಳಸುತ್ತಿರುವುದು ಅನೇಕ ರೋಗಗಳಿಗೆ ಎಡೆಮಾಡಿದೆ, ಅದರಲ್ಲೂ, ರಸ್ತೆ ಬದಿಯ ತಿಂಡಿ ಅಂಗಡಿ ಗಳು ಪ್ಲಾಸ್ಟಿಕ್ ಬಳಕೆ ಮಾಡಿ ಆಹಾರ ತಯಾರಿಕೆ ಹಾಗೂ ಪಾರ್ಸಲ್ಗಳಿಗೆ ಬಳಸುತ್ತಿರುವುದು ಅಪಾಯಕಾರಿಯಾಗಿದೆ.
ಹೋಟೆಲ್ ಇಡ್ಲಿ ಮತ್ತಿತರ ಆಹಾರ ಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ ಅಪಾಯಕಾರಿ ಪ್ಲಾಸ್ಟಿಕ್ ಅಂಶಗಳಿರುವುದು ಪತ್ತೆಯಾಗಿದೆ. ಪ್ರಯೋಗಾಲಯದ ಪರೀಕ್ಷೆ ವೇಳೆ ಇಡ್ಲಿ ಮತ್ತಿತರ ಆಹಾರಗಳಲ್ಲಿ ಕಾರ್ಸಿನೋಜೆನಿಕ್ ವಿಷ ಅಂಶ ಪತ್ತೆಯಾಗಿದೆ. ಈ ಹಾನಿ ಕಾರಕ ಅಂಶದಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಆಗಿರುವುದು ಪತ್ತೆಯಾಗಿದೆ. ಮೊದಲು ಇಡ್ಲಿಯನ್ನು ಹತ್ತಿ ಬಟ್ಟೆ ಬಳಸಿ ಬೇಯಿಸುತ್ತಿದ್ದರು, ಆದರೆ, ನಂತರ ಸುಲಭ ವಿಧಾನ ಕಂಡುಕೊಂಡು ಹೋಟೆಲ್ ಉದ್ಯಮ ಪ್ಲಾಸ್ಟಿಕ್ ಬಳಕೆಗೆ ಮೊರೆ ಹೋಗಿದೆ.

ಜಿಟಿ ದೇವೇಗೌಡರ ಮುನಿಸಿಗೆ ಕಾರಣ ಏನು ?
ಇದು ಇಡ್ಲಿ ತಯಾರಿಕೆಗೆ ಮಾತ್ರ ಸೀಮಿತವಾಗಿಲ್ಲ, ಪ್ಲಾಸ್ಟಿಕ್ ಬಳಕೆಯಿಂದ ಆಹಾರ ಅಸುರಕ್ಷಿತ ಎಂಬುದು ಪ್ರಯೋ ಗಾಲದಿಂದ ದೃಢಪಟ್ಟಿದೆ. ಪ್ಲಾಸ್ಟಿಕ್ ಹಾಳೆ ಶಾಖಕ್ಕೆ ಒಡ್ಡಿಕೊಳ್ಳುವುದರಿಂದ ಹಾನಿಕಾರಕ ವಸ್ತು ಹೊರ ಸೂಸುತ್ತದೆ. ಇದು ಕ್ಯಾನ್ಸರ್ ರೋಗಕ್ಕೆ ಮೂಲ ಕಾರಣ ಎಂದು ತಜ್ಞರು ಹೇಳಿದ್ದಾರೆ. ತಜ್ಞರು ನೀಡಿರುವ ಶಿಫಾ ರಸಿನ ಮೇರೆಗೆ ಆಹಾರ ಪದಾರ್ಥಗಳ ಉತ್ಪಾ ದನಾ ಕೇಂದ್ರ ಹೋಟೆಲ್ ಹಾಗೂ ರೆಸ್ಟೋ ರೆಂಟ್ಗಳಲ್ಲಿ ಪ್ಲಾಸ್ಟಿಕ್ ನಿಷೇಧ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗುಂಡೂರಾವ್ ತಿಳಿಸಿದರು. ಆದರೆ ದುರ ದೃಷ್ಟಕರ ಸಂಗತಿ ಎಂದರೆ, ಮೈಸೂರಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ದ್ದರೂ ತಯಾರಕರು, ಮಾರಾಟಗಾರರು ಕೇರ್ ಮಾಡುತ್ತಿಲ್ಲ. ಪಾಲಿಕೆ ಅಧಿಕಾರಿ ಗಳು ಕಣ್ಣಾಮುಚ್ಚಾಲೆ ಆಡುತ್ತಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!