10 ತಿಂಗಳ ಬಳಿಕ ಹಾಸನಕ್ಕೆ ಬಂದ ಭವಾನಿ ರೇವಣ್ಣಗೆ ಹೂವಿನ ಸುರಿಮಳೆ……

ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಹೈಕೋರ್ಟ್ನಿಂದ ರಿಲೀಫ್ ಸಿಕ್ಕ ಬೆನ್ನಲ್ಲೇ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ 10 ತಿಂಗಳ ಬಳಿಕ ಹಾಸನ ಜಿಲ್ಲೆಗೆ ಎಂಟ್ರಿ ಕೊಟ್ಟಿದ್ದಾರೆ. ಅದು ಸಹ ಹಾಸನ ಜನತೆ ಅವರನ್ನ ಹೂವಿನ ಸುರಿಮಳೆಯಿಂದ ಹಾಗೂ ಆರತಿ ಎತ್ತುವ ಮುಖಾಂತರ ಬರ ಮಾಡಿಕೊಂಡಿದ್ದಾರೆ.

ಹಾಸನಕ್ಕೆ ಬರುತ್ತಿದ್ದಂತೆ ಜಿಲ್ಲೆಯ ಗಡಿಭಾಗ ಹಿರಿಸಾವೆ, ಚನ್ನರಾಯಪಟ್ಟಣ ಹಾಗೂ ಹೊಳೆನರಸೀಪುರದಲ್ಲಿ ಜೆಡಿಎಸ್ ಕಾರ್ಯಕರ್ತರು ಭವಾನಿ ರೇವಣ್ಣ ಅವರನ್ನು ಸ್ವಾಗತಿಸಿದ್ದಾರೆ. ಹೂಮಳೆ ಸುರಿಸಿ, ಆರತಿ ಬೆಳಗಿ ಬರಮಾಡಿಕೊಂಡಿದ್ದಾರೆ. ಪಟಾಕಿ ಸಿಡಿಸಿ, ಜೈಕಾರ ಕೂಗಿ ಸಂಭ್ರಮಿಸಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಮೈಸೂರು ಮತ್ತು ಹಾಸನ ಜಿಲ್ಲೆ ಪ್ರವೇಸಿಸಲು ಭವಾನಿ ರೇವಣ್ಣಗೆ ಹೈಕೋರ್ಟ್ ರಿಲೀಫ್ ನೀಡಿತ್ತು.

ಈ ಹಿಂದೆ ಭವಾನಿ ರೇವಣ್ಣ ಅವರು ಮೈಸೂರು ಮತ್ತು ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು. ಇದೀಗ ಷರತ್ತನ್ನು ಸಡಿಲಿಸಿದ್ದು, ಹಾಸನ ಮತ್ತು ಮೈಸೂರು ಜಿಲ್ಲೆಗೆ ಪ್ರವೇಶಿಸಲು ಅನುಮತಿ ನೀಡಿದೆ. ಆದರೆ, ಸಂತ್ರಸ್ತೆ ಮತ್ತು ಪ್ರಕರಣದ ಸಾಕ್ಷಿಗಳ ಮನೆಯ 500 ಮೀ. ಸುತ್ತಳತೆಯಲ್ಲಿ ಪ್ರವೇಶಿಸುವಂತಿಲ್ಲ ಎಂದು ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ಪೀಠ ಹೊಸ ಷರತ್ತು ವಿಧಿಸಿದೆ.

ತನ್ನ ತಾಯಿ ಕಣ್ಮರೆಯಾಗಿದ್ದಾರೆಂದು ಸಂತ್ರಸ್ತೆ ಪುತ್ರ ಕೆ.ಆರ್.ನಗರ ಠಾಣೆಯಲ್ಲಿ ದೂರು ನೀಡಿದ್ದರು. ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಾಗಿತ್ತು. ದೂರಿನನ್ವಯ ತನಿಖೆ ನಡೆಸಿದ್ದ ಪೊಲೀಸರು, ಹೆಚ್.ಡಿ. ಅವರಿಗೆ ಸಂಬಂಧಿಸಿದ್ದೆಂದು ಹೇಳಲಾದ ತೋಟದ ಮನೆಯೊಂದರಿಂದ ಆಕೆಯನ್ನು ರಕ್ಷಿಸಿದ್ದರು. ಅಪಹರಣಕ್ಕೆ ಭವಾನಿ ರೇವಣ್ಣ ಅವರ ಕಾರು ಬಳಕೆಯಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದ್ದರಿಂದ ಭವಾನಿ ರೇವಣ್ಣ ಹಾಗೂ ಅವರ ಕಾರು ಚಾಲಕ ಅಜಿತ್ ವಿರುದ್ಧವೂ ದೂರು ದಾಖಲಾಗಿತ್ತು.

ದೂರು ದಾಖಲಾಗುತ್ತಿದ್ದಂತೆ ನಿರೀಕ್ಷಣಾ ಜಾಮೀನಿಗಾಗಿ ಭವಾನಿ ರೇವಣ್ಣ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿತ್ತು. ಆದ್ರೆ ಭವಾನಿ ರೇವಣ್ಣ ಅವರು ಮೈಸೂರು ಮತ್ತು ಹಾಸನ ಜಿಲ್ಲೆಗೆ ಪ್ರವೇಶಿಸದಂತೆ ಷರತ್ತು ವಿಧಿಸಿತ್ತು. ಇದೀಗ ಅದೆಲ್ಲದಕ್ಕೂ ತೆರೆ ಎಳೆಯುವಂತೆ ಭವಾನಿ ರೇವಣ್ಣ ಕೋರ್ಟಿನ ಆದೇಶದ ಮೇರೆಗೆ ಮತ್ತೆ ಹಾಸನಕ್ಕೆ ಹಿಂದಿರುಗಿದ್ದಾರೆ. ಅಲ್ಲದೆ ಮೈಸೂರಿಗೂ ತೆರಳಬಹುದು ಎಂಬ ಆದೇಶವನ್ನು ತಮ್ಮೊಟ್ಟಿಗೆ ತಂದಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!