10 ತಿಂಗಳ ಬಳಿಕ ಹಾಸನಕ್ಕೆ ಬಂದ ಭವಾನಿ ರೇವಣ್ಣಗೆ ಹೂವಿನ ಸುರಿಮಳೆ……

ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಹೈಕೋರ್ಟ್ನಿಂದ ರಿಲೀಫ್ ಸಿಕ್ಕ ಬೆನ್ನಲ್ಲೇ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ 10 ತಿಂಗಳ ಬಳಿಕ ಹಾಸನ ಜಿಲ್ಲೆಗೆ ಎಂಟ್ರಿ ಕೊಟ್ಟಿದ್ದಾರೆ. ಅದು ಸಹ ಹಾಸನ ಜನತೆ ಅವರನ್ನ ಹೂವಿನ ಸುರಿಮಳೆಯಿಂದ ಹಾಗೂ ಆರತಿ ಎತ್ತುವ ಮುಖಾಂತರ ಬರ ಮಾಡಿಕೊಂಡಿದ್ದಾರೆ.

ಹಾಸನಕ್ಕೆ ಬರುತ್ತಿದ್ದಂತೆ ಜಿಲ್ಲೆಯ ಗಡಿಭಾಗ ಹಿರಿಸಾವೆ, ಚನ್ನರಾಯಪಟ್ಟಣ ಹಾಗೂ ಹೊಳೆನರಸೀಪುರದಲ್ಲಿ ಜೆಡಿಎಸ್ ಕಾರ್ಯಕರ್ತರು ಭವಾನಿ ರೇವಣ್ಣ ಅವರನ್ನು ಸ್ವಾಗತಿಸಿದ್ದಾರೆ. ಹೂಮಳೆ ಸುರಿಸಿ, ಆರತಿ ಬೆಳಗಿ ಬರಮಾಡಿಕೊಂಡಿದ್ದಾರೆ. ಪಟಾಕಿ ಸಿಡಿಸಿ, ಜೈಕಾರ ಕೂಗಿ ಸಂಭ್ರಮಿಸಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಮೈಸೂರು ಮತ್ತು ಹಾಸನ ಜಿಲ್ಲೆ ಪ್ರವೇಸಿಸಲು ಭವಾನಿ ರೇವಣ್ಣಗೆ ಹೈಕೋರ್ಟ್ ರಿಲೀಫ್ ನೀಡಿತ್ತು.

ಈ ಹಿಂದೆ ಭವಾನಿ ರೇವಣ್ಣ ಅವರು ಮೈಸೂರು ಮತ್ತು ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು. ಇದೀಗ ಷರತ್ತನ್ನು ಸಡಿಲಿಸಿದ್ದು, ಹಾಸನ ಮತ್ತು ಮೈಸೂರು ಜಿಲ್ಲೆಗೆ ಪ್ರವೇಶಿಸಲು ಅನುಮತಿ ನೀಡಿದೆ. ಆದರೆ, ಸಂತ್ರಸ್ತೆ ಮತ್ತು ಪ್ರಕರಣದ ಸಾಕ್ಷಿಗಳ ಮನೆಯ 500 ಮೀ. ಸುತ್ತಳತೆಯಲ್ಲಿ ಪ್ರವೇಶಿಸುವಂತಿಲ್ಲ ಎಂದು ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ಪೀಠ ಹೊಸ ಷರತ್ತು ವಿಧಿಸಿದೆ.

ತನ್ನ ತಾಯಿ ಕಣ್ಮರೆಯಾಗಿದ್ದಾರೆಂದು ಸಂತ್ರಸ್ತೆ ಪುತ್ರ ಕೆ.ಆರ್.ನಗರ ಠಾಣೆಯಲ್ಲಿ ದೂರು ನೀಡಿದ್ದರು. ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಾಗಿತ್ತು. ದೂರಿನನ್ವಯ ತನಿಖೆ ನಡೆಸಿದ್ದ ಪೊಲೀಸರು, ಹೆಚ್.ಡಿ. ಅವರಿಗೆ ಸಂಬಂಧಿಸಿದ್ದೆಂದು ಹೇಳಲಾದ ತೋಟದ ಮನೆಯೊಂದರಿಂದ ಆಕೆಯನ್ನು ರಕ್ಷಿಸಿದ್ದರು. ಅಪಹರಣಕ್ಕೆ ಭವಾನಿ ರೇವಣ್ಣ ಅವರ ಕಾರು ಬಳಕೆಯಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದ್ದರಿಂದ ಭವಾನಿ ರೇವಣ್ಣ ಹಾಗೂ ಅವರ ಕಾರು ಚಾಲಕ ಅಜಿತ್ ವಿರುದ್ಧವೂ ದೂರು ದಾಖಲಾಗಿತ್ತು.

ದೂರು ದಾಖಲಾಗುತ್ತಿದ್ದಂತೆ ನಿರೀಕ್ಷಣಾ ಜಾಮೀನಿಗಾಗಿ ಭವಾನಿ ರೇವಣ್ಣ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿತ್ತು. ಆದ್ರೆ ಭವಾನಿ ರೇವಣ್ಣ ಅವರು ಮೈಸೂರು ಮತ್ತು ಹಾಸನ ಜಿಲ್ಲೆಗೆ ಪ್ರವೇಶಿಸದಂತೆ ಷರತ್ತು ವಿಧಿಸಿತ್ತು. ಇದೀಗ ಅದೆಲ್ಲದಕ್ಕೂ ತೆರೆ ಎಳೆಯುವಂತೆ ಭವಾನಿ ರೇವಣ್ಣ ಕೋರ್ಟಿನ ಆದೇಶದ ಮೇರೆಗೆ ಮತ್ತೆ ಹಾಸನಕ್ಕೆ ಹಿಂದಿರುಗಿದ್ದಾರೆ. ಅಲ್ಲದೆ ಮೈಸೂರಿಗೂ ತೆರಳಬಹುದು ಎಂಬ ಆದೇಶವನ್ನು ತಮ್ಮೊಟ್ಟಿಗೆ ತಂದಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!