11 ವರ್ಷಗಳ ನಂತರ ದೇವಾಲಯದ ಬಾಗಿಲು ತೆರೆದು ಪೂಜೆ; ಜಾತಿ ಮರೆತು ಒಂದಾದ ಜನ….

ಮೈಸೂರು: ಜಾತಿ ಮರೆತು ಸಮುದಾಯಗಳು ಒಂದಾದ ಪರಿಣಾಮ 11 ವರ್ಷಗಳ ನಂತರ ದೇವಾಲಯದ ಬಾಗಿಲು ತೆರೆದು ಮಾರಮ್ಮನಿಗೆ ಶುಕ್ರವಾರ ಸಂಜೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಮೈಸೂರು ತಾಲೂಕಿನ ಜಯಪುರ ಹೋಬಳಿಯ ಮಾರ್ಬಳ್ಳಿ ಗ್ರಾಮದಲ್ಲಿ, ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಐವರು ಮುಖಂಡರೊಂದಿಗೆ ಯಶಸ್ವಿಯಾಗಿ ಶಾಂತಿಸಭೆ ನಡೆಸಲಾಯಿತು. ಬಳಿಕ ಗ್ರಾಮದಲ್ಲಿ 11 ವರ್ಷಗಳ ನಂತರ ಸಂತಸ ಮನೆ ಮಾಡಿದೆ.
ಈ ಮಾರಮ್ಮ ದೇವಾಲಯಕ್ಕೆ ಹಿಂದೆ ದಲಿತರ ಪ್ರವೇಶಕ್ಕೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಭಾರಿ ವಿವಾದ ಉಂಟಾಗಿ, ಬಾಗಿಲು ಮುಚ್ಚಲಾಗಿತ್ತು

ಕಳೆದ 11ವರ್ಷದಿಂದ ಮಾರಮ್ಮನ ದೇವಾಲಯದಲ್ಲಿ ಯಾವುದೇ ಪೂಜೆ ಪುನಸ್ಕಾರಗಳು ನಡೆದಿರಲಿಲ್ಲ. ದೇವಾಲಯದ ಬಾಗಿಲು ತೆರೆಸಲು ಸಾಕಷ್ಟು ಬಾರಿ ಸಂಧಾನ ಸಭೆಗಳು ನಡೆದಿತ್ತು. ಆದರೂ ಗ್ರಾಮದಲ್ಲಿ ಒಮ್ಮತದ ತೀರ್ಮಾನಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಇದೀಗ ತಹಸೀಲ್ದಾರ್ ಕಚೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಶಾಂತಿ ಸಭೆ ಕರೆಯಲಾಗಿತ್ತು.
ಎಲ್ಲ ಕೋಮಿನ 5 ಮುಖಂಡರನ್ನು ಸಭೆಗೆ ಆಹ್ವಾನಿಸಲಾಗಿತ್ತು. ಸುಧೀರ್ಘ ಚರ್ಚೆ ನಂತರ ಮಾರಮ್ಮ ದೇವಾಲಯ ಬಾಗಿಲು ಮತ್ತೆ ತೆರೆಯುವ ನಿರ್ಧಾರಕ್ಕೆ ಬರಲಾಯಿತು. ಶುಕ್ರವಾರ ಸಂಜೆ ಎಲ್ಲಾ ಸಮುದಾಯದ ಮುಖಂಡರು ಹಾಗೂ ತಹಸೀಲ್ದಾರ್ ಸಮ್ಮುಖದಲ್ಲಿ ದೇವಾಲಯದ ಬೀಗ ತೆರೆದು ಒಳ ಪ್ರವೇಶಿಸಿ ಗ್ರಾಮದ ದೇವತೆಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ವಿವಾದಕ್ಕೆ ಅಂತ್ಯ ಹಾಡಲಾಗಿದೆ.

“11 ವರ್ಷಗಳ ಹಿಂದೆ ಮಾಚ್೯ ತಿಂಗಳಿನಲ್ಲಿ ಮಾರಮ್ಮನ ಹಬ್ಬ ಸಂಭ್ರಮದಿಂದ ನಡೆಯುತ್ತಿತ್ತು. ದೇವಾಲಯಕ್ಕೆ ದಲಿತರು ಬಂದು ಪೂಜೆ ಮಾಡಿಸಿದರು ಎಂಬ ಕಾರಣಕ್ಕೆ ಸವರ್ಣಿಯರು, ಹಬ್ಬದ ವೇಳೆ ದೇವಸ್ಥಾನದ ಬಾಗಿಲು ಮುಚ್ಚಿದ್ದರು. ಇದಾದ ಬಳಿ ಹಲವು ಬಾರಿ ಮನವಿ ಮಾಡಿದ್ದರೂ, ಪ್ರಯೋಜನವಾಗಿರಲಿಲ್ಲ. ಈಗ ತಹಶೀಲ್ದಾರ್ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ದೇವಾಲಯ ಬಾಗಿಲು ತೆರೆದು ಪೂಜೆ ಸಲ್ಲಿಸಲಾಗಿದೆ” ಎಂದು ಅಲ್ಲಿನ ರೈತ ಮುಖಂಡ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!