11 ವರ್ಷಗಳ ನಂತರ ದೇವಾಲಯದ ಬಾಗಿಲು ತೆರೆದು ಪೂಜೆ; ಜಾತಿ ಮರೆತು ಒಂದಾದ ಜನ….

ಮೈಸೂರು: ಜಾತಿ ಮರೆತು ಸಮುದಾಯಗಳು ಒಂದಾದ ಪರಿಣಾಮ 11 ವರ್ಷಗಳ ನಂತರ ದೇವಾಲಯದ ಬಾಗಿಲು ತೆರೆದು ಮಾರಮ್ಮನಿಗೆ ಶುಕ್ರವಾರ ಸಂಜೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಮೈಸೂರು ತಾಲೂಕಿನ ಜಯಪುರ ಹೋಬಳಿಯ ಮಾರ್ಬಳ್ಳಿ ಗ್ರಾಮದಲ್ಲಿ, ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಐವರು ಮುಖಂಡರೊಂದಿಗೆ ಯಶಸ್ವಿಯಾಗಿ ಶಾಂತಿಸಭೆ ನಡೆಸಲಾಯಿತು. ಬಳಿಕ ಗ್ರಾಮದಲ್ಲಿ 11 ವರ್ಷಗಳ ನಂತರ ಸಂತಸ ಮನೆ ಮಾಡಿದೆ.
ಈ ಮಾರಮ್ಮ ದೇವಾಲಯಕ್ಕೆ ಹಿಂದೆ ದಲಿತರ ಪ್ರವೇಶಕ್ಕೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಭಾರಿ ವಿವಾದ ಉಂಟಾಗಿ, ಬಾಗಿಲು ಮುಚ್ಚಲಾಗಿತ್ತು

ಕಳೆದ 11ವರ್ಷದಿಂದ ಮಾರಮ್ಮನ ದೇವಾಲಯದಲ್ಲಿ ಯಾವುದೇ ಪೂಜೆ ಪುನಸ್ಕಾರಗಳು ನಡೆದಿರಲಿಲ್ಲ. ದೇವಾಲಯದ ಬಾಗಿಲು ತೆರೆಸಲು ಸಾಕಷ್ಟು ಬಾರಿ ಸಂಧಾನ ಸಭೆಗಳು ನಡೆದಿತ್ತು. ಆದರೂ ಗ್ರಾಮದಲ್ಲಿ ಒಮ್ಮತದ ತೀರ್ಮಾನಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಇದೀಗ ತಹಸೀಲ್ದಾರ್ ಕಚೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಶಾಂತಿ ಸಭೆ ಕರೆಯಲಾಗಿತ್ತು.
ಎಲ್ಲ ಕೋಮಿನ 5 ಮುಖಂಡರನ್ನು ಸಭೆಗೆ ಆಹ್ವಾನಿಸಲಾಗಿತ್ತು. ಸುಧೀರ್ಘ ಚರ್ಚೆ ನಂತರ ಮಾರಮ್ಮ ದೇವಾಲಯ ಬಾಗಿಲು ಮತ್ತೆ ತೆರೆಯುವ ನಿರ್ಧಾರಕ್ಕೆ ಬರಲಾಯಿತು. ಶುಕ್ರವಾರ ಸಂಜೆ ಎಲ್ಲಾ ಸಮುದಾಯದ ಮುಖಂಡರು ಹಾಗೂ ತಹಸೀಲ್ದಾರ್ ಸಮ್ಮುಖದಲ್ಲಿ ದೇವಾಲಯದ ಬೀಗ ತೆರೆದು ಒಳ ಪ್ರವೇಶಿಸಿ ಗ್ರಾಮದ ದೇವತೆಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ವಿವಾದಕ್ಕೆ ಅಂತ್ಯ ಹಾಡಲಾಗಿದೆ.

“11 ವರ್ಷಗಳ ಹಿಂದೆ ಮಾಚ್೯ ತಿಂಗಳಿನಲ್ಲಿ ಮಾರಮ್ಮನ ಹಬ್ಬ ಸಂಭ್ರಮದಿಂದ ನಡೆಯುತ್ತಿತ್ತು. ದೇವಾಲಯಕ್ಕೆ ದಲಿತರು ಬಂದು ಪೂಜೆ ಮಾಡಿಸಿದರು ಎಂಬ ಕಾರಣಕ್ಕೆ ಸವರ್ಣಿಯರು, ಹಬ್ಬದ ವೇಳೆ ದೇವಸ್ಥಾನದ ಬಾಗಿಲು ಮುಚ್ಚಿದ್ದರು. ಇದಾದ ಬಳಿ ಹಲವು ಬಾರಿ ಮನವಿ ಮಾಡಿದ್ದರೂ, ಪ್ರಯೋಜನವಾಗಿರಲಿಲ್ಲ. ಈಗ ತಹಶೀಲ್ದಾರ್ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ದೇವಾಲಯ ಬಾಗಿಲು ತೆರೆದು ಪೂಜೆ ಸಲ್ಲಿಸಲಾಗಿದೆ” ಎಂದು ಅಲ್ಲಿನ ರೈತ ಮುಖಂಡ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು