11 ಮಕ್ಕಳು ಕೆಮ್ಮಿನ ಸಿರಪ್ ಸೇವಿಸಿ ಸಾ*

ನವದೆಹಲಿ: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಇತ್ತೀಚೆಗೆ 11 ಮಕ್ಕಳು ಸಾವನ್ನಪ್ಪಿದ ಘಟನೆಗೆ ಕೆಮ್ಮಿನ ಔಷಧ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಔಷಧದ ಮಾದರಿಯನ್ನು ಪರೀಕ್ಷಿಸಿ ಕ್ಲೀನ್‌ ಚಿಟ್ ನೀಡಿವೆ. ಮಕ್ಕಳ ಸಾವಿಗೆ ಔಷಧ ಕಾರಣವಲ್ಲ ಎಂದು ಸಷ್ಟಪಡಿಸಿವೆ.

ಮಧ್ಯಪ್ರದೇಶದಲ್ಲಿ 9 ಮಕ್ಕಳು ಸಾವು: ಕಳೆದ 15 ದಿನದಲ್ಲಿ ಮಧ್ಯ ಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ 9 ಮಕ್ಕಳು ಮೃತಪಟ್ಟಿವೆ. ಈ ಮಕ್ಕಳ ಸಾವಿಗೆ ಕೋಲ್ಟಿಫ್ ಮತ್ತು ನೆಕ್‌ಸ್ಟೋ-ಡಿಎಸ್ ಕೆಮ್ಮಿನ ಔಷಧ ಸೇವನೆಯಿಂದ ಉಂಟಾದ ಕಿಡ್ನಿ ವೈಫಲ್ಯ ಕಾರಣ ಎಂದು ಪೋಷಕರು ಮತ್ತು ಸ್ಥಳೀಯರು ಆರೋಪಿಸಿದ್ದಾರೆ. ಆದರೆ ಮಧ್ಯ ಪ್ರದೇಶದ ಆರೋಗ್ಯ ಇಲಾಖೆಯು ಔಷಧದ ಪರೀಕ್ಷೆ ವೇಳೆ ಯಾವುದೇ ವಿಷಪೂರಿತ ಅಂಶ ಪತ್ತೆಯಾಗಿಲ್ಲ. ಔಷಧದ ನಿಷೇಧದ ಪ್ರಶ್ನೆಯೇ ಇಲ್ಲ. ಮಕ್ಕಳ ಸಾವಿಗೆ ಸಮಿತಿ ರಚಿಸಲಾಗಿದ್ದು, ತನಿಖೆ ಆರಂಭವಾಗಿದೆ ಎಂದು ಸ್ಪಷ್ಟಪಡಿಸಿದೆ.
ರಾಜಸ್ಥಾನದಲ್ಲಿ 2 ಮಕ್ಕಳ ಸಾವು: ರಾಜ ಸ್ಥಾನದ ಸಿಕಾರ್ ಮತ್ತು ಭರತ್‌ ಪುರ ಜಿಲ್ಲೆಗಳಲ್ಲಿ ತಲಾ ಒಂದೊಂದು ಸಾವಾಗಿದ್ದು, ಇಲ್ಲಿಯೂ ಸಹ ಔಷಧವೇ ಕಾರಣ ಎಂಬ ಆರೋಪವಿದೆ.

 

 

 

 

 

 

ತಮಿಳುನಾಡಿನಲ್ಲಿ ನಿಷೇಧ
ಮಕ್ಕಳ ಸಾವಿನ ಬೆನ್ನಲ್ಲೇ ತಮಿಳುನಾಡು ಸರ್ಕರ ಕೋಲ್ಟಿಫ್ ಸಿರಪ್ ಮೇಲೆ ನಿಷೇಧ ಹೇರಿದೆ. ತಮಿಳುನಾಡು ಔಷಧ ನಿಯಂತ್ರಣಾ ಮಂಡಳಿ ಈ ಕ್ರಮ ಕೈಗೊಂಡಿದೆ. ಘಟನೆ ಕುರಿತು ತನಿಖೆ ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ.

ಆರೋಪವಿದೆ. ಆದರೆ ಅಲ್ಲಿನ ಸರ್ಕಾರವು ವೈದ್ಯರಿಗೆ ಕ್ಲೀನ್‌ ಚಿಟ್ ನೀಡಿದೆ. ರಾಜಸ್ಥಾನ ಔಷಧ ನಿಯಂತ್ರಣ ಮಂಡಳಿಯು ಔಷಧಗಳ ಪೂರೈಕೆಗೆ ತಾತ್ಕಾಲಿಕ ತಡೆ ನೀಡಿದೆ. ಎರಡೂ ಪ್ರಕರಣಗಳಲ್ಲಿಯೂ ಪೋಷಕರು ವೈದ್ಯರ ಸೂಚನೆಯಿಲ್ಲದೆಯೇ ಔಷಧ ನೀಡಿದ್ದೇ ಕಾರಣ ಎಂದು ಆರೋಗ್ಯ ಇಲಾಖೆ ಹೇಳಿದೆ.

2 ವರ್ಷದ ಮಕ್ಕಳಿಗೆ ಕೆಮ್ಮಿನೌಷಧ ಬೇಡ: ಕೇಂದ್ರದ ಎಚ್ಚರಿಕೆ
ಅತ್ತ ಕೇಂದ್ರ ಸರ್ಕಾರ ಕಫ್‌ಸಿರಪ್‌ನಿಂದ ಮಕ್ಕಳ ಸಾವು ಸಂಭವಿಸಿದೆ ಎಂಬ ಆರೋಪವನ್ನು ತಿರಸ್ಕರಿಸಿದೆ. ವೈದ್ಯಕೀಯ ಮತ್ತು ವೈಜ್ಞಾನಿಕ ಪರೀಕ್ಷೆಯಲ್ಲಿ ಸಿರಪ್‌ನಲ್ಲಿ ಯಾವುದೇ ವಿಷಪೂರಿತ ಅಂಶಗಳು ಪತ್ತೆಯಾಗಿಲ್ಲ. ಈ ತನಿಖೆ ಆರಂಭವಾಗಿದೆ ಎಂದು ಸ್ಪಷ್ಟಪಡಿಸಿದೆ.

ಜತೆಗೆ 2 ವರ್ಷದ ಒಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ಕೊಡಬಾರದೆಂದು ಆದೇಶಿಸಿದೆ. ಜೊತೆಗೆ ಕೆಮ್ಮಿನ ಔಷಧದ ಪರಿಣಾಮ ಎಂಬ ಯಾವುದೇ ಪ್ರಕರಣ ಬಂದಲ್ಲಿ ಖಾಸಗಿ ವೈದ್ಯರು ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಬೇಕು ಎಂದು ಆದೇಶ ಹೊರಡಿಸಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!