11 ವರ್ಷಗಳ ನಂತರ ದೇವಾಲಯದ ಬಾಗಿಲು ತೆರೆದು ಪೂಜೆ; ಜಾತಿ ಮರೆತು ಒಂದಾದ ಜನ….

ಮೈಸೂರು: ಜಾತಿ ಮರೆತು ಸಮುದಾಯಗಳು ಒಂದಾದ ಪರಿಣಾಮ 11 ವರ್ಷಗಳ ನಂತರ ದೇವಾಲಯದ ಬಾಗಿಲು ತೆರೆದು ಮಾರಮ್ಮನಿಗೆ ಶುಕ್ರವಾರ ಸಂಜೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಮೈಸೂರು ತಾಲೂಕಿನ ಜಯಪುರ ಹೋಬಳಿಯ ಮಾರ್ಬಳ್ಳಿ ಗ್ರಾಮದಲ್ಲಿ, ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಐವರು ಮುಖಂಡರೊಂದಿಗೆ ಯಶಸ್ವಿಯಾಗಿ ಶಾಂತಿಸಭೆ ನಡೆಸಲಾಯಿತು. ಬಳಿಕ ಗ್ರಾಮದಲ್ಲಿ 11 ವರ್ಷಗಳ ನಂತರ ಸಂತಸ ಮನೆ ಮಾಡಿದೆ.
ಈ ಮಾರಮ್ಮ ದೇವಾಲಯಕ್ಕೆ ಹಿಂದೆ ದಲಿತರ ಪ್ರವೇಶಕ್ಕೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಭಾರಿ ವಿವಾದ ಉಂಟಾಗಿ, ಬಾಗಿಲು ಮುಚ್ಚಲಾಗಿತ್ತು

ಕಳೆದ 11ವರ್ಷದಿಂದ ಮಾರಮ್ಮನ ದೇವಾಲಯದಲ್ಲಿ ಯಾವುದೇ ಪೂಜೆ ಪುನಸ್ಕಾರಗಳು ನಡೆದಿರಲಿಲ್ಲ. ದೇವಾಲಯದ ಬಾಗಿಲು ತೆರೆಸಲು ಸಾಕಷ್ಟು ಬಾರಿ ಸಂಧಾನ ಸಭೆಗಳು ನಡೆದಿತ್ತು. ಆದರೂ ಗ್ರಾಮದಲ್ಲಿ ಒಮ್ಮತದ ತೀರ್ಮಾನಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಇದೀಗ ತಹಸೀಲ್ದಾರ್ ಕಚೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಶಾಂತಿ ಸಭೆ ಕರೆಯಲಾಗಿತ್ತು.
ಎಲ್ಲ ಕೋಮಿನ 5 ಮುಖಂಡರನ್ನು ಸಭೆಗೆ ಆಹ್ವಾನಿಸಲಾಗಿತ್ತು. ಸುಧೀರ್ಘ ಚರ್ಚೆ ನಂತರ ಮಾರಮ್ಮ ದೇವಾಲಯ ಬಾಗಿಲು ಮತ್ತೆ ತೆರೆಯುವ ನಿರ್ಧಾರಕ್ಕೆ ಬರಲಾಯಿತು. ಶುಕ್ರವಾರ ಸಂಜೆ ಎಲ್ಲಾ ಸಮುದಾಯದ ಮುಖಂಡರು ಹಾಗೂ ತಹಸೀಲ್ದಾರ್ ಸಮ್ಮುಖದಲ್ಲಿ ದೇವಾಲಯದ ಬೀಗ ತೆರೆದು ಒಳ ಪ್ರವೇಶಿಸಿ ಗ್ರಾಮದ ದೇವತೆಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ವಿವಾದಕ್ಕೆ ಅಂತ್ಯ ಹಾಡಲಾಗಿದೆ.

“11 ವರ್ಷಗಳ ಹಿಂದೆ ಮಾಚ್೯ ತಿಂಗಳಿನಲ್ಲಿ ಮಾರಮ್ಮನ ಹಬ್ಬ ಸಂಭ್ರಮದಿಂದ ನಡೆಯುತ್ತಿತ್ತು. ದೇವಾಲಯಕ್ಕೆ ದಲಿತರು ಬಂದು ಪೂಜೆ ಮಾಡಿಸಿದರು ಎಂಬ ಕಾರಣಕ್ಕೆ ಸವರ್ಣಿಯರು, ಹಬ್ಬದ ವೇಳೆ ದೇವಸ್ಥಾನದ ಬಾಗಿಲು ಮುಚ್ಚಿದ್ದರು. ಇದಾದ ಬಳಿ ಹಲವು ಬಾರಿ ಮನವಿ ಮಾಡಿದ್ದರೂ, ಪ್ರಯೋಜನವಾಗಿರಲಿಲ್ಲ. ಈಗ ತಹಶೀಲ್ದಾರ್ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ದೇವಾಲಯ ಬಾಗಿಲು ತೆರೆದು ಪೂಜೆ ಸಲ್ಲಿಸಲಾಗಿದೆ” ಎಂದು ಅಲ್ಲಿನ ರೈತ ಮುಖಂಡ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!