14 ತಿಂಗಳ ಮಗು ವಿಕ್ಸ್ ಡಬ್ಬದ ಮುಚ್ಚಳ ನುಂಗಿ ಸಾ* ; 18ವರ್ಷಗಳ ಬಳಿಕ ಜನಿಸಿದ ಮಗುವಿನ ದುರಂತ ಅಂತ್ಯ

ರಾಜಸ್ಥಾನ: ಆಟವಾಡುತ್ತಲೇ ವಿಕ್ಸ್ ಡಬ್ಬದ ಮುಚ್ಚಳ ನುಂಗಿ 14 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದಿದೆ. ಮದುವೆಯಾಗಿ 18 ವರ್ಷಗಳ ಬಳಿಕ ಹುಟ್ಟಿದ ಮಗು ಈಗ ದುರಂತ ಅಂತ್ಯ ಕಂಡಿದ್ದು, ಪೋಷಕರ ಆಕ್ರೋಶ ಮುಗಿಲು ಮುಟ್ಟಿದೆ.

ಸರೆಡಿ ಗ್ರಾಮದ ನಿವಾಸಿ ಹೀರೆನ್ ಜೋಶಿ ಅವರ ಮಗ ಮಾನ್ವಿಕ್(14 ತಿಂಗಳು) ಸೋಮವಾರ ರಾತ್ರಿ ಮನೆಯಲ್ಲಿದ್ದ ವಿಕ್ಸ್ ಡಬ್ಬಿಯ ಜೊತೆಗೆ ಆಟವಾಡುತ್ತಿದ್ದನು. ಮಗು ಆಟವಾಡುತ್ತಿರುವುದನ್ನು ಗಮನಿಸದ ಪೋಷಕರು ತಮ್ಮದೇ ಕೆಲಸದಲ್ಲಿ ತೊಡಗಿದ್ದಾರೆ. ಆದರೆ ಇದಕ್ಕಿದ್ದಂತೆ ಮಗು ಉಸಿರಾಡಲು ಸಾಧ್ಯವಾಗದೇ ನೆಲದಲ್ಲಿ ಬಿದ್ದು ಹೊರಲಾಡುತ್ತಿರುವುದು ಕಂಡುಬಂದಿದೆ. ಈ ವೇಳೆ ಮಗುವಿನ ಪೋಷಕರು ಪರಿಶೀಲಿಸಿದಾಗ ಗಂಟಲಲ್ಲಿ ವಿಕ್ಸ್ ಡಬ್ಬದ ಮುಚ್ಚಳ ಪತ್ತೆಯಾಗಿದೆ. ಪ್ರಾರಂಭದಲ್ಲಿ ಮಗುವಿನ ಪೋಷಕರು ಮುಚ್ಚಳ ತೆಗೆಯಲು ಪ್ರಯತ್ನಿಸಿದ್ದಾರೆ, ಆದರೆ ಸಾಧ್ಯವಾಗದೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಿದ್ದಾರೆ. ಆದರೆ ಅಲ್ಲಿ ವೈದ್ಯರು ಸಿಗದ ಕಾರಣ ಪೋಷಕರು ಮಗುವನ್ನು ಬಾಂಸ್ವಾಡ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗಲೇ ದಾರಿ ಮಧ್ಯೆ ಮಗು ಉಸಿರು ಚೆಲ್ಲಿದೆ.
ವೈದ್ಯರಿಲ್ಲದ ಕಾರಣ ಸಕಾಲಕ್ಕೆ ಚಿಕಿತ್ಸೆ ದೊರೆಯದೆ ಮಗು ಪ್ರಾಣ ಕಳೆದುಕೊಂಡಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ತಡರಾತ್ರಿ ಕುಟುಂಬಸ್ಥರು ಹಾಗೂ ಸ್ಥಳೀಯರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದ್ದಾರೆ. ಮೃತ ಮಗುವಿನ ತಂದೆ ಹಿರೇನ್ ಜೋಶಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕ ರಾಗಿದ್ದು, ಇವರಿಗೆ ಈಗಾಗಲೇ ಎರಡು ಹೆಣ್ಣು ಮಕ್ಕಳಿದ್ದಾರೆ. ಆದರೆ ಗಂಡು ಮಗನಿಗಾಗಿ 18ವರ್ಷಗಳಿಂದ ಹಾತೊರೆಯುತ್ತಿದ್ದರು. ಅದರಂತೆ ಗಂಡು ಮಗು ಜನಿಸಿದ್ದು, ಇದೀಗ ಮಗುವಿನ ಅಕಾಲಿಕ ಸಾವು ತೀವ್ರ ಅಘಾತ ಉಂಟುಮಾಡಿದೆ.

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂ*ಟೌಟ್‌ನಲ್ಲಿ ಮೂವರು ಮೃ*ತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!