ಏರ್ ಇಂಡಿಯಾ ವಿಮಾನ ದುರಂತದ ವೇಳೆ ಟೀ ಅಂಗಡಿ ಬಳಿ ನಿಂತಿದ್ದ 14 ವರ್ಷದ ಬಾಲಕ ಸಾ*ವು!

ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತದ ವೇಳೆ ಅಲ್ಲೇ ಪಕ್ಕದ ಟೀ ಸ್ಟಾಲ್ ಬಳಿ ನಿಂತಿದ್ದ 14 ವರ್ಷದ ಬಾಲಕ ಬೆಂಕಿಯ ತೀವ್ರತೆಗೆ ಸಿಲುಕಿ ದಾರುಣ ಅಂತ್ಯ ಕಂಡಿದ್ದಾನೆ.

 

 

 

 

 

 

ಆಕಾಶ್ (14) ಮೃತ ಬಾಲಕ. ಬಿಜೆ ಹಾಸ್ಟೆಲ್ನ ಮುಂಭಾಗ ಆಕಾಶ್ ಕುಟುಂಬವು ಟೀ ಅಂಗಡಿ ಇಟ್ಟುಕೊಂಡಿದ್ದರು. ಆಕಾಶ್ ತಾಯಿಗೆ ತಿಂಡಿ ಕೊಡಲು ಅಂಗಡಿ ಬಳಿ ಹೋಗಿದ್ದ. ವಿಮಾನ ದುರಂತದ ವೇಳೆ ಆಕಾಶ್ ಟೀ ಅಂಗಡಿಯ ಮುಂದೆ ನಿಂತಿದ್ದ. ಇದ್ದಕ್ಕಿದ್ದಂತೆ ಸ್ಫೋಟದಿಂದ ದೊಡ್ಡ ಮಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಆಕಾಶ್ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.

 

 

 

 

 

 

 

ಆಕಾಶ್ನನ್ನು ಕಳೆದುಕೊಂಡ ಸಹೋದರ ಕಲ್ಪೇಶ್ ಆಕ್ರಂದನ ಮುಗಿಲು ಮುಟ್ಟಿದೆ. ನನ್ನ ದೊಡ್ಡಣ್ಣ ನನಗೆ ಕರೆ ಮಾಡಿ ವಿಚಾರ ತಿಳಿಸಿದ್ದರು. ನಾನು ಆಟೋ ಓಡಿಸುತ್ತಿದ್ದೆ. ಬೆಂಕಿ ತೀವತ್ರೆಗೆ ಗಾಯಗೊಂಡಿದ್ದ ನನ್ನ ತಾಯಿಯನ್ನು ಆಸ್ಪತ್ರೆಗೆ ಕರೆದೊಯ್ದರು. ನನ್ನ ತಮ್ಮ ಅಲ್ಲೇ ಸಿಲುಕಿದ್ದ. ನನ್ನ ತಮ್ಮನನ್ನು ಒಮ್ಮೆ ನೋಡಲು ಬಿಡಿ ಎಂದು ಕಣ್ಣೀರು ಹಾಕುತ್ತಿದ್ದಾರೆ.

ನನ್ನ ತಮ್ಮ ಆಕಾಶ್ ಕೂಡ ಅಲ್ಲೇ ಇದ್ದ. ಆದರೆ ಅವನನ್ನು ಯಾರೂ ರಕ್ಷಣೆ ಮಾಡೋರಿಲ್ಲದೆ ಸಾವನ್ನಪ್ಪಿದ್ದಾನೆ. ನನ್ನ ತಮ್ಮ ಇಲ್ಲದೆ ನಾನು ಹೇಗೆ ಬದುಕಲಿ. ಒಮ್ಮೆ ನನ್ನ ಸಹೋದರನ ಮುಖ ನೋಡಲು ಬಿಡಿ.  ನನ್ನ ತಾಯಿಗೆ ಇನ್ನೂ ವಿಷಯ ತಿಳಿದಿಲ್ಲ. ಆಕೆಗೆ ಕೂಡ ಚಿಕಿತ್ಸೆ ಕೊಡಿಸಲಾಗ್ತಿದೆ. ಮಗ ಹೇಗಿದ್ದಾನೆ ಎಂದು ಕೇಳ್ತಿದ್ದಾರೆ. ಆಕಾಶ್ಗೆ ಏನೂ ಆಗಿಲ್ಲ, ಚೆನ್ನಾಗಿದ್ದಾನೆ ಎಂದು ಅವರನ್ನು ಸಮಾಧಾನಪಡಿಸಿದ್ದೇವೆ ಎಂದು ದುಃಖಿಸಿದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!