
ಆಕಾಶ್ (14) ಮೃತ ಬಾಲಕ. ಬಿಜೆ ಹಾಸ್ಟೆಲ್ನ ಮುಂಭಾಗ ಆಕಾಶ್ ಕುಟುಂಬವು ಟೀ ಅಂಗಡಿ ಇಟ್ಟುಕೊಂಡಿದ್ದರು. ಆಕಾಶ್ ತಾಯಿಗೆ ತಿಂಡಿ ಕೊಡಲು ಅಂಗಡಿ ಬಳಿ ಹೋಗಿದ್ದ. ವಿಮಾನ ದುರಂತದ ವೇಳೆ ಆಕಾಶ್ ಟೀ ಅಂಗಡಿಯ ಮುಂದೆ ನಿಂತಿದ್ದ. ಇದ್ದಕ್ಕಿದ್ದಂತೆ ಸ್ಫೋಟದಿಂದ ದೊಡ್ಡ ಮಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಆಕಾಶ್ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.

ಆಕಾಶ್ನನ್ನು ಕಳೆದುಕೊಂಡ ಸಹೋದರ ಕಲ್ಪೇಶ್ ಆಕ್ರಂದನ ಮುಗಿಲು ಮುಟ್ಟಿದೆ. ನನ್ನ ದೊಡ್ಡಣ್ಣ ನನಗೆ ಕರೆ ಮಾಡಿ ವಿಚಾರ ತಿಳಿಸಿದ್ದರು. ನಾನು ಆಟೋ ಓಡಿಸುತ್ತಿದ್ದೆ. ಬೆಂಕಿ ತೀವತ್ರೆಗೆ ಗಾಯಗೊಂಡಿದ್ದ ನನ್ನ ತಾಯಿಯನ್ನು ಆಸ್ಪತ್ರೆಗೆ ಕರೆದೊಯ್ದರು. ನನ್ನ ತಮ್ಮ ಅಲ್ಲೇ ಸಿಲುಕಿದ್ದ. ನನ್ನ ತಮ್ಮನನ್ನು ಒಮ್ಮೆ ನೋಡಲು ಬಿಡಿ ಎಂದು ಕಣ್ಣೀರು ಹಾಕುತ್ತಿದ್ದಾರೆ.
ನನ್ನ ತಮ್ಮ ಆಕಾಶ್ ಕೂಡ ಅಲ್ಲೇ ಇದ್ದ. ಆದರೆ ಅವನನ್ನು ಯಾರೂ ರಕ್ಷಣೆ ಮಾಡೋರಿಲ್ಲದೆ ಸಾವನ್ನಪ್ಪಿದ್ದಾನೆ. ನನ್ನ ತಮ್ಮ ಇಲ್ಲದೆ ನಾನು ಹೇಗೆ ಬದುಕಲಿ. ಒಮ್ಮೆ ನನ್ನ ಸಹೋದರನ ಮುಖ ನೋಡಲು ಬಿಡಿ. ನನ್ನ ತಾಯಿಗೆ ಇನ್ನೂ ವಿಷಯ ತಿಳಿದಿಲ್ಲ. ಆಕೆಗೆ ಕೂಡ ಚಿಕಿತ್ಸೆ ಕೊಡಿಸಲಾಗ್ತಿದೆ. ಮಗ ಹೇಗಿದ್ದಾನೆ ಎಂದು ಕೇಳ್ತಿದ್ದಾರೆ. ಆಕಾಶ್ಗೆ ಏನೂ ಆಗಿಲ್ಲ, ಚೆನ್ನಾಗಿದ್ದಾನೆ ಎಂದು ಅವರನ್ನು ಸಮಾಧಾನಪಡಿಸಿದ್ದೇವೆ ಎಂದು ದುಃಖಿಸಿದರು.





