ಏರ್ ಇಂಡಿಯಾ ವಿಮಾನ ದುರಂತದ ವೇಳೆ ಟೀ ಅಂಗಡಿ ಬಳಿ ನಿಂತಿದ್ದ 14 ವರ್ಷದ ಬಾಲಕ ಸಾ*ವು!

ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತದ ವೇಳೆ ಅಲ್ಲೇ ಪಕ್ಕದ ಟೀ ಸ್ಟಾಲ್ ಬಳಿ ನಿಂತಿದ್ದ 14 ವರ್ಷದ ಬಾಲಕ ಬೆಂಕಿಯ ತೀವ್ರತೆಗೆ ಸಿಲುಕಿ ದಾರುಣ ಅಂತ್ಯ ಕಂಡಿದ್ದಾನೆ.

 

 

 

 

 

 

ಆಕಾಶ್ (14) ಮೃತ ಬಾಲಕ. ಬಿಜೆ ಹಾಸ್ಟೆಲ್ನ ಮುಂಭಾಗ ಆಕಾಶ್ ಕುಟುಂಬವು ಟೀ ಅಂಗಡಿ ಇಟ್ಟುಕೊಂಡಿದ್ದರು. ಆಕಾಶ್ ತಾಯಿಗೆ ತಿಂಡಿ ಕೊಡಲು ಅಂಗಡಿ ಬಳಿ ಹೋಗಿದ್ದ. ವಿಮಾನ ದುರಂತದ ವೇಳೆ ಆಕಾಶ್ ಟೀ ಅಂಗಡಿಯ ಮುಂದೆ ನಿಂತಿದ್ದ. ಇದ್ದಕ್ಕಿದ್ದಂತೆ ಸ್ಫೋಟದಿಂದ ದೊಡ್ಡ ಮಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಆಕಾಶ್ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.

 

 

 

 

 

 

 

ಆಕಾಶ್ನನ್ನು ಕಳೆದುಕೊಂಡ ಸಹೋದರ ಕಲ್ಪೇಶ್ ಆಕ್ರಂದನ ಮುಗಿಲು ಮುಟ್ಟಿದೆ. ನನ್ನ ದೊಡ್ಡಣ್ಣ ನನಗೆ ಕರೆ ಮಾಡಿ ವಿಚಾರ ತಿಳಿಸಿದ್ದರು. ನಾನು ಆಟೋ ಓಡಿಸುತ್ತಿದ್ದೆ. ಬೆಂಕಿ ತೀವತ್ರೆಗೆ ಗಾಯಗೊಂಡಿದ್ದ ನನ್ನ ತಾಯಿಯನ್ನು ಆಸ್ಪತ್ರೆಗೆ ಕರೆದೊಯ್ದರು. ನನ್ನ ತಮ್ಮ ಅಲ್ಲೇ ಸಿಲುಕಿದ್ದ. ನನ್ನ ತಮ್ಮನನ್ನು ಒಮ್ಮೆ ನೋಡಲು ಬಿಡಿ ಎಂದು ಕಣ್ಣೀರು ಹಾಕುತ್ತಿದ್ದಾರೆ.

ನನ್ನ ತಮ್ಮ ಆಕಾಶ್ ಕೂಡ ಅಲ್ಲೇ ಇದ್ದ. ಆದರೆ ಅವನನ್ನು ಯಾರೂ ರಕ್ಷಣೆ ಮಾಡೋರಿಲ್ಲದೆ ಸಾವನ್ನಪ್ಪಿದ್ದಾನೆ. ನನ್ನ ತಮ್ಮ ಇಲ್ಲದೆ ನಾನು ಹೇಗೆ ಬದುಕಲಿ. ಒಮ್ಮೆ ನನ್ನ ಸಹೋದರನ ಮುಖ ನೋಡಲು ಬಿಡಿ.  ನನ್ನ ತಾಯಿಗೆ ಇನ್ನೂ ವಿಷಯ ತಿಳಿದಿಲ್ಲ. ಆಕೆಗೆ ಕೂಡ ಚಿಕಿತ್ಸೆ ಕೊಡಿಸಲಾಗ್ತಿದೆ. ಮಗ ಹೇಗಿದ್ದಾನೆ ಎಂದು ಕೇಳ್ತಿದ್ದಾರೆ. ಆಕಾಶ್ಗೆ ಏನೂ ಆಗಿಲ್ಲ, ಚೆನ್ನಾಗಿದ್ದಾನೆ ಎಂದು ಅವರನ್ನು ಸಮಾಧಾನಪಡಿಸಿದ್ದೇವೆ ಎಂದು ದುಃಖಿಸಿದರು.

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!

ಅಗತ್ಯ ವಸ್ತುಗಳು ಹಾಗೂ ಇಂಧನ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಂದು ಆರ್ಥಿಕ ಹೊರೆ ನೀಡಿದೆ. ವಾಹನಗಳ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (PUCC) ಪಡೆಯಲು ಪಾವತಿಸಬೇಕಾದ ಶುಲ್ಕವನ್ನು ಸಾರಿಗೆ ಇಲಾಖೆಯು ಪರಿಷ್ಕರಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!