2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ..!

2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ..!

9ನೇ ಆವೃತ್ತಿಯ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್​​ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 2ನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ. ಈ ಮೂಲಕ 17 ವರ್ಷಗಳ ನಂತರ ಮತ್ತೊಮ್ಮೆ ಟಿ20 ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ. ವಾಸ್ತವವಾಗಿ 2007 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನ ಚೊಚ್ಚಲ ಆವೃತ್ತಿಯಲ್ಲಿ ಟೀಂ ಇಂಡಿಯಾ ಎಂಎಸ್ ಧೋನಿ ನಾಯಕಯತ್ವದಲ್ಲಿ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ ತಂಡ 2016 ರಲ್ಲಿ ಮತ್ತೊಮ್ಮೆ ಫೈನಲ್​ಗೇರಿತ್ತಾದರೂ, ಚಾಂಪಿಯನ್ ಆಗುವಲ್ಲಿ ಎಡವಿತ್ತು. ಆದರೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಅಜೇಯ ತಂಡವಾಗಿ ಫೈನಲ್​ಗೆ ಕಾಲಿಟ್ಟಿದ್ದ ಟೀಂ ಇಂಡಿಯಾ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದರೊಂದಿಗೆ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್​ಗೆ ಗೆಲುವಿನ ಬೀಳ್ಕೊಡುಗೆ ನೀಡಿದೆ.

ಪಂದ್ಯದ ದಿಕ್ಕು ಬದಲಿಸಿದ ಹಾರ್ದಿಕ್

ಹೀಗಾಗಿ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಕ್ಲಾಸನ್, ದಕ್ಷಿಣ ಆಫ್ರಿಕಾಕ್ಕೆ ಗೆಲುವು ಖಚಿತ ಎನಿಸುವಂತೆ ಮಾಡಿದರು. ಆದರೆ ಹಾರ್ದಿಕ್ ದಾಳಿಗಿಳಿದ 17ನೇ ಓವರ್​ ಇಡೀ ಪಂದ್ಯದ ದಿಕ್ಕನೇ ಬದಲಿಸಿತು. ಈ ಹಂತದಲ್ಲಿ ಆಫ್ರಿಕಾ ಗೆಲುವಿಗೆ 24 ಎಸೆತಗಳಲ್ಲಿ 26 ರನ್‌ಗಳ ಅಗತ್ಯವಿತ್ತು. ಈ ವೇಳೆ ಹಾರ್ದಿಕ್ 17ನೇ ಓವರ್‌ನ ಮೊದಲ ಎಸೆತದಲ್ಲಿ ಕ್ಲಾಸನ್ ವಿಕೆಟ್ ಪಡೆದು, ಆ ಓವರ್​ನಲ್ಲಿ ಕೇವಲ 4 ರನ್ ನೀಡುವ ಮೂಲಕ ಆಫ್ರಿಕಾ ತಂಡದ ಸಂಕಷ್ಟ ಹೆಚ್ಚಿಸಿದರು. ನಂತರ ಮುಂದಿನ ಓವರ್​ನಲ್ಲಿ ಬುಮ್ರಾ ಕೇವಲ 2 ರನ್ ನೀಡಿ ಮಾರ್ಕೊ ಯಾನ್ಸನ್​ರನ್ನು ಬೌಲ್ಡ್ ಮಾಡಿ ಟೀಂ ಇಂಡಿಯಾವನ್ನು ಗೆಲುವಿನ ಹತ್ತಿರಕ್ಕೆ ತಂದರು. ಕೊನೆಯ 2 ಓವರ್‌ಗಳಲ್ಲಿ ದಕ್ಷಿಣ ಆಫ್ರಿಕಾಕ್ಕೆ 20 ರನ್ ಅಗತ್ಯವಿತ್ತು. 19ನೇ ಓವರ್‌ ಬೌಲ್ ಮಾಡಿದ ಅರ್ಷದೀಪ್ ಕೇವಲ 4 ರನ್ ನೀಡಿದರು. ಕೊನೆಯ ಓವರ್‌ನಲ್ಲಿ 16 ರನ್‌ಗಳ ಅಗತ್ಯವಿತ್ತು. 20ನೇ ಓವರ್ ಬೌಲ್ ಮಾಡುವ ಜವಬ್ದಾರಿ ಹೊತ್ತ ಹಾರ್ದಿಕ್ ಮೊದಲ ಎಸೆತದಲ್ಲಿ ಡೇವಿಡ್ ಮಿಲ್ಲರ್ ಅವರ ವಿಕೆಟ್ ಪಡೆಯುವ ಮೂಲಕ ಗೆಲುವಿನ ಮುದ್ರೆಯೊತ್ತಿದರು. ಈ ಓವರ್​ನಲ್ಲಿ ಹಾರ್ದಿಕ್ ಕೇವಲ 8 ರನ್ ನೀಡಿ ಟೀಂ ಇಂಡಿಯಾಗೆ ಜಯ ತಂದುಕೊಟ್ಟರು.

  • Related Posts

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

      ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

    ಕ್ವಾಲಿಫೈಯರ್ ಆಡದೆಯೇ ಆರ್‌ಸಿಬಿ ಫೈನಲ್ ತಲುಪಬಹುದು..!

    ಐಪಿಎಲ್ 2026 ಕ್ವಾಲಿಫೈಯರ್ 1 ರಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಧರ್ಮಶಾಲಾದಲ್ಲಿ ಸೆಣಸಾಡಲಿವೆ. ಈ ಪಂದ್ಯ ಮಳೆಯಿಂದ ರದ್ದಾದರೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತ ತಂಡಕ್ಕೆ ಕ್ವಾಲಿಫೈಯರ್ 2 ಆಡಲು ಮತ್ತೊಂದು ಅವಕಾಶವಿದ್ದರೂ,…

    You Missed

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!