2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ..!

2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ..!

9ನೇ ಆವೃತ್ತಿಯ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್​​ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 2ನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ. ಈ ಮೂಲಕ 17 ವರ್ಷಗಳ ನಂತರ ಮತ್ತೊಮ್ಮೆ ಟಿ20 ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ. ವಾಸ್ತವವಾಗಿ 2007 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನ ಚೊಚ್ಚಲ ಆವೃತ್ತಿಯಲ್ಲಿ ಟೀಂ ಇಂಡಿಯಾ ಎಂಎಸ್ ಧೋನಿ ನಾಯಕಯತ್ವದಲ್ಲಿ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ ತಂಡ 2016 ರಲ್ಲಿ ಮತ್ತೊಮ್ಮೆ ಫೈನಲ್​ಗೇರಿತ್ತಾದರೂ, ಚಾಂಪಿಯನ್ ಆಗುವಲ್ಲಿ ಎಡವಿತ್ತು. ಆದರೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಅಜೇಯ ತಂಡವಾಗಿ ಫೈನಲ್​ಗೆ ಕಾಲಿಟ್ಟಿದ್ದ ಟೀಂ ಇಂಡಿಯಾ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದರೊಂದಿಗೆ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್​ಗೆ ಗೆಲುವಿನ ಬೀಳ್ಕೊಡುಗೆ ನೀಡಿದೆ.

ಪಂದ್ಯದ ದಿಕ್ಕು ಬದಲಿಸಿದ ಹಾರ್ದಿಕ್

ಹೀಗಾಗಿ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಕ್ಲಾಸನ್, ದಕ್ಷಿಣ ಆಫ್ರಿಕಾಕ್ಕೆ ಗೆಲುವು ಖಚಿತ ಎನಿಸುವಂತೆ ಮಾಡಿದರು. ಆದರೆ ಹಾರ್ದಿಕ್ ದಾಳಿಗಿಳಿದ 17ನೇ ಓವರ್​ ಇಡೀ ಪಂದ್ಯದ ದಿಕ್ಕನೇ ಬದಲಿಸಿತು. ಈ ಹಂತದಲ್ಲಿ ಆಫ್ರಿಕಾ ಗೆಲುವಿಗೆ 24 ಎಸೆತಗಳಲ್ಲಿ 26 ರನ್‌ಗಳ ಅಗತ್ಯವಿತ್ತು. ಈ ವೇಳೆ ಹಾರ್ದಿಕ್ 17ನೇ ಓವರ್‌ನ ಮೊದಲ ಎಸೆತದಲ್ಲಿ ಕ್ಲಾಸನ್ ವಿಕೆಟ್ ಪಡೆದು, ಆ ಓವರ್​ನಲ್ಲಿ ಕೇವಲ 4 ರನ್ ನೀಡುವ ಮೂಲಕ ಆಫ್ರಿಕಾ ತಂಡದ ಸಂಕಷ್ಟ ಹೆಚ್ಚಿಸಿದರು. ನಂತರ ಮುಂದಿನ ಓವರ್​ನಲ್ಲಿ ಬುಮ್ರಾ ಕೇವಲ 2 ರನ್ ನೀಡಿ ಮಾರ್ಕೊ ಯಾನ್ಸನ್​ರನ್ನು ಬೌಲ್ಡ್ ಮಾಡಿ ಟೀಂ ಇಂಡಿಯಾವನ್ನು ಗೆಲುವಿನ ಹತ್ತಿರಕ್ಕೆ ತಂದರು. ಕೊನೆಯ 2 ಓವರ್‌ಗಳಲ್ಲಿ ದಕ್ಷಿಣ ಆಫ್ರಿಕಾಕ್ಕೆ 20 ರನ್ ಅಗತ್ಯವಿತ್ತು. 19ನೇ ಓವರ್‌ ಬೌಲ್ ಮಾಡಿದ ಅರ್ಷದೀಪ್ ಕೇವಲ 4 ರನ್ ನೀಡಿದರು. ಕೊನೆಯ ಓವರ್‌ನಲ್ಲಿ 16 ರನ್‌ಗಳ ಅಗತ್ಯವಿತ್ತು. 20ನೇ ಓವರ್ ಬೌಲ್ ಮಾಡುವ ಜವಬ್ದಾರಿ ಹೊತ್ತ ಹಾರ್ದಿಕ್ ಮೊದಲ ಎಸೆತದಲ್ಲಿ ಡೇವಿಡ್ ಮಿಲ್ಲರ್ ಅವರ ವಿಕೆಟ್ ಪಡೆಯುವ ಮೂಲಕ ಗೆಲುವಿನ ಮುದ್ರೆಯೊತ್ತಿದರು. ಈ ಓವರ್​ನಲ್ಲಿ ಹಾರ್ದಿಕ್ ಕೇವಲ 8 ರನ್ ನೀಡಿ ಟೀಂ ಇಂಡಿಯಾಗೆ ಜಯ ತಂದುಕೊಟ್ಟರು.

  • Related Posts

    ಕ್ವಾಲಿಫೈಯರ್ ಆಡದೆಯೇ ಆರ್‌ಸಿಬಿ ಫೈನಲ್ ತಲುಪಬಹುದು..!

    ಐಪಿಎಲ್ 2026 ಕ್ವಾಲಿಫೈಯರ್ 1 ರಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಧರ್ಮಶಾಲಾದಲ್ಲಿ ಸೆಣಸಾಡಲಿವೆ. ಈ ಪಂದ್ಯ ಮಳೆಯಿಂದ ರದ್ದಾದರೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತ ತಂಡಕ್ಕೆ ಕ್ವಾಲಿಫೈಯರ್ 2 ಆಡಲು ಮತ್ತೊಂದು ಅವಕಾಶವಿದ್ದರೂ,…

    ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ವಿಶ್ವದಾಖಲೆ: ಈ ಸಾಧನೆ ಮಾಡಿದ ಏಕೈಕ ಕ್ರಿಕೆಟಿಗ!

    ನಿನ್ನೆ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ದೆಹಲಿ ತಂಡವನ್ನು ಮಣಿಸಿದ ಆರ್‌ಸಿಬಿ ಭರ್ಜರಿ ಜಯ ದಾಖಲಿಸಿದೆ. ಇದರ ಜೊತೆಗೆ ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲೇ ಯಾರೂ ಮಾಡದ ಅತಿದೊಡ್ಡ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಐಪಿಎಲ್ ಇತಿಹಾಸದಲ್ಲಿ…

    You Missed

    ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

    ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

    3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

    3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

    ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

    ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

    ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

    ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

    ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

    ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

    ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

    ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!