ಚಾಮರಾಜನಗರ ಜಿಲ್ಲಾ ಕನಕ ಸಮುದಾಯ ಭವನಕ್ಕೆ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ.

ಚಾಮರಾಜನಗರ : ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ. ಇದರಿಂದ ಅಂಬೇಡ್ಕರ್ ಅವರ ಸಮಾನತೆಯ ಅವಕಾಶ ಈಡೇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಈಗಾಗಲೇ 2 ಕೋಟಿ ರೂಪಾಯಿಯಲ್ಲಿ 50 ಲಕ್ಷ ರೂಪಾಯಿ ಬಿಡುಗಡೆ ಆಗಿದೆ. ಹಲವರು ದೇಣಿಗೆ ಕೂಡ ಕೊಟ್ಟಿದ್ದಾರೆ. ಇವರೆಲ್ಲರಿಗೂ ಒಳ್ಳೆಯದಾಗಲಿ, ಸಮುದಾಯ ಭವನ ಕಟ್ಟಿ. ಆದರೆ, ಇದಕ್ಕಿಂತ ಹೆಚ್ಚಾಗಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆ ನಿರ್ಮಿಸಿ, ಜಿಲ್ಲೆಯ ಎಲ್ಲಾ ಹಿಂದುಳಿದ ಸಮುದಾಯಗಳ ಬಡ ಮಕ್ಕಳಿಗೆ ಶೈಕ್ಷಣಿಕ ನೆರವು ದೊರಕುವಂತೆ ಮಾಡಿ ಎಂದು ಕರೆ ನೀಡಿದರು.

ಚಾಮರಾಜನಗರ ಜಿಲ್ಲೆ ಅತ್ಯಂತ ಹಿಂದುಳಿದಿರುವ ಜಿಲ್ಲೆ. ಇಲ್ಲಿ ಶಿಕ್ಷಣ ಹೆಚ್ಚೆಚ್ಚು ಸಿಗಬೇಕಿದೆ. ಶಿಕ್ಷಣ ಕಲಿಯಬೇಕಿದ್ದರೆ ಹಾಸ್ಟೆಲ್ ಗಳ ಅಗತ್ಯವೂ ಇದೆ. ನಮ್ಮ ಸರ್ಕಾರ ಎಲ್ಲಾ ಜಾತಿಯ ಬಡವರಿಗೂ ಅನುಕೂಲ ಆಗುವ ಯೋಜನೆಗಳನ್ನು ಜಾರಿಗೆ ತಂದಿದೆ. ಶಕ್ತಿ ಯೋಜನೆ ಸೇರಿ ನಮ್ಮ ಐದೂ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡ ಮಹಿಳೆಯರಿಗೂ ಅನುಕೂಲ ಆಗುತ್ತಿದೆ. ಕೆಲಸಕ್ಕೆ ಹೋಗುವ ಬಡ ಮತ್ತು ಮಧ್ಯಮ ವರ್ಗದ ಹೆಣ್ಣು ಮಕ್ಕಳಿಗೆ ಇದರಿಂದ ಹೆಚ್ಚು ಸಮಾಧಾನ ಆಗಿದೆ. ವಿದ್ಯಾರ್ಥಿನಿಯರಿಗೂ ಸಮಾಧಾನ ಆಗಿದೆ. ಹೀಗೆ ಎಲ್ಲಾ ಜಾತಿಯ ಬಡವರು, ಮಧ್ಯಮ ವರ್ಗದವರಿಗೆ ನೆರವಾಗುವ ಕೆಲಸ ಮಾಡಿ ಎಂದು ಸಲಹೆ ನೀಡಿದರು.

“ಸಾಮಾಜಿಕ ಸಮೀಕ್ಷೆ:
ಸಂವಿಧಾನ ಬಂದು 75 ವರ್ಷ ಆದರೂ ಸಾಮಾಜಿಕ ನ್ಯಾಯ ಈಡೇರಿಲ್ಲ. ಅವಕಾಶ ವಂಚಿತ ಸಮುದಾಯಗಳ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ಅರಿಯಲು ಸಮೀಕ್ಷೆ ನಡೆಸಿದ್ದೇವೆ. 2015 ರಲ್ಲಿ ನಡೆಸಿದ ಸಮೀಕ್ಷೆ ಬಳಿಕ ಬಂದ ಸಿಎಂ ಗಳು ಸ್ವೀಕರಿಸಿಲ್ಲ. ನಾನು ಸ್ವೀಕರಿಸಿ ಕ್ಯಾಬಿನೆಟ್ ಮುಂದೆ ಇಟ್ಟಿದ್ದೀನಿ. ಇದು ಯಾರ ವಿರುದ್ಧವೂ ಇರುವ ಸಮೀಕ್ಷೆ ಅಲ್ಲ. ಎಲ್ಲರ ಸ್ಥಿತಿ ಗತಿ ತಿಳಿಯುವ ಸಮೀಕ್ಷೆ ಮಾತ್ರ ಆಗಿದೆ ಎಂದರು.

ಬಿಜೆಪಿಯ ರಾಮಾ ಜೋಯಿಸ್ ಅವರು ಮೀಸಲಾತಿ ವಿರೋಧಿಸಿ ಕೋರ್ಟ್ ಗೆ ಹೋಗಿದ್ದರು. ನಿಮಗೆ ಸೈದ್ಧಾಂತಿಕವಾಗಿ ಸ್ಪಷ್ಟ ತಿಳಿವಳಿಕೆ ಇರಬೇಕು.
ನೀವು ನನಗೂ ಚಪ್ಪಾಳೆ ತಟ್ಟೋದು, ಸಾಮಾಜಿಕ ನ್ಯಾಯದ ವಿರೋಧಿ ಆಗಿರುವ ಬಿಜೆಪಿಯವರ ಮಾತಿಗೂ ಚಪ್ಪಾಳೆ ತಟ್ಟೋದನ್ನು ನಿಲ್ಲಿಸಿ. ನಮ್ಮ ಪರವಾಗಿ ಇರುವವರು ಯಾರು ಎಂದು ತಿಳಿದು ಆಶೀರ್ವಾದ ಮಾಡಿ ಎಂದು ತಿಳಿಸಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!