2026ರ ಏಷ್ಯನ್ ಕ್ರೀಡಾಕೂಟ; ಭಾರತ ಪುರುಷರ ಫುಟ್ಬಾಲ್ ತಂಡಕ್ಕಿಲ್ಲ ಅವಕಾಶ?

ನವದೆಹಲಿ: 2026ರಲ್ಲಿ ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಭಾರತ ಪುರುಷರ ಫುಟ್ಬಾಲ್ ತಂಡವನ್ನು ಕಳುಹಿಸುವ ಸಾಧ್ಯತೆ ಕಡಿಮೆಯಾಗಿದೆ. ಆದರೆ ಕನಿಷ್ಠ ಬೆಳ್ಳಿ ಪದಕದ ನಿರೀಕ್ಷೆಯಲ್ಲಿರುವ ಮಹಿಳಾ ಫುಟ್ಬಾಲ್ ತಂಡಕ್ಕೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ ಎಂದು ವರದಿಗಳು ಸೂಚಿಸುತ್ತವೆ.

ಈ ನಿರ್ಧಾರಕ್ಕೆ ಕಾರಣವಾಗಿ ಕೇಂದ್ರ ಕ್ರೀಡಾ ಸಚಿವಾಲಯದಿಂದ ಕ್ರೀಡಾಪಟುಗಳ ಆಯ್ಕೆ ಮಾನದಂಡಗಳಲ್ಲಿ ತಂದಿರುವ ಬದಲಾವಣೆಗಳನ್ನು ಹೇಳಬಹುದು. ಮುಂದಿನ ಏಷ್ಯನ್ ಗೇಮ್ಸ್‌ಗಳಿಗೆ ಸರ್ಕಾರವು ಕೇವಲ ಪದಕ ಗೆಲ್ಲುವ ಸಾಮರ್ಥ್ಯವಿರುವ ಕ್ರೀಡಾಪಟುಗಳನ್ನಷ್ಟೇ ಆಯ್ಕೆ ಮಾಡಲಿದೆ ಎಂಬುದು ಸ್ಪಷ್ಟವಾಗಿದೆ.

2024ರಲ್ಲಿ ಕತಾರ್‌ನಲ್ಲಿ ನಡೆದ ಏಷ್ಯನ್ ಕಪ್‌ನಲ್ಲಿ ಪುರುಷರ ತಂಡವು ಗುಂಪು ಹಂತದಲ್ಲಿಯೇ ಹೊರಬಿದ್ದಿತ್ತು. ಪ್ರಸ್ತುತ ಈ ತಂಡವು ಏಷ್ಯಾದಲ್ಲಿ 24ನೇ ಸ್ಥಾನದಲ್ಲಿದೆ ಹಾಗೂ ವಿಶ್ವದಲ್ಲಿ 134ನೇ ಸ್ಥಾನದಲ್ಲಿದೆ. ಈ ಹಿಂದಿನ ಸಾಧನೆಗಳನ್ನು ನೋಡಿದರೂ ಕೂಡಾ, 1951 ಮತ್ತು 1962ರಲ್ಲಿ ಚಿನ್ನದ ಪದಕ, 1970ರಲ್ಲಿ ಕಂಚಿನ ಪದಕ, ಹಾಗೂ 1982ರಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದೇ ಅವರ ಪ್ರಮುಖ ಸಾಧನೆ. ಆ ಬಳಿಕದಿಂದ ತಂಡ ನಿರಂತರ ನಿರ್ವಹಣೆಯಲ್ಲೂ ಹಾಗೂ ಸಾಧನೆಲ್ಲೂ ಕುಗ್ಗಿ ಹೋಗಿದೆ.

ಇದೇ ವೇಳೆ, ಭಾರತೀಯ ಮಹಿಳಾ ಫುಟ್ಬಾಲ್ ತಂಡವು ಏಷ್ಯಾದಲ್ಲಿ 12ನೇ ಸ್ಥಾನದಲ್ಲಿದ್ದು, ಕನಿಷ್ಠ ಬೆಳ್ಳಿ ಪದಕದ ನಿರೀಕ್ಷೆಯಿದೆ. ಆದ್ದರಿಂದ, ಅವರನ್ನೇ ಕ್ರೀಡಾಕೂಟಕ್ಕೆ ಕಳುಹಿಸುವ ಅವಕಾಶ ಅಧಿಕವಾಗಿದೆ.

ಬುಧವಾರ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಕ್ರೀಡಾ ಸಚಿವಾಲಯ, ಏಷ್ಯನ್ ಗೇಮ್ಸ್‌ಗೆ ಆಯ್ಕೆಯಾಗಬೇಕಾದ ತಂಡ ಅಥವಾ ಆಟಗಾರನು/ಆಟಗಾರ್ತಿಯು, ತಂಡ ಸ್ಪರ್ಧೆಗಳಿಗಾಗಿ ಏಷ್ಯಾದ ಅಗ್ರ-8 ಸ್ಥಾನದಲ್ಲಿರಬೇಕು ಮತ್ತು ವೈಯಕ್ತಿಕ ಸ್ಪರ್ಧೆಗಳಲ್ಲಿ ಅಗ್ರ-6 ಸ್ಥಾನದಲ್ಲಿರಬೇಕು ಎಂಬ ನಿಯಮವನ್ನು ಜಾರಿಗೆ ತಂದಿದೆ.

ಇದೇ ವೇಳೆ, ಕಾಮನ್‌ವೆಲ್ತ್ ಕ್ರೀಡಾಕೂಟ, ಪ್ಯಾರಾ ಏಷ್ಯನ್ ಗೇಮ್ಸ್, ಏಷ್ಯನ್ ಒಳಂಗಾಣ ಕ್ರೀಡಾಕೂಟ, ಬೀಚ್ ಗೇಮ್ಸ್, ಯುವ ಒಲಿಂಪಿಕ್ಸ್ ಹಾಗೂ ಏಷ್ಯನ್ ಯುವ ಕ್ರೀಡಾಕೂಟಗಳಲ್ಲಿ ತೋರಿದ ಪ್ರದರ್ಶನವನ್ನೂ ಆಯ್ಕೆ ಮಾನದಂಡವಾಗಿ ಪರಿಗಣಿಸಲಾಗುವುದು ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

Related Posts

ಲೋಕಾ ರೈಡ್ ವೇಳೆ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು!

  ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕೆಲಸಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಸತೀಶ್ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳ ಮೇಲೆ…

ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ

ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ ಮೈಸೂರು : ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್‌ಗೆ ೨೦೨೬-೨೯ರ ಅವಧಿಯ ಆಡಳಿತ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಹುದ್ದೆಗಳಿಗೆ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೈಸೂರಿನ ಏರ್‌ಲೈನ್ಸ್ ಹೋಟೆಲ್ ಸಭಾಂಗಣದಲ್ಲಿ…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್