2026ರ ಏಷ್ಯನ್ ಕ್ರೀಡಾಕೂಟ; ಭಾರತ ಪುರುಷರ ಫುಟ್ಬಾಲ್ ತಂಡಕ್ಕಿಲ್ಲ ಅವಕಾಶ?

ನವದೆಹಲಿ: 2026ರಲ್ಲಿ ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಭಾರತ ಪುರುಷರ ಫುಟ್ಬಾಲ್ ತಂಡವನ್ನು ಕಳುಹಿಸುವ ಸಾಧ್ಯತೆ ಕಡಿಮೆಯಾಗಿದೆ. ಆದರೆ ಕನಿಷ್ಠ ಬೆಳ್ಳಿ ಪದಕದ ನಿರೀಕ್ಷೆಯಲ್ಲಿರುವ ಮಹಿಳಾ ಫುಟ್ಬಾಲ್ ತಂಡಕ್ಕೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ ಎಂದು ವರದಿಗಳು ಸೂಚಿಸುತ್ತವೆ.

ಈ ನಿರ್ಧಾರಕ್ಕೆ ಕಾರಣವಾಗಿ ಕೇಂದ್ರ ಕ್ರೀಡಾ ಸಚಿವಾಲಯದಿಂದ ಕ್ರೀಡಾಪಟುಗಳ ಆಯ್ಕೆ ಮಾನದಂಡಗಳಲ್ಲಿ ತಂದಿರುವ ಬದಲಾವಣೆಗಳನ್ನು ಹೇಳಬಹುದು. ಮುಂದಿನ ಏಷ್ಯನ್ ಗೇಮ್ಸ್‌ಗಳಿಗೆ ಸರ್ಕಾರವು ಕೇವಲ ಪದಕ ಗೆಲ್ಲುವ ಸಾಮರ್ಥ್ಯವಿರುವ ಕ್ರೀಡಾಪಟುಗಳನ್ನಷ್ಟೇ ಆಯ್ಕೆ ಮಾಡಲಿದೆ ಎಂಬುದು ಸ್ಪಷ್ಟವಾಗಿದೆ.

2024ರಲ್ಲಿ ಕತಾರ್‌ನಲ್ಲಿ ನಡೆದ ಏಷ್ಯನ್ ಕಪ್‌ನಲ್ಲಿ ಪುರುಷರ ತಂಡವು ಗುಂಪು ಹಂತದಲ್ಲಿಯೇ ಹೊರಬಿದ್ದಿತ್ತು. ಪ್ರಸ್ತುತ ಈ ತಂಡವು ಏಷ್ಯಾದಲ್ಲಿ 24ನೇ ಸ್ಥಾನದಲ್ಲಿದೆ ಹಾಗೂ ವಿಶ್ವದಲ್ಲಿ 134ನೇ ಸ್ಥಾನದಲ್ಲಿದೆ. ಈ ಹಿಂದಿನ ಸಾಧನೆಗಳನ್ನು ನೋಡಿದರೂ ಕೂಡಾ, 1951 ಮತ್ತು 1962ರಲ್ಲಿ ಚಿನ್ನದ ಪದಕ, 1970ರಲ್ಲಿ ಕಂಚಿನ ಪದಕ, ಹಾಗೂ 1982ರಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದೇ ಅವರ ಪ್ರಮುಖ ಸಾಧನೆ. ಆ ಬಳಿಕದಿಂದ ತಂಡ ನಿರಂತರ ನಿರ್ವಹಣೆಯಲ್ಲೂ ಹಾಗೂ ಸಾಧನೆಲ್ಲೂ ಕುಗ್ಗಿ ಹೋಗಿದೆ.

ಇದೇ ವೇಳೆ, ಭಾರತೀಯ ಮಹಿಳಾ ಫುಟ್ಬಾಲ್ ತಂಡವು ಏಷ್ಯಾದಲ್ಲಿ 12ನೇ ಸ್ಥಾನದಲ್ಲಿದ್ದು, ಕನಿಷ್ಠ ಬೆಳ್ಳಿ ಪದಕದ ನಿರೀಕ್ಷೆಯಿದೆ. ಆದ್ದರಿಂದ, ಅವರನ್ನೇ ಕ್ರೀಡಾಕೂಟಕ್ಕೆ ಕಳುಹಿಸುವ ಅವಕಾಶ ಅಧಿಕವಾಗಿದೆ.

ಬುಧವಾರ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಕ್ರೀಡಾ ಸಚಿವಾಲಯ, ಏಷ್ಯನ್ ಗೇಮ್ಸ್‌ಗೆ ಆಯ್ಕೆಯಾಗಬೇಕಾದ ತಂಡ ಅಥವಾ ಆಟಗಾರನು/ಆಟಗಾರ್ತಿಯು, ತಂಡ ಸ್ಪರ್ಧೆಗಳಿಗಾಗಿ ಏಷ್ಯಾದ ಅಗ್ರ-8 ಸ್ಥಾನದಲ್ಲಿರಬೇಕು ಮತ್ತು ವೈಯಕ್ತಿಕ ಸ್ಪರ್ಧೆಗಳಲ್ಲಿ ಅಗ್ರ-6 ಸ್ಥಾನದಲ್ಲಿರಬೇಕು ಎಂಬ ನಿಯಮವನ್ನು ಜಾರಿಗೆ ತಂದಿದೆ.

ಇದೇ ವೇಳೆ, ಕಾಮನ್‌ವೆಲ್ತ್ ಕ್ರೀಡಾಕೂಟ, ಪ್ಯಾರಾ ಏಷ್ಯನ್ ಗೇಮ್ಸ್, ಏಷ್ಯನ್ ಒಳಂಗಾಣ ಕ್ರೀಡಾಕೂಟ, ಬೀಚ್ ಗೇಮ್ಸ್, ಯುವ ಒಲಿಂಪಿಕ್ಸ್ ಹಾಗೂ ಏಷ್ಯನ್ ಯುವ ಕ್ರೀಡಾಕೂಟಗಳಲ್ಲಿ ತೋರಿದ ಪ್ರದರ್ಶನವನ್ನೂ ಆಯ್ಕೆ ಮಾನದಂಡವಾಗಿ ಪರಿಗಣಿಸಲಾಗುವುದು ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

Related Posts

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ…

ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್ !

  ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!