25 ವರ್ಷದ ಕಿರಿಯ ಶಾಸಕಿ ಮೈಥಿಲಿ ಠಾಕೂರ್! ಇವರ ಹಿನ್ನೆಲೆ ಏನು?

ಬಿಹಾರ :- 25 ವರ್ಷದ ಮೈಥಿಲಿ ಠಾಕೂರ್ ಎಂಬ ಹುಡುಗಿ ಬಿಹಾರ ಚುನಾವಣಾ ಫಲಿತಾಂಶ ಬೆನ್ನಲ್ಲೇದೇಶದಲ್ಲಿ ಭಾರೀ ಚರ್ಚೆಯಲ್ಲಿದ್ದಾಳೆ. ಬಿಹಾರ ರಾಜ್ಯದ ಅಂತ್ಯಂತ ಕಿರಿಯ ವಯಸ್ಸಿನ ಶಾಸಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

 

 

 

 

 

ಮೈಥಿಲಿ ಠಾಕೂರ್. ವಯಸ್ಸು 25. ಜಾನಪದ ಗಾಯಕಿಯಾಗಿ ಜನಪ್ರಿಯತೆ ಪಡೆದಿದ್ದ, ಇವರು ಇಂದು ದೇಶದ ಅತ್ಯಂತ ಕಿರಿಯ ಶಾಸಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ! ಬಿಹಾರ ಚುನಾವಣೆಯ ಫಲಿತಾಂಶ ನಿನ್ನೆ ಪ್ರಕಟಗೊಂಡಿದೆ. ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಮೈಥಿಲಿ ಠಾಕೂರ್​​ ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದಾರೆ.
ಅಲಿನಗರ ವಿಧಾನಸಭಾ ಕ್ಷೆತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮೈಥಿಲಿ ಠಾಕೂರ್​, ಭರ್ಜರಿ ಜಯಭೇರಿ ಬಾರಿಸಿದ್ದಾರೆ. ಆರ್​ಜೆಡಿ ಪಕ್ಷದ ಬಿನೋದ್ ಮಿಶ್ರಾ ಅವರನ್ನು 12 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿ ಬಿಹಾರ್ ರಾಜ್ಯದ ಅಂತ್ಯರ ಕಿರಿಯ ವಯಸ್ಸಿನ ಶಾಸಕಿ ಹೊಗಳಿಕೆಗೆ ಕಾರಣರಾಗಿದ್ದಾರೆ.

ಮೈಥಿಲಿ ಠಾಕೂರ್ ಯಾರು..? 

 

 

 

 

 

 

ಮೈಥಿಲಿ ಜುಲೈ 25, 2000 ರಂದು ಬಿಹಾರದ ಮಧುಬನಿ ಜಿಲ್ಲೆಯ ಬೇಣಿಪಟ್ಟಿ ಎಂಬ ಸಣ್ಣ ಪಟ್ಟಣದಲ್ಲಿ ಜನಿಸಿದರು. ಅವರ ತಂದೆ ರಮೇಶ್ ಠಾಕೂರ್ ಆ ಪ್ರದೇಶದಲ್ಲಿ ಜನಪ್ರಿಯ ಸಂಗೀತಗಾರರು. ತಾಯಿ ಭಾರತಿ ಠಾಕೂರ್ ಗೃಹಿಣಿ. ಮೈಥಿಲಿಗೆ ಇಬ್ಬರು ಸಹೋದರರು. ಮೈಥಿಲಿಗೆ ಬಾಲ್ಯದಿಂದಲೂ ಸಂಗೀತದ ಕಡೆಗೆ ಹೆಚ್ಚು ಒಲವು ಹೊಂದಿರೋದ್ರಿಂದ ಸಂಗೀತವನ್ನೇ ಪ್ರಮುಖ ಆಯ್ಕೆಯನ್ನಾಗಿ ಮಾಡಿಕೊಂಡರು.
ತಂದೆಯಿಂದ ಸಂಗೀತ ಕಲಿತುಕೊಂಡ ಇವರು, ಅವಕಾಶ ಹುಡುಕುತ್ತ ಹೋಗುತ್ತಾರೆ. ಅಂತೆಯೇ, ಕುಟುಂಬದ ಜೊತೆಗೆ ದೆಹಲಿಯ ದ್ವಾರಕಕ್ಕೆ ಬಂದು ನೆಲೆಸುತ್ತಾರೆ. ಇಲ್ಲಿ ರಮೇಶ್ ಠಾಕೂರ್ ಅವರ ಮೂವರು ಮಕ್ಕಳು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಹಾರ್ಮೋನಿಯಂ ಮತ್ತು ತಬಲಾದಲ್ಲಿ ತರಬೇತಿ ಪಡೆದುಕೊಳ್ಳುತ್ತಾರೆ.

ಮೈಥಿಲಿ ಠಾಕೂರ್ ಅವರ ಸರಾಸರಿ ತಿಂಗಳ ಗಳಿಕೆ ಎಷ್ಟು..? 
ಮೈಥಿಲಿ ಠಾಕೂರ್ ದೇಶೀಯವಾಗಿ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಕೆಲವು ವರದಿಗಳ ಪ್ರಕಾರ, ತಿಂಗಳಿಗೆ 12 ರಿಂದ 15 ಲೈವ್ ಪ್ರದರ್ಶನ ನೀಡುತ್ತಾರೆ. ಒಂದು ಪ್ರದರ್ಶನಕ್ಕೆ  500,000 ರಿಂದ 700,000 ವರೆಗೆ ಚಾರ್ಜ್​ ಮಾಡುತ್ತಾರೆ. ಸರಾಸರಿ ಅವರು ತಿಂಗಳಿಗೆ 600,000 ರಿಂದ 800,000 ಗಳಿಸುತ್ತಾರೆ.

ಜೀ ವಾಹಿನಿ ಯಿಂದ ಬದುಕಿಗೆ ತಿರುವು

 

 

 

 

 

2011ರಲ್ಲಿ ಮೈಥಿಲಿ ಬದುಕಿಗೆ ಜೀ ವಾಹಿನಿ ಹೊಸ ತಿರುವು ನೀಡಿತು. ‘ಲಿಟಲ್ ಚಾಂಪ್ಸ್’ ಎಂಬ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡು ಜನಪ್ರಿಯತೆ ಪಡೆದುಕೊಂಡರು. ಅದೇ ರಿಯಾಲಿಟಿ ಶೋ ಮೂಲಕವೇ ಹೆಚ್ಚು ಜನ ಮನ್ನಣೆ ಪಡೆದುಕೊಂಡರು. 4 ವರ್ಷಗಳ ನಂತರ ಸೋನಿ ಟಿವಿಯಲ್ಲಿ ಪ್ರಸಾರವಾದ ರಿಯಾಲಿಟಿ ಶೋ ‘Indian Idol Junior season’ನಲ್ಲಿ ಕಾಣಿಸಿಕೊಂಡರು. ಅದಾದ ಬಳಿಕ ‘ರೈಸಿಂಗ್ ಸ್ಟಾರ್’ ಎಂಬ ರಿಯಾಲಿಟಿ ಶೋ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಮೂಡಿಸಿದರು.  ಇದರಲ್ಲಿ ಅವರು ರನ್ನರ್-ಅಪ್ ಆಗಿ ಜರ್ನಿ ಮುಗಿಸಿದರು.

2017ರಲ್ಲಿ ರೈಸಿಂಗ್ ಸ್ಟಾರ್​ ಸೀಸನ್-1 ಮತ್ತಷ್ಟು ಹೆಚ್ಚು ಖ್ಯಾತಿ ತಂದುಕೊಟ್ಟಿತು. ಮೈಥಿಲಿ ಕಾರ್ಯಕ್ರಮದ ಮೊದಲ ಫೈನಲಿಸ್ಟ್ ಆಗಿ ಹೊರ ಹೊಮ್ಮಿದ್ದರು. ‘ಓಂ ನಮಃ ಶಿವಾಯ’ ಹಾಡುವ ಮೂಲಕ ಫೈನಲ್​ಗೆ ನೇರವಾಗಿ ಪ್ರವೇಶ ಪಡೆದರು. ಫೈನಲ್​​ನಲ್ಲಿ ಕೇವಲ 2 ವೋಟ್​ಗಳಿಂದ ಸೋತರು. ಈ ಕಾರ್ಯಕ್ರಮದ ನಂತರ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಜನಪ್ರಿಯತೆ ಪಡೆದರು. ಅವರ ಒಂದೊಂದು ವೀಡಿಯೊಗಳು ಯೂಟ್ಯೂಬ್ ಮತ್ತು ಫೇಸ್‌ಬುಕ್‌ನಲ್ಲಿ 70 ಸಾವಿರದಿಂದ 7 ಮಿಲಿಯನ್​ ವರೆಗೆ ವೀಕ್ಷಣೆಗಳನ್ನು ಪಡೆಯುತ್ತವೆ.

ಮೈಥಿಲಿ ಠಾಕೂರ್ ಶಾಸಕಿಯಾದ ಮೇಲೆ ಎಷ್ಟು ಸಂಪಾದಿಸಬಹುದು..?
ಬಿಹಾರದಲ್ಲಿ ಶಾಸಕರ ಮೂಲ ವೇತನ 50,000 ರೂಪಾಯಿ. ಜೊತೆಗೆ 55,000 ರೂಪಾಯಿ ಪ್ರಾದೇಶಿಕ ಭತ್ಯೆ, 3,000 ದೈನಂದಿನ ಸಭೆ ಭತ್ಯೆ, 40,000 ವೈಯಕ್ತಿಕ ಸಹಾಯಕ ಭತ್ಯೆ ಮತ್ತು 15,000 ಲೇಖನ ಸಾಮಗ್ರಿ ಭತ್ಯೆ ಸೇರಿದಂತೆ ವಿವಿಧ ಭತ್ಯೆಗಳನ್ನು ಪಡೆಯುತ್ತಾರೆ. ಇವುಗಳನ್ನು ಸೇರಿಸಿದರೆ, ಶಾಸಕರ ಮಾಸಿಕ ಆದಾಯ ₹1.43,000 ಮೀರುತ್ತದೆ. ಆದರೆ ನಿಜವಾದ ಆದಾಯ ಇದರಿಂದ ಮಾತ್ರ ಬರುವುದಿಲ್ಲ, ಬದಲಿಗೆ ಶಾಸಕರ ಹುದ್ದೆಯೊಂದಿಗೆ ಬರುವ ಸವಲತ್ತುಗಳಿಂದ ಬರುತ್ತದೆ.

ಶಾಸಕರಿಗೆ ಇರುವ ಸೌಲಭ್ಯಗಳು
ಬಿಹಾರ ಶಾಸಕರು ಆರ್ಥಿಕ ನೆರವಿಗಿಂತ ಹೆಚ್ಚು ಪ್ರಭಾವಶಾಲಿಯಾದ ಅನೇಕ ಸವಲತ್ತುಗಳನ್ನು ಪಡೆಯುತ್ತಾರೆ. ವಾರ್ಷಿಕವಾಗಿ 4 ಲಕ್ಷದವರೆಗಿನ ರೈಲು/ವಿಮಾನ ಪ್ರಯಾಣ ಕೂಪನ್‌ಗಳು, 25 ಲಕ್ಷದವರೆಗಿನ ವಾಹನ ಸಾಲ, ಮಾಜಿ ಶಾಸಕರಿಗೆ 45,000 ರೂಪಾಯಿ ಮಾಸಿಕ ಪಿಂಚಣಿ, 29,000 ಆತಿಥ್ಯ ಭತ್ಯೆ, ಭದ್ರತೆ, ಸರ್ಕಾರಿ ವಸತಿ, ಸಬ್ಸಿಡಿ ವಿದ್ಯುತ್, ನೀರು ಮತ್ತು ಫೋನ್ ಬಿಲ್‌ಗಳು ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ವಿಶೇಷ ಚಿಕಿತ್ಸೆ ಕೂಡ ಸಿಗುತ್ತದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!