253 ಪ್ರಭೇದದ ಪಕ್ಷಿಗಳು, ಮಲೆಮಹದೇಶ್ವರ ವನ್ಯಜೀವಿ ಧಾಮದಲ್ಲಿ ಪತ್ತೆ.

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ವ್ಯಾಪ್ತಿಗೊಳಪಡುವ ಮಲೆ ಮಹ ದೇಶ್ವರ ವನ್ಯಜೀವಿ ಧಾಮದಲ್ಲಿ ಎರಡು ದಿನಗಳ ಕಾಲ ನಡೆದ ಪಕ್ಷಿಗಳ ಗಣತಿ ಕಾರ್ಯದಲ್ಲಿ 253 ಪ್ರಭೇದದ ಪಕ್ಷಿಗಳು ಪತ್ತೆಯಾಗಿವೆ.
ಹನೂರು ಹಾಗೂ ಕೊಳ್ಳೇಗಾಲ ತಾಲೂಕು ಸೇರಿದಂತೆ ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ 7 ಅರಣ್ಯ ವಲಯಗಳಿವೆ ಒಟ್ಟು 949.469 ಚದರ ಕಿ.ಮೀ.ನಷ್ಟು ಅರಣ್ಯ ಪ್ರದೇಶವನ್ನು ಹೊಂದಿದೆ. ಈ ವನ್ಯಧಾಮವು ಬೆಟ್ಟಗುಡ್ಡ ಪ್ರದೇಶದಿಂದ ಕೂಡಿದೆ. ಈ
ವಿಭಾಗದಲ್ಲಿ ಅರೆ ಹರಿದ್ವರ್ಣ, ಶುಷ್ಕ ಅರಣ್ಯ, ಒಣ ಶುಷ್ಕ ಅರಣ್ಯ, ಕುರುಚಲು ಕಾಡುಗಳನ್ನು ಕಾಣಬಹುದಾಗಿದೆ.

ವನ್ಯಧಾಮದಲ್ಲಿ ಪ್ರಮುಖವಾಗಿ ಆನೆ, ಹುಲಿ, ಚಿರತೆ, ಜಿಂಕೆ, ಕಡವೆ, ಕಾಡೆಮ್ಮೆ, ಕಾಡುಹಂದಿ, ಕರಡಿ, ನು, ಸೀಳುನಾಯಿ ಇತ್ಯಾದಿ ವನ್ಯ ಜೀವಿ ಗಳಿಗೆ ಆವಾಸಸ್ಥಾನವಾಗಿದ್ದು, ಪಕ್ಷಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಮೊದಲ ಬಾರಿಗೆ ಪಕ್ಷಿ ಗಣತಿ ನಡೆಸಲಾಯಿತು.
ಮಾಹಿತಿ ಸಂಗ್ರಹ: ಮೊದಲ ಬಾರಿಗೆ ನಡೆದ ಗಣತಿ ಕಾರ್ಯಕ್ಕೆ ರಾಜ್ಯದ ವಿವಿಧ ಜಿಲ್ಲೆಗಳು ಸೇರಿದಂತೆ ಹೊರ ರಾಜ್ಯಗಳಿಂದ ಸುಮಾರು 500ಕ್ಕೂ ಹೆಚ್ಚಿ ಮಂದಿ ನೋಂದಣಿ ಮಾಡಿಸಿಕೊಂಡಿದ್ದರು. ಈ ಪೈಕಿ 120 ಮಂದಿ ಪರಿಣತರನ್ನು ಅರಣ್ಯ ಇಲಾಖೆ ಆಯ್ಕೆ ಮಾಡಿ, 4 ತಂಡಗಳಾಗಿ ವಿಂಗಡಿಸಲಾಗಿತ್ತು.

ವೈವಿಧ್ಯಮಯ ಆವಾಸಸ್ಥಾನಗಳನ್ನು ಒಳಗೊಂಡಿರುವ ಅರಣ್ಯದಲ್ಲಿ ಪ್ರತಿ ದಿನ ಒಂದೊಂದು ತಂಡ 3 ರಿಂದ 4 ಕಿಮೀ ಉದ್ದದ 40 ಟ್ರ್ಯಾಕ್ಗಳನ್ನು ಆಯ್ಕೆ ಮಾಡಿ ಕೊಂಡು ಸಮೀಕ್ಷೆ ಕಾರ್ಯ ನಡೆಸಲಾಯಿತು.
ಪ್ರತಿ ತಂಡವು ಒಂದು ಟ್ರ್ಯಾಕ್ನಲ್ಲಿ ಬಲಚಿತ್ರದಲ್ಲಿ ಪಕ್ಷಿ ಗಣತಿ ನಡೆಸಿದ ತಂಡ.
ಈ ಸಲ ಕಪ್​ ನಮ್ದೆ! RCB ಜೆರ್ಸಿಗೆ ಪುಣ್ಯ ಸ್ನಾನ!
ಪಕ್ಷಿ ವೀಕ್ಷಣೆ ನಡೆಸಿತು. ಪ್ರತಿ ಗುಂಪು ರಾತ್ರಿ ಪಕ್ಷಿ ವೀಕ್ಷಣೆಯೊಂದಿಗೆ ದಿನದ ಮೂರು ಪಾಳಯದಲ್ಲಿ ಪಕ್ಷಿ ವೀಕ್ಷಣೆ ನಡೆಸಿತು. ಪಕ್ಷಿ ಸಮೀಕ್ಷೆಯ ಕೊನೆಯಲ್ಲಿ, ಭಾಗವಹಿಸುವವರು ಸುಮಾರು 253 ಜಾತಿಯ ಪಕ್ಷಿಗಳನ್ನು ಗುರುತಿಸಿದರು.
ಬಿಳಿ ನೇಷ್ಮೆ ತುದಿ, ಬಿಳಿ ರಂಪ್ಟ್ ರಣಹದ್ದು, ನೀಲಗಿರಿ ಮರದ ಪಾರಿವಾಳ, ಕ್ರೆಸ್ಟೆಡ್ ಸರ್ಪೆಂಟ್ ಹದ್ದು ಮುಂತಾದ ಅಪರೂಪದ ಪ್ರಭೇದದ ಪಕ್ಷಿಗಳು ಸಮೀಕ್ಷೆಯಲ್ಲಿ ಪತ್ತೆಯಾಯಿತು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!