2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ..!

2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ..!

9ನೇ ಆವೃತ್ತಿಯ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್​​ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 2ನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ. ಈ ಮೂಲಕ 17 ವರ್ಷಗಳ ನಂತರ ಮತ್ತೊಮ್ಮೆ ಟಿ20 ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ. ವಾಸ್ತವವಾಗಿ 2007 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನ ಚೊಚ್ಚಲ ಆವೃತ್ತಿಯಲ್ಲಿ ಟೀಂ ಇಂಡಿಯಾ ಎಂಎಸ್ ಧೋನಿ ನಾಯಕಯತ್ವದಲ್ಲಿ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ ತಂಡ 2016 ರಲ್ಲಿ ಮತ್ತೊಮ್ಮೆ ಫೈನಲ್​ಗೇರಿತ್ತಾದರೂ, ಚಾಂಪಿಯನ್ ಆಗುವಲ್ಲಿ ಎಡವಿತ್ತು. ಆದರೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಅಜೇಯ ತಂಡವಾಗಿ ಫೈನಲ್​ಗೆ ಕಾಲಿಟ್ಟಿದ್ದ ಟೀಂ ಇಂಡಿಯಾ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದರೊಂದಿಗೆ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್​ಗೆ ಗೆಲುವಿನ ಬೀಳ್ಕೊಡುಗೆ ನೀಡಿದೆ.

ಪಂದ್ಯದ ದಿಕ್ಕು ಬದಲಿಸಿದ ಹಾರ್ದಿಕ್

ಹೀಗಾಗಿ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಕ್ಲಾಸನ್, ದಕ್ಷಿಣ ಆಫ್ರಿಕಾಕ್ಕೆ ಗೆಲುವು ಖಚಿತ ಎನಿಸುವಂತೆ ಮಾಡಿದರು. ಆದರೆ ಹಾರ್ದಿಕ್ ದಾಳಿಗಿಳಿದ 17ನೇ ಓವರ್​ ಇಡೀ ಪಂದ್ಯದ ದಿಕ್ಕನೇ ಬದಲಿಸಿತು. ಈ ಹಂತದಲ್ಲಿ ಆಫ್ರಿಕಾ ಗೆಲುವಿಗೆ 24 ಎಸೆತಗಳಲ್ಲಿ 26 ರನ್‌ಗಳ ಅಗತ್ಯವಿತ್ತು. ಈ ವೇಳೆ ಹಾರ್ದಿಕ್ 17ನೇ ಓವರ್‌ನ ಮೊದಲ ಎಸೆತದಲ್ಲಿ ಕ್ಲಾಸನ್ ವಿಕೆಟ್ ಪಡೆದು, ಆ ಓವರ್​ನಲ್ಲಿ ಕೇವಲ 4 ರನ್ ನೀಡುವ ಮೂಲಕ ಆಫ್ರಿಕಾ ತಂಡದ ಸಂಕಷ್ಟ ಹೆಚ್ಚಿಸಿದರು. ನಂತರ ಮುಂದಿನ ಓವರ್​ನಲ್ಲಿ ಬುಮ್ರಾ ಕೇವಲ 2 ರನ್ ನೀಡಿ ಮಾರ್ಕೊ ಯಾನ್ಸನ್​ರನ್ನು ಬೌಲ್ಡ್ ಮಾಡಿ ಟೀಂ ಇಂಡಿಯಾವನ್ನು ಗೆಲುವಿನ ಹತ್ತಿರಕ್ಕೆ ತಂದರು. ಕೊನೆಯ 2 ಓವರ್‌ಗಳಲ್ಲಿ ದಕ್ಷಿಣ ಆಫ್ರಿಕಾಕ್ಕೆ 20 ರನ್ ಅಗತ್ಯವಿತ್ತು. 19ನೇ ಓವರ್‌ ಬೌಲ್ ಮಾಡಿದ ಅರ್ಷದೀಪ್ ಕೇವಲ 4 ರನ್ ನೀಡಿದರು. ಕೊನೆಯ ಓವರ್‌ನಲ್ಲಿ 16 ರನ್‌ಗಳ ಅಗತ್ಯವಿತ್ತು. 20ನೇ ಓವರ್ ಬೌಲ್ ಮಾಡುವ ಜವಬ್ದಾರಿ ಹೊತ್ತ ಹಾರ್ದಿಕ್ ಮೊದಲ ಎಸೆತದಲ್ಲಿ ಡೇವಿಡ್ ಮಿಲ್ಲರ್ ಅವರ ವಿಕೆಟ್ ಪಡೆಯುವ ಮೂಲಕ ಗೆಲುವಿನ ಮುದ್ರೆಯೊತ್ತಿದರು. ಈ ಓವರ್​ನಲ್ಲಿ ಹಾರ್ದಿಕ್ ಕೇವಲ 8 ರನ್ ನೀಡಿ ಟೀಂ ಇಂಡಿಯಾಗೆ ಜಯ ತಂದುಕೊಟ್ಟರು.

  • Related Posts

    ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

    ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತ ಕ್ರಿಕೆಟ್ ತಂಡದ ತವರಿನ ಪಂದ್ಯಗಳಿಗೆ ಹೊಸ ಟೈಟಲ್ ಸ್ಪಾನ್ಸರ್ ಹುಡುಕಲು ತೀವ್ರ ಹರಸಾಹಸ ಪಡುತ್ತಿದೆ. ಆಗಸ್ಟ್ 13ರ ಅಂತಿಮ ಗಡುವು ಮುಗಿದಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಬಿಡ್‌ಗಳು ಬಾರದಿರುವುದು ಜಗತ್ತಿನ ಅತಿ ಶ್ರೀಮಂತ ಕ್ರಿಕೆಟ್…

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

      ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

    You Missed

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!