45 ನಿಮಿಷಗಳ ಸಮೀಕ್ಷೆ: ಸಮಾಧಾನದಿಂದ ವಿವರ ನೀಡಿದ ಸಿಎಂ ಸಿದ್ದರಾಮಯ್ಯ

ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು.ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು.

ನಮ್ಮ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗಾಗಿ ನನ್ನ ಮನೆಗೆ ಭೇಟಿನೀಡಿದ ಸಿಬ್ಬಂದಿಗಳಿಗೆ ಮಾಹಿತಿ ನೀಡಿ, ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ. ಅಸಮಾನತೆ, ಬಡತನವನ್ನು ನಿವಾರಣೆ ಮಾಡಿ ಸಮಸಮಾಜ ನಿರ್ಮಾಣ ಮಾಡುವ ಉದ್ದೇಶದೊಂದಿಗೆ ನಮ್ಮ ಸರ್ಕಾರವು ಈ ಸಮೀಕ್ಷೆಯನ್ನು ಕೈಗೊಂಡಿದೆ. ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಂಡು, ತಮ್ಮ ಮಾಹಿತಿಯನ್ನು ಪ್ರಾಮಾಣಿಕವಾಗಿ ನೀಡಬೇಕು. ಆಗ ಮಾತ್ರ ಸಮಾಜದ ವಾಸ್ತವ ಸ್ಥಿತಿಗತಿಯ ಬಗೆಗೆ ನಿಖರ ಮಾಹಿತಿ ದೊರೆತು, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರನ್ನು ಗುರುತಿಸಿ, ಅವರ ಪ್ರಗತಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ.

ಇದು ಯಾವುದೇ ಒಂದು ಜಾತಿಗೆ ಸೀಮಿತವಾದ ಸಮೀಕ್ಷೆಯಲ್ಲ, ರಾಜ್ಯದ ಪ್ರತಿಯೊಬ್ಬರ ಜೀವನದ ಮೇಲೆ ಬೆಳಕು ಚೆಲ್ಲುವ ಒಂದು ವೈಜ್ಞಾನಿಕ ಪ್ರಯತ್ನ. ಸಮೀಕ್ಷೆಯಲ್ಲಿ ಮಾಹಿತಿ ನೀಡುವುದರಿಂದ ನಿಮ್ಮ ವೈಯಕ್ತಿಕ ಮಾಹಿತಿ ದುರ್ಬಳಕೆ ಖಂಡಿತಾ ಆಗದು. ಚಿಂತೆ ಬಿಟ್ಟು, ಧೈರ್ಯವಾಗಿ ಸಿಬ್ಬಂದಿಗಳ ಜೊತೆ ಮಾಹಿತಿ ಹಂಚಿಕೊಳ್ಳಿ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!