ಚಿತ್ರರಂಗಕ್ಕೆ ಕಾಲಿಟ್ಟು ಕಳೆಯಿತು 45 ವರ್ಷ; ನೆನಪಿನ ಪುಟ ತೆರೆದ ನವರಸ ನಾಯಕ ಜಗ್ಗೇಶ್

ಯಾವುದೇ ಹಿನ್ನೆಲೆ ಇಲ್ಲದೇ ಬಂದ ನಟ ಜಗ್ಗೇಶ್ ಅವರು ಕನ್ನಡ ಚಿತ್ರರಂಗದಲ್ಲಿ ಸಾಧನೆ ಮಾಡಿದರು. ಅವರು ಬಣ್ಣದ ಲೋಕಕ್ಕೆ ಎಂಟ್ರಿ ನೀಡಿ ಇಂದಿಗೆ (ನವೆಂಬರ್ 17) 45 ವರ್ಷಗಳನ್ನು ಪೂರೈಸಿದ್ದಾರೆ. ಈ ಪ್ರಯುಕ್ತ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಸಿನಿಜರ್ನಿಯ ನೆನಪು ಮೆಲುಕು ಹಾಕಿದ್ದಾರೆ.

ಖ್ಯಾತ ನಟ ಜಗ್ಗೇಶ್ (Jaggesh) ಅವರು ಚಿತ್ರರಂಗದಲ್ಲಿ ನಾಲ್ಕೂವರೆ ದಶಕಗಳ ಅನುಭವ ಹೊಂದಿದ್ದಾರೆ. ಅನೇಕ ಏಳು-ಬೀಳುಗಳನ್ನು ಅವರು ನೋಡಿದ್ದಾರೆ. ಇಂದಿಗೆ (ನವೆಂಬರ್ 17) ‘ನವರಸ ನಾಯಕ’ ಜಗ್ಗೇಶ್ ಅವರು ಚಿತ್ರರಂಗಕ್ಕೆ (Kannada Film Industry) ಕಾಲಿಟ್ಟು ಬರೋಬ್ಬರಿ 45 ವರ್ಷಗಳು ಕಳೆದಿವೆ. ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡುವ ಮೂಲಕ ಅವರು ಜನರನ್ನು ರಂಜಿಸಿದ್ದಾರೆ. ಸ್ಟಾರ್ ನಟನಾಗಿ ಯಶಸ್ಸು ಕಂಡಿದ್ದಾರೆ. ಎಷ್ಟೇ ಸಾಧನೆ ಮಾಡಿದರೂ ಕೂಡ ಅವರು ತಮಗೆ ಅವಕಾಶ ಕೊಟ್ಟವರನ್ನು ಇಂದಿಗೂ ಮರೆತಿಲ್ಲ. ಸೋಶಿಯಲ್ ಮೀಡಿಯಾ ಮೂಲಕ ಅವರು ಎಲ್ಲವನ್ನೂ ನೆನಪು ಮಾಡಿಕೊಂಡಿದ್ದಾರೆ. ಅವರ ಪೋಸ್ಟ್ ಇಲ್ಲಿದೆ.‘1980 ನವಂಬರ್ 17ನೇ ತಾರೀಖು. ಆಗ ನನಗೆ 18 ವರ್ಷ ವಯಸ್ಸು. ನಾನು ಬಣ್ಣಹಚ್ಚಿ ನಟಿಸಿದ ಚಿತ್ರ ‘ಕನ್ನಡತಿ ಮಾನವತಿ’. ಸ್ಥಳ ಗುಬ್ಬಿ ಚನ್ನಬಸವೇಶ್ವರ ಆಲಯ. ಬಣ್ಣ ಹಚ್ಚಿದವರು ಅಂಬರೀಶ್ ಅವರ ಮೇಕಪ್ ಮಾಡುತ್ತಿದ್ದ ರಾಮಕೃಷ್ಣ ಹಾಗೂ ಅವರ ಶಿಷ್ಯ ಕೃಷ್ಣ. ಪಾತ್ರ ಕೊಡಿಸಿದವ ನನ್ನ ಮಿತ್ರ ಶಂಭು’ ಎಂದು ಜಗ್ಗೇಶ್ ಅವರು ಆ ದಿನಗಳ ಪುಟ ತೆರೆದಿದ್ದಾರೆ.

‘ನನಗೆ ಮೀಸೆ ಬರೆದವರು ಹಾಸ್ಯನಟ ರನ್ನಾಕರ್. ಚಿತ್ರದ ನಾಯಕ ರಾಮಕೃಷ್ಣ. ನಾಯಕಿ ಪ್ರಮೀಳ ಜೋಯ್ಸ್. ನನ್ನ ಜೊತೆ ನಟಿಸಿದ ನಟಿ ಸಿಹಿಕಹಿ ಗೀತಾ ಅಕ್ಕ. ಚಿತ್ರ ಬಿಡುಗಡೆ ಆಗಲಿಲ್ಲ. ನನ್ನ ಅದೃಷ್ಟ ನಿರ್ದೇಶಕ ಸಿದ್ದಲಿಂಗಯ್ಯ ಅವರ ಮಗ ಮುರಳಿ ಅವರ ಚಿತ್ರ ‘ಬಿಳಿ ಗುಲಾಬಿ’ ಸಿಗಲು ಕಾರಣವಾದರು ಪುಟ್ಟಣ್ಣ ಕಣಗಲ್ ಅವರ ಸಹಾಯಕ ನಿರ್ದೇಶಕ ದಿವಂಗತ ಅರಕಲಗೂಡು ನಂಜುಂಡ’ ಎಂದಿದ್ದಾರೆ ಜಗ್ಗೇಶ್. ‘ನಂತರ ಕೆ.ವಿ. ಜಯರಾಂ ಅವರ ಕೃಪೆಯಿಂದ ಅವರ ‘ಇಬ್ಬನಿ ಕರಗಿತು’ ಸಿನಿಮಾದಲ್ಲಿ ಮುಂದುವರಿದು, 1984ರಲ್ಲಿ ‘ಶ್ವೇತ ಗುಲಾಬಿ’ ಚಿತ್ರದ ಅವಕಾಶ ಸಿಕ್ಕು ನಂತರ ಪರಿಮಳ ನಾನು ಮದುವೆಯಾಗಿ ಸ್ಟೇಷನ್ ಸುಪ್ರೀಮ್ ಕೋರ್ಟು ಅವಾಂತರ ಮುಗಿಸಿ ನಂತರ ಹಿಂದೆ ನೋಡದೇ ರಾಯರ ಕೃಪೆಯಿಂದ ಅಂದಿನ ಕನ್ನಡ ಪ್ರೇಕ್ಷಕರ ಪ್ರೀತಿ ಚಪ್ಪಾಳೆಯಿಂದ ವಿವಿಧ ಪಾತ್ರ ಮಾಡುತ್ತ ಬೆಳೆದುನಿಂತೆ’ ಎಂದು ಜಗ್ಗೇಶ್ ಬರೆದುಕೊಂಡಿದ್ದಾರೆ.

‘ಇಂದಿಗೆ ನನ್ನ ಸಿನಿಮಾ ಪ್ರಯಾಣಕ್ಕೆ 45 ವರ್ಷ ಆಯುಷ್ಯ. ನಡೆದು ಬಂದ ದಾರಿ ನೆನಪಿನ ಬುತ್ತಿ. ಮುಂದೆಯೂ ನಿಮ್ಮ ಪ್ರೀತಿ ನನ್ನ ಮೇಲಿರಲಿ ಹಾಗೂ ನನ್ನಂತೆ ಮುಂದೆ ಚಿತ್ರರಂಗಕ್ಕೆ ಬರುವ ಹೊಸ ಕಲಾವಿದರ ಹರಸಿ ಬೆಳೆಸಿ. ಶುಭಸಂಜೆ’ ಎಂದು ಜಗ್ಗೇಶ್ ಅವರು ಪೋಸ್ಟ್ ಮಾಡಿದ್ದಾರೆ. ಚಿತ್ರರಂಗದಲ್ಲಿ ಖ್ಯಾತಿ ಪಡೆದ ಅವರು ರಾಜಕೀಯದಲ್ಲೂ ಯಶಸ್ಸು ಕಂಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!