ಚಿತ್ರರಂಗಕ್ಕೆ ಕಾಲಿಟ್ಟು ಕಳೆಯಿತು 45 ವರ್ಷ; ನೆನಪಿನ ಪುಟ ತೆರೆದ ನವರಸ ನಾಯಕ ಜಗ್ಗೇಶ್

ಯಾವುದೇ ಹಿನ್ನೆಲೆ ಇಲ್ಲದೇ ಬಂದ ನಟ ಜಗ್ಗೇಶ್ ಅವರು ಕನ್ನಡ ಚಿತ್ರರಂಗದಲ್ಲಿ ಸಾಧನೆ ಮಾಡಿದರು. ಅವರು ಬಣ್ಣದ ಲೋಕಕ್ಕೆ ಎಂಟ್ರಿ ನೀಡಿ ಇಂದಿಗೆ (ನವೆಂಬರ್ 17) 45 ವರ್ಷಗಳನ್ನು ಪೂರೈಸಿದ್ದಾರೆ. ಈ ಪ್ರಯುಕ್ತ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಸಿನಿಜರ್ನಿಯ ನೆನಪು ಮೆಲುಕು ಹಾಕಿದ್ದಾರೆ.

ಖ್ಯಾತ ನಟ ಜಗ್ಗೇಶ್ (Jaggesh) ಅವರು ಚಿತ್ರರಂಗದಲ್ಲಿ ನಾಲ್ಕೂವರೆ ದಶಕಗಳ ಅನುಭವ ಹೊಂದಿದ್ದಾರೆ. ಅನೇಕ ಏಳು-ಬೀಳುಗಳನ್ನು ಅವರು ನೋಡಿದ್ದಾರೆ. ಇಂದಿಗೆ (ನವೆಂಬರ್ 17) ‘ನವರಸ ನಾಯಕ’ ಜಗ್ಗೇಶ್ ಅವರು ಚಿತ್ರರಂಗಕ್ಕೆ (Kannada Film Industry) ಕಾಲಿಟ್ಟು ಬರೋಬ್ಬರಿ 45 ವರ್ಷಗಳು ಕಳೆದಿವೆ. ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡುವ ಮೂಲಕ ಅವರು ಜನರನ್ನು ರಂಜಿಸಿದ್ದಾರೆ. ಸ್ಟಾರ್ ನಟನಾಗಿ ಯಶಸ್ಸು ಕಂಡಿದ್ದಾರೆ. ಎಷ್ಟೇ ಸಾಧನೆ ಮಾಡಿದರೂ ಕೂಡ ಅವರು ತಮಗೆ ಅವಕಾಶ ಕೊಟ್ಟವರನ್ನು ಇಂದಿಗೂ ಮರೆತಿಲ್ಲ. ಸೋಶಿಯಲ್ ಮೀಡಿಯಾ ಮೂಲಕ ಅವರು ಎಲ್ಲವನ್ನೂ ನೆನಪು ಮಾಡಿಕೊಂಡಿದ್ದಾರೆ. ಅವರ ಪೋಸ್ಟ್ ಇಲ್ಲಿದೆ.‘1980 ನವಂಬರ್ 17ನೇ ತಾರೀಖು. ಆಗ ನನಗೆ 18 ವರ್ಷ ವಯಸ್ಸು. ನಾನು ಬಣ್ಣಹಚ್ಚಿ ನಟಿಸಿದ ಚಿತ್ರ ‘ಕನ್ನಡತಿ ಮಾನವತಿ’. ಸ್ಥಳ ಗುಬ್ಬಿ ಚನ್ನಬಸವೇಶ್ವರ ಆಲಯ. ಬಣ್ಣ ಹಚ್ಚಿದವರು ಅಂಬರೀಶ್ ಅವರ ಮೇಕಪ್ ಮಾಡುತ್ತಿದ್ದ ರಾಮಕೃಷ್ಣ ಹಾಗೂ ಅವರ ಶಿಷ್ಯ ಕೃಷ್ಣ. ಪಾತ್ರ ಕೊಡಿಸಿದವ ನನ್ನ ಮಿತ್ರ ಶಂಭು’ ಎಂದು ಜಗ್ಗೇಶ್ ಅವರು ಆ ದಿನಗಳ ಪುಟ ತೆರೆದಿದ್ದಾರೆ.

‘ನನಗೆ ಮೀಸೆ ಬರೆದವರು ಹಾಸ್ಯನಟ ರನ್ನಾಕರ್. ಚಿತ್ರದ ನಾಯಕ ರಾಮಕೃಷ್ಣ. ನಾಯಕಿ ಪ್ರಮೀಳ ಜೋಯ್ಸ್. ನನ್ನ ಜೊತೆ ನಟಿಸಿದ ನಟಿ ಸಿಹಿಕಹಿ ಗೀತಾ ಅಕ್ಕ. ಚಿತ್ರ ಬಿಡುಗಡೆ ಆಗಲಿಲ್ಲ. ನನ್ನ ಅದೃಷ್ಟ ನಿರ್ದೇಶಕ ಸಿದ್ದಲಿಂಗಯ್ಯ ಅವರ ಮಗ ಮುರಳಿ ಅವರ ಚಿತ್ರ ‘ಬಿಳಿ ಗುಲಾಬಿ’ ಸಿಗಲು ಕಾರಣವಾದರು ಪುಟ್ಟಣ್ಣ ಕಣಗಲ್ ಅವರ ಸಹಾಯಕ ನಿರ್ದೇಶಕ ದಿವಂಗತ ಅರಕಲಗೂಡು ನಂಜುಂಡ’ ಎಂದಿದ್ದಾರೆ ಜಗ್ಗೇಶ್. ‘ನಂತರ ಕೆ.ವಿ. ಜಯರಾಂ ಅವರ ಕೃಪೆಯಿಂದ ಅವರ ‘ಇಬ್ಬನಿ ಕರಗಿತು’ ಸಿನಿಮಾದಲ್ಲಿ ಮುಂದುವರಿದು, 1984ರಲ್ಲಿ ‘ಶ್ವೇತ ಗುಲಾಬಿ’ ಚಿತ್ರದ ಅವಕಾಶ ಸಿಕ್ಕು ನಂತರ ಪರಿಮಳ ನಾನು ಮದುವೆಯಾಗಿ ಸ್ಟೇಷನ್ ಸುಪ್ರೀಮ್ ಕೋರ್ಟು ಅವಾಂತರ ಮುಗಿಸಿ ನಂತರ ಹಿಂದೆ ನೋಡದೇ ರಾಯರ ಕೃಪೆಯಿಂದ ಅಂದಿನ ಕನ್ನಡ ಪ್ರೇಕ್ಷಕರ ಪ್ರೀತಿ ಚಪ್ಪಾಳೆಯಿಂದ ವಿವಿಧ ಪಾತ್ರ ಮಾಡುತ್ತ ಬೆಳೆದುನಿಂತೆ’ ಎಂದು ಜಗ್ಗೇಶ್ ಬರೆದುಕೊಂಡಿದ್ದಾರೆ.

‘ಇಂದಿಗೆ ನನ್ನ ಸಿನಿಮಾ ಪ್ರಯಾಣಕ್ಕೆ 45 ವರ್ಷ ಆಯುಷ್ಯ. ನಡೆದು ಬಂದ ದಾರಿ ನೆನಪಿನ ಬುತ್ತಿ. ಮುಂದೆಯೂ ನಿಮ್ಮ ಪ್ರೀತಿ ನನ್ನ ಮೇಲಿರಲಿ ಹಾಗೂ ನನ್ನಂತೆ ಮುಂದೆ ಚಿತ್ರರಂಗಕ್ಕೆ ಬರುವ ಹೊಸ ಕಲಾವಿದರ ಹರಸಿ ಬೆಳೆಸಿ. ಶುಭಸಂಜೆ’ ಎಂದು ಜಗ್ಗೇಶ್ ಅವರು ಪೋಸ್ಟ್ ಮಾಡಿದ್ದಾರೆ. ಚಿತ್ರರಂಗದಲ್ಲಿ ಖ್ಯಾತಿ ಪಡೆದ ಅವರು ರಾಜಕೀಯದಲ್ಲೂ ಯಶಸ್ಸು ಕಂಡಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!