ಪ್ರಧಾನಿಗೆ ಪತ್ರ ಬರೆದ 5 ವರ್ಷದ ಬಾಲಕಿ.

ಬೆಂಗಳೂರು: ರಸ್ತೆಗಳ ಬಗ್ಗೆ ಐದು ವರ್ಷದ ಬಾಲಕಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾಳೆ. ನಗರದ ಟ್ರಾಫಿಕ್ ಸಮಸ್ಯೆಯನ್ನು ಸರಿಪಡಿಸುವಂತೆ ಆಕೆ ಪತ್ರದಲ್ಲಿ ಕೇಳಿಕೊಂಡಿದ್ದಾಳೆ. ಪ್ರಧಾನಿ ಮೋದಿ ಆಗಸ್ಟ್ 11 ರಂದು ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಸ್ತೆಗುಂಡಿ ಸಮಸ್ಯೆ ಇಂದಿನದ್ದಲ್ಲ, ಚುನವಾವಣೆ ಸಮಯದಲ್ಲಿ ಎಷ್ಟೇ ಸರಿ ಡಾಂಬರು ಹಾಕಿಸಿದರೂ ಕೆಲವೇ ದಿನದಲ್ಲಿ ಅದು ಕಿತ್ತುಬಂದು ಸಮಸ್ಯೆ ಉಂಟಾಗುತ್ತದೆ. ರಸ್ತೆಗುಂಡಿಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಇದ್ದಾರೆ, ಮೃತಪಟ್ಟಿದ್ದ ಘಟನೆಯೂ ನಡೆದಿತ್ತು. ಇನ್ನು ಟ್ರಾಫಿಕ್‌ನಿಂದ ಅಂತೂ ಕೇಳೋದೆ ಬೇಡ. ಇದರಿಂದ ಕಚೇರಿಗಳಿಗೆ ಶಾಲಾ ಕಾಲೇಜಿಗೆ ಲೇಟಾಗಿ ಹೋಗಿದ್ದು ಇದೆ. ಸದ್ಯ ಈ ಪುಟ್ಟ ಹುಡುಗಿಯ ಲೆಟರ್‌ ಭಾರಿ ವೈರಲ್‌ ಆಗಿದೆ.

ಬೆಂಗಳೂರಿನ ನಿವಾಸಿ ಅಭಿರೂಪ್ ಅವರ ಮಗಳು ಆರ್ಯ ಎಂಬ ಐದು ವರ್ಷದ ಹುಡುಗಿ ಈ ಪತ್ರ ಬರೆದಿದ್ದಾಳೆ. ಆರ್ಯಳ ಪತ್ರ ಸಾರ್ವಜನಿಕರ ಗಮನ ಸೆಳೆದಿದೆ. ಆನ್‌ಲೈನ್‌ನಲ್ಲಿ ಅನೇಕರು ಆಕೆಗೆ ಬೆಂಬಲ ನೀಡಿದ್ದಾರೆ.

ಆರ್ಯ ತನ್ನ ಪತ್ರದಲ್ಲಿ ಏನಿದೆ?
ನರೇಂದ್ರ ಮೋದಿ ಜೀ, ಬೆಂಗಳೂರಿನಲ್ಲಿ ತುಂಬಾ ಟ್ರಾಫಿಕ್ ಇದೆ. ನಾವು ಶಾಲೆ ಮತ್ತು ಕಚೇರಿಗಳಿಗೆ ತಡವಾಗಿ ಹೋಗುತ್ತಿದ್ದೇವೆ. ರಸ್ತೆಗಳು ತುಂಬಾ ಕೆಟ್ಟದಾಗಿವೆ. ದಯವಿಟ್ಟು ಇದನ್ನು ಸರಿಪಡಿಸಲು ಸಹಾಯ ಮಾಡಿ” ಎಂದು ಆರ್ಯ ಮೋದಿಗೆ ಪತ್ರ ಬರೆದಿದಾಳೆ .

ಆರ್ಯ ಮೋದಿಗೆ ಬರೆದ ಪತ್ರಕ್ಕೆ ಒಬ್ಬರು ಪ್ರತಿಕ್ರಿಯಿಸಿ, ಐದು ವರ್ಷದ ಬಾಲಕಿಯ ಆಸೆ ಈಡೇರುತ್ತದೆ ಎಂದಿದರೆ. ಮತ್ತೊಬ್ಬ ಬಳಕೆದಾರರು 15 ವರ್ಷಗಳ ಹಿಂದೆ ತಮ್ಮ ಮಗಳು ಮುಂಬೈನಲ್ಲಿ ಶಬ್ದ ಮಾಲಿನ್ಯದ ಬಗ್ಗೆ ರಾಷ್ಟ್ರಪತಿಗಳಿಗೆ ಬರೆದಿದ್ದನ್ನು ನೆನಪಿಸಿಕೊಂಡಿದ್ದಾರೆ. ಆ ಬಳಿಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು ಎಂದು ತಿಳಿಯಲಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!