ಮೈಸೂರಿನಲ್ಲಿ ಸಿದ್ದು ಶಕ್ತಿ ಪ್ರದರ್ಶನ ಮಾಡಲು 1 ಬಸ್ಸಿಗೆ 6 ಸಾವಿರ ?

ಮೈಸೂರು: ಶನಿವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸರ್ಕಾರದ ಸಾಧನಾ ಸಮಾವೇಶ ಆಯೋಜನೆಗೊಂಡಿದೆ. ಇದು ಒಂದರ್ಥದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಸಮಾವೇಶವಾಗಿ ಮಾರ್ಪಟ್ಟಿದೆ. ಹೀಗಾಗಿ ಕಾರ್ಯಕರ್ತರಿಗೆ ದುಡ್ಡು ಕೊಟ್ಟು ಸಮಾವೇಶಕ್ಕೆ ಕರೆ ತರಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.

ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ನಾಯಕರು ಈ ಬಗ್ಗೆ ಚರ್ಚೆ ಮಾಡಿದ್ದಾರೆ. ಒಂದು ಬಸ್ಸಿಗೆ 5 ರಿಂದ 6 ಸಾವಿರ ರೂ. ಕೊಡುತ್ತೇವೆ. 19 ರ ಸಮಾವೇಶಕ್ಕೆ ಜನ ಕರೆದುಕೊಂಡು ಬರಬೇಕು ಅಷ್ಟೇ ಎಂದು ಮುಖಂಡರು ಹೇಳಿದ್ದಾರೆ.


ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ನಾಯಕರು ಈ ಹೇಳಿಕೆ ನೀಡಿದ್ದಾರೆ. ಜುಲೈ 19ರ ಸಮಾವೇಶಕ್ಕೆ ಜನ ಕರೆ ತರಬೇಕು ಅಷ್ಟೇ. ಕರ್ಕೊಂಡ್ ಬರ್ತೀವಿ. ಒಂದು ಬಸ್ಸಿಗೆ 5 ರಿಂದ 6 ಸಾವಿರ ಕೊಡುತ್ತೀರಿ. ಇದನ್ನ ಬಿಟ್ಟರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಮ್ಮ ಕಷ್ಟವನ್ನು ಕೇಳುವವರು ಯಾರಿದ್ದೀರಿ ಎಂದು ಕೇಳಿದ್ದಾರೆ.

ನಮ್ಮ ಕ್ಷೇತ್ರಕ್ಕೆ ಕಾಂಗ್ರೆಸ್ ಶಾಸಕರಿಲ್ಲ. ನಮ್ಮ ಸರ್ಕಾರವೇ ಅಧಿಕಾರಿಗಳನ್ನು ಹಾಕುತ್ತದೆ. ಆದರೆ ಇರುವ ಅಧಿಕಾರಿಗಳು ಶಾಸಕರ ಮಾತು ಕೇಳುತ್ತಾರೆ. ಹಾಗಾಗಿ ನಾವು ಎಲ್ಲಿಗೆ ಹೋಗಿ ಕೇಳುವುದು ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಸೋತ ನಂತರ ಚಾಮುಂಡೇಶ್ವರಿ ಕ್ಷೇತ್ರ ಕೈ ಬಿಟ್ಟಿದ್ದಾರೆ ಎಂದು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಭೆಯಲ್ಲಿ ಬಹಿರಂಗವಾಗಿಯೇ ಕಾಂಗ್ರೆಸ್ ನಾಯಕ ಧನಗಹಳ್ಳಿ ಬಸವರಾಜು ಈ ರೀತಿ ಹೇಳಿದ್ದಾರೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!