ಪತಿ ಆಂಟಿ ಜೊತೆ ಲವ್ವಿಡವ್ವಿ ನೊಂದ ಪತ್ನಿ ದುರಂತ ಅಂತ್ಯ

ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ಗೃಹಿಣಿ ಒಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಮೈಸೂರಿನ ಪಿರಿಯಾಪಟ್ಟಣ ಮೂಲದ ದೀಪಾ (30) ಮೃತ ಗೃಹಿಣಿ.

ಪೋಷಕರಿಂದ ಗಂಡನ ಮನೆಯವರ ವಿರುದ್ಧ ಆರೋಪ
ದೀಪಾ ಹೆತ್ತವರು ಆಕೆಯ ಗಂಡನ ಮನೆಯವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪತಿ ಉದಯ್ ಮತ್ತು ತಾಯಿ ಮೇಲೆ ಕೊ*ಲೆ ಆರೋಪ ಮಾಡಿದ್ದಾರೆ. 12 ವರ್ಷಗಳ ಹಿಂದೆ ಗುರುಹಿರಿಯರ ಸಮ್ಮುಖದಲ್ಲಿ ಮಗಳಿಗೆ ಉದಯ್ ಜೊತೆ ಮದ್ವೆ ಮಾಡಿಕೊಟ್ಟಿದ್ವಿ. ಜೋಡಿಗೆ ಇಬ್ಬರು ಮುದ್ದಾದ ಗಂಡು ಮಕ್ಕಳಿದ್ದರು. ಸಂಸಾರ ಸುಃಖವಾಗಿತ್ತು ಅನ್ನುವಾಗಲೇ ದುರಂತ ನಡೆದುಬಿಟ್ಟಿದೆ ಎಂದು ಆರೋಪಿಸಿದ್ದಾರೆ.

ನನ್ನ ಮಗಳ ಮೇಲೆ ಹಲ್ಲೆ ಮಾಡಿದ್ದಾರೆ. 12 ವರ್ಷಗಳ ಹಿಂದೆ ಜಮೀನು ಮಾರಿ ಮಗಳ ಮದುವೆ ಮಾಡಿಕೊಟ್ಟಿದ್ದೇವು. ಭರ್ಜರಿಯಾಗಿ ಮದುವೆ ಮಾಡಿಕೊಡಲಾಗಿತ್ತು. ಆದರೆ ಇತ್ತೀಚೆಗೆ ಉದಯ್​​ಗೆ ಬ್ಯೂಟಿ ಪಾರ್ಲರ್ ಅಂಟಿ ಜೊತೆ ಅಕ್ರಮ ಸಂಬಂಧ ಇತ್ತು. ಇದೇ ವಿಚಾರ ವೈಮನಸ್ಸಿಗೆ ಕಾರಣವಾಯ್ತು.

ಈ ಅಕ್ರಮ ಸಂಬಂಧ ಹಿರಿಯರ ಗಮನಕ್ಕೂ ಬಂದಿತ್ತು. ಮೈಸೂರು ಚಾಮುಂಡೇಶ್ವರಿ ದೇವಾಲಯದಲ್ಲಿ ಮಾತುಕತೆ ನಡೆದು, ಆಂಟಿಗೆ ಕಟ್ಟಿದ್ದ ತಾಳಿಯನ್ನು ತೆಗೆಸಲಾಗಿತ್ತು. ಇಷ್ಟಾದರೂ ಉದಯ್ ಮತ್ತು ಅಂಟಿ ನಡುವೆ ಹೆಚ್ಚು ಒಡನಾಟ ಮಾಡಿಕೊಂಡಿದ್ದ. ಇದೇ ವಿಚಾರಕ್ಕೆ ದೀಪ ಮತ್ತು ಉದಯ್ ನಡುವೆ ಗಲಾಟೆ ಆಗಿದೆ. ಆಗಸ್ಟ್ 6 ರಂದು ದೊಣ್ಣೆಯಿಂದ ದೀಪ ಮೇಲೆ ಹಲ್ಲೆ ಮಾಡಿದ್ದಾರೆ. ಎಲ್ಲಾದರೂ ಹೋಗು ಎಂದು ಉದಯ್ ಹಲ್ಲೆ ನಡೆಸಿದ್ದಾನೆ. ಇದರಿಂದ ಮನನೊಂದು ಕ್ರಿಮಿನಾಶಕ ಸೇವಿಸಿದ್ದಾಳೆ. ಚಿಕಿತ್ಸೆ ಫಲಕಾರಿಯಾಗದೇ ಆಗಸ್ಟ್ 9ರಂದು ಪ್ರಾಣ ಬಿಟ್ಟಿದ್ದಾಳೆ ಎಂದು ಕಣ್ಣೀರು ಇಟ್ಟಿದ್ದಾರೆ.

ಘಟನೆ ಸಂಬಂಧ ಸೂರ್ಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಮೃತ ಗೃಹಿಣಿ ಕುಟುಂಬದ ಆಗ್ರಹಿಸಿದೆ. ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

 

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ