ಪತಿ ಆಂಟಿ ಜೊತೆ ಲವ್ವಿಡವ್ವಿ ನೊಂದ ಪತ್ನಿ ದುರಂತ ಅಂತ್ಯ

ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ಗೃಹಿಣಿ ಒಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಮೈಸೂರಿನ ಪಿರಿಯಾಪಟ್ಟಣ ಮೂಲದ ದೀಪಾ (30) ಮೃತ ಗೃಹಿಣಿ.

ಪೋಷಕರಿಂದ ಗಂಡನ ಮನೆಯವರ ವಿರುದ್ಧ ಆರೋಪ
ದೀಪಾ ಹೆತ್ತವರು ಆಕೆಯ ಗಂಡನ ಮನೆಯವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪತಿ ಉದಯ್ ಮತ್ತು ತಾಯಿ ಮೇಲೆ ಕೊ*ಲೆ ಆರೋಪ ಮಾಡಿದ್ದಾರೆ. 12 ವರ್ಷಗಳ ಹಿಂದೆ ಗುರುಹಿರಿಯರ ಸಮ್ಮುಖದಲ್ಲಿ ಮಗಳಿಗೆ ಉದಯ್ ಜೊತೆ ಮದ್ವೆ ಮಾಡಿಕೊಟ್ಟಿದ್ವಿ. ಜೋಡಿಗೆ ಇಬ್ಬರು ಮುದ್ದಾದ ಗಂಡು ಮಕ್ಕಳಿದ್ದರು. ಸಂಸಾರ ಸುಃಖವಾಗಿತ್ತು ಅನ್ನುವಾಗಲೇ ದುರಂತ ನಡೆದುಬಿಟ್ಟಿದೆ ಎಂದು ಆರೋಪಿಸಿದ್ದಾರೆ.

ನನ್ನ ಮಗಳ ಮೇಲೆ ಹಲ್ಲೆ ಮಾಡಿದ್ದಾರೆ. 12 ವರ್ಷಗಳ ಹಿಂದೆ ಜಮೀನು ಮಾರಿ ಮಗಳ ಮದುವೆ ಮಾಡಿಕೊಟ್ಟಿದ್ದೇವು. ಭರ್ಜರಿಯಾಗಿ ಮದುವೆ ಮಾಡಿಕೊಡಲಾಗಿತ್ತು. ಆದರೆ ಇತ್ತೀಚೆಗೆ ಉದಯ್​​ಗೆ ಬ್ಯೂಟಿ ಪಾರ್ಲರ್ ಅಂಟಿ ಜೊತೆ ಅಕ್ರಮ ಸಂಬಂಧ ಇತ್ತು. ಇದೇ ವಿಚಾರ ವೈಮನಸ್ಸಿಗೆ ಕಾರಣವಾಯ್ತು.

ಈ ಅಕ್ರಮ ಸಂಬಂಧ ಹಿರಿಯರ ಗಮನಕ್ಕೂ ಬಂದಿತ್ತು. ಮೈಸೂರು ಚಾಮುಂಡೇಶ್ವರಿ ದೇವಾಲಯದಲ್ಲಿ ಮಾತುಕತೆ ನಡೆದು, ಆಂಟಿಗೆ ಕಟ್ಟಿದ್ದ ತಾಳಿಯನ್ನು ತೆಗೆಸಲಾಗಿತ್ತು. ಇಷ್ಟಾದರೂ ಉದಯ್ ಮತ್ತು ಅಂಟಿ ನಡುವೆ ಹೆಚ್ಚು ಒಡನಾಟ ಮಾಡಿಕೊಂಡಿದ್ದ. ಇದೇ ವಿಚಾರಕ್ಕೆ ದೀಪ ಮತ್ತು ಉದಯ್ ನಡುವೆ ಗಲಾಟೆ ಆಗಿದೆ. ಆಗಸ್ಟ್ 6 ರಂದು ದೊಣ್ಣೆಯಿಂದ ದೀಪ ಮೇಲೆ ಹಲ್ಲೆ ಮಾಡಿದ್ದಾರೆ. ಎಲ್ಲಾದರೂ ಹೋಗು ಎಂದು ಉದಯ್ ಹಲ್ಲೆ ನಡೆಸಿದ್ದಾನೆ. ಇದರಿಂದ ಮನನೊಂದು ಕ್ರಿಮಿನಾಶಕ ಸೇವಿಸಿದ್ದಾಳೆ. ಚಿಕಿತ್ಸೆ ಫಲಕಾರಿಯಾಗದೇ ಆಗಸ್ಟ್ 9ರಂದು ಪ್ರಾಣ ಬಿಟ್ಟಿದ್ದಾಳೆ ಎಂದು ಕಣ್ಣೀರು ಇಟ್ಟಿದ್ದಾರೆ.

ಘಟನೆ ಸಂಬಂಧ ಸೂರ್ಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಮೃತ ಗೃಹಿಣಿ ಕುಟುಂಬದ ಆಗ್ರಹಿಸಿದೆ. ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!