ಮತ್ತೆ 69 ತಾಲಿಬಾನಿಗಳ ಸಾವು!

 

ಅಫ್ಘನ್ ಮೇಲೆ ದಾಳಿ ತೀವ್ರಗೊಳಿಸಿದ ಪಾಕಿಸ್ತಾನ, ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಸೇನಾ ಕಾರ್ಯಾಚರಣೆಯಲ್ಲಿ ಅಪ್ಸನ್‌ ಮತ್ತೆ 69 ತಾಲಿಬಾನ್ ಅಧಿಕಾರಿಗಳನ್ನು ಮತ್ತು ಅವರ ಬೆಂಬಲಿತ ಭಯೋತ್ಪಾದಕ ‘ರನ್ನು ಒಂದೇ ರಾತ್ರಿ ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ.
ಮಂಗಳವಾರ ಬೆಳಗಿನ ಜಾವ ನೈರುತ್ಯ ಭಾಗದ ಗಡಿಯಲ್ಲಿ ನಡೆದ ಪಾಕಿಸ್ತಾನ ಸೇನೆಯ ದಾಳಿಗಳಲ್ಲಿ 69 ತಾಲಿಬಾನ್ ಸಿಬ್ಬಂದಿಗಳು ಹಾಗೂ ಭಯೋತ್ಪಾದಕರು ಸತ್ತಿದ್ದಾರೆ ಎಂದು ತಿಳಿಸಿದೆ. ಈ ಮೊದಲು ದಾಳಿ ಶುರುವಾದಾಗಿನಿಂದ ಸುಮಾರು – 331 ಅಫ್ಘನ್‌ನ ಮಂದಿಯನ್ನು ಹತ್ಯೆ ಮಾಡಲಾಗಿದೆ ಎಂದು ಪಾಕ್ ತಿಳಿಸಿತ್ತು.

ಅನೇಕ ತಾಲಿಬಾಲಿನಿಗಳು ಚಮನ್ ಜಿಲ್ಲೆಯ ಗಡಿಯಲ್ಲಿ ಯಾವುದೇ ಶಸ್ತ್ರಗಳಿಲ್ಲದೇ ನಮ್ಮವರನ್ನು ಬರಿಗೈಯಲ್ಲಿ ಎದುರಿಸಲು ಬಂದು ಹತರಾಗಿದ್ದಾರೆ ಎಂದು ಮಾಹಿತಿ ಸಚಿವ ಆತುಲ್ಲಾ ತಾರರ್ ತಿಳಿಸಿದ್ದಾರೆ.
ಖೈಬ‌ರ್ ಪಂಕ್ತುವ್ವಾ ಪ್ರಾಂತ್ಯದ 12 ಸ್ಥಳಗಳಲ್ಲಿ ಅಫ್ಘನ್ ವಿರುದ್ಧ ದಾಳಿ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ನಮ್ಮ ಕಡೆ ಇಂದು
ಯಾವುದೇ ಸಾವು-ನೋವುಗಳಾಗಿಲ್ಲ ಎಂದು ವಿವರಿಸಿದ್ದಾರೆ.

ಪಾಕಿಸ್ತಾನ-ಅಫ್ಘಾನಿಸ್ತಾನದ 2,600 ಕಿಲೋಮೀಟರ್ ಉದ್ದದ ಗಡಿಗೆ ಹೊಂದಿ ಕೊಂಡ ಪಾಕ್‌ನ 53 ಸ್ಥಳಗಳನ್ನು ಗುರಿಯಾಗಿಸಿ ಅಫ್ಘಾನಿಸ್ತಾನ ಕಳೆದ ಫೆಬ್ರುವರಿ 26ರಂದು ದಾಳಿ ಮಾಡಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಶುಕ್ರವಾರ ಪಾಕಿಸ್ತಾನ ಸೇನೆ ಅಫ್ಘಾನಿಸ್ತಾನದ ರಾಜ ಧಾನಿ ಕಾಬೂಲ್ ಮತ್ತು ಕಾಂದಹಾರ್‌ಗಳ ಮೇಲೂ ಬಾಂಬ್ ದಾಳಿ ನಡೆಸಿತ್ತು. ಇದರಿಂದ ಎರಡೂ ದೇಶಗಳ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನು ಅಫ್ಘಾನಿಸ್ತಾನದಿಂದ ಪಾಕಿಸ್ತಾನದ ಕಡೆಗೆ ಡೋನ್ ದಾಳಿ ಮುಂದುವರಿದ ಕಾರಣ ಪಾಕಿಸ್ತಾನದ ಗಡಿಯ ಅನೇಕ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡ ಲಾಗಿದೆ. ಮೊಹಮಂದ್‌ನಲ್ಲಿ 54, ಘಲಾನೈ ನಲ್ಲಿ 1, ಬೈಜೈನಲ್ಲಿ 33, ಸಫಿಯಲ್ಲಿ 10 ಹಾಗೂ ಖೈಜೈನಲ್ಲಿ 2 ಶಾಲೆಗಳನ್ನು ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ವಜೀರಿಸ್ತಾನದಲ್ಲಿ 33, ಬಾಜರ್‌ನಲ್ಲಿ 39 ಶಾಲೆಗಳಿಗೂ ಬೀಗ ಹಾಕಲಾಗಿದೆ.

Related Posts

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC) 2025ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಪ್ರಕಟಿಸಿದೆ. ಈ ಮೂಲಕ ಅನುಜ್‌ ಅಗ್ನಿಹೋತ್ರಿಗೆ ದೇಶಕ್ಕೆ ಫಸ್ಟ್ ರ‍್ಯಾಂಕ್ ಪಡೆದುಕೊಂಡಿದ್ದಾರೆ. 2025ರ ಆಗಸ್ಟ್ ತಿಂಗಳಲ್ಲಿ ನಾಗರಿಕ ಸೇವೆಗಳ ಪರೀಕ್ಷೆಗಳು ನಡೆದಿದ್ದವು. ಇದೀಗ…

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

You Missed

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!