ಮತ್ತೆ 69 ತಾಲಿಬಾನಿಗಳ ಸಾವು!

 

ಅಫ್ಘನ್ ಮೇಲೆ ದಾಳಿ ತೀವ್ರಗೊಳಿಸಿದ ಪಾಕಿಸ್ತಾನ, ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಸೇನಾ ಕಾರ್ಯಾಚರಣೆಯಲ್ಲಿ ಅಪ್ಸನ್‌ ಮತ್ತೆ 69 ತಾಲಿಬಾನ್ ಅಧಿಕಾರಿಗಳನ್ನು ಮತ್ತು ಅವರ ಬೆಂಬಲಿತ ಭಯೋತ್ಪಾದಕ ‘ರನ್ನು ಒಂದೇ ರಾತ್ರಿ ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ.
ಮಂಗಳವಾರ ಬೆಳಗಿನ ಜಾವ ನೈರುತ್ಯ ಭಾಗದ ಗಡಿಯಲ್ಲಿ ನಡೆದ ಪಾಕಿಸ್ತಾನ ಸೇನೆಯ ದಾಳಿಗಳಲ್ಲಿ 69 ತಾಲಿಬಾನ್ ಸಿಬ್ಬಂದಿಗಳು ಹಾಗೂ ಭಯೋತ್ಪಾದಕರು ಸತ್ತಿದ್ದಾರೆ ಎಂದು ತಿಳಿಸಿದೆ. ಈ ಮೊದಲು ದಾಳಿ ಶುರುವಾದಾಗಿನಿಂದ ಸುಮಾರು – 331 ಅಫ್ಘನ್‌ನ ಮಂದಿಯನ್ನು ಹತ್ಯೆ ಮಾಡಲಾಗಿದೆ ಎಂದು ಪಾಕ್ ತಿಳಿಸಿತ್ತು.

ಅನೇಕ ತಾಲಿಬಾಲಿನಿಗಳು ಚಮನ್ ಜಿಲ್ಲೆಯ ಗಡಿಯಲ್ಲಿ ಯಾವುದೇ ಶಸ್ತ್ರಗಳಿಲ್ಲದೇ ನಮ್ಮವರನ್ನು ಬರಿಗೈಯಲ್ಲಿ ಎದುರಿಸಲು ಬಂದು ಹತರಾಗಿದ್ದಾರೆ ಎಂದು ಮಾಹಿತಿ ಸಚಿವ ಆತುಲ್ಲಾ ತಾರರ್ ತಿಳಿಸಿದ್ದಾರೆ.
ಖೈಬ‌ರ್ ಪಂಕ್ತುವ್ವಾ ಪ್ರಾಂತ್ಯದ 12 ಸ್ಥಳಗಳಲ್ಲಿ ಅಫ್ಘನ್ ವಿರುದ್ಧ ದಾಳಿ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ನಮ್ಮ ಕಡೆ ಇಂದು
ಯಾವುದೇ ಸಾವು-ನೋವುಗಳಾಗಿಲ್ಲ ಎಂದು ವಿವರಿಸಿದ್ದಾರೆ.

ಪಾಕಿಸ್ತಾನ-ಅಫ್ಘಾನಿಸ್ತಾನದ 2,600 ಕಿಲೋಮೀಟರ್ ಉದ್ದದ ಗಡಿಗೆ ಹೊಂದಿ ಕೊಂಡ ಪಾಕ್‌ನ 53 ಸ್ಥಳಗಳನ್ನು ಗುರಿಯಾಗಿಸಿ ಅಫ್ಘಾನಿಸ್ತಾನ ಕಳೆದ ಫೆಬ್ರುವರಿ 26ರಂದು ದಾಳಿ ಮಾಡಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಶುಕ್ರವಾರ ಪಾಕಿಸ್ತಾನ ಸೇನೆ ಅಫ್ಘಾನಿಸ್ತಾನದ ರಾಜ ಧಾನಿ ಕಾಬೂಲ್ ಮತ್ತು ಕಾಂದಹಾರ್‌ಗಳ ಮೇಲೂ ಬಾಂಬ್ ದಾಳಿ ನಡೆಸಿತ್ತು. ಇದರಿಂದ ಎರಡೂ ದೇಶಗಳ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನು ಅಫ್ಘಾನಿಸ್ತಾನದಿಂದ ಪಾಕಿಸ್ತಾನದ ಕಡೆಗೆ ಡೋನ್ ದಾಳಿ ಮುಂದುವರಿದ ಕಾರಣ ಪಾಕಿಸ್ತಾನದ ಗಡಿಯ ಅನೇಕ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡ ಲಾಗಿದೆ. ಮೊಹಮಂದ್‌ನಲ್ಲಿ 54, ಘಲಾನೈ ನಲ್ಲಿ 1, ಬೈಜೈನಲ್ಲಿ 33, ಸಫಿಯಲ್ಲಿ 10 ಹಾಗೂ ಖೈಜೈನಲ್ಲಿ 2 ಶಾಲೆಗಳನ್ನು ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ವಜೀರಿಸ್ತಾನದಲ್ಲಿ 33, ಬಾಜರ್‌ನಲ್ಲಿ 39 ಶಾಲೆಗಳಿಗೂ ಬೀಗ ಹಾಕಲಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!