8ರ ಬಾಲೆ ಅ*ಚಾರ ವಿರೋಧಿಸಿದ್ದಕ್ಕೆ ಕೊ* ಮಾಡಿದ್ದ ಆರೋಪಿಗೆ ಗುಂಡೇಟು.

ವಾರಾಣಸಿ:- ವಾರಾಣಸಿಯ ಶಾಲೆಯೊಂದರ ಬಳಿಕ ಗೋಣಿಚೀಲದಲ್ಲಿ 8 ವರ್ಷದ ಬಾಲಕಿಯ ಅರೆಬೆತ್ತಲೆ ಶವ ಪತ್ತೆಯಾಗಿತ್ತು. ಅತ್ಯಾಚಾರವನ್ನು ವಿರೋಧಿಸಿದ್ದಕ್ಕೆ ಆರೋಪಿ ಬಾಲಕಿಯನ್ನು ಕೊಂದು, ಗೋಣಿಚೀಲದಲ್ಲಿ ತುಂಬಿ ಎಸೆದು ಪರಾರಿಯಾಗಿದ್ದ. ಆರೋಪಿ ಇರ್ಷಾದ್ಗೆ ಗುಂಡು ಹಾರಿಸಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ವಾರಾಣಸಿಯ ಸುಜಾಬಾದ್ ಪ್ರದೇಶದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಯ ಶವ ಬಹದ್ದೂರ್ ಪ್ರಾಥಮಿಕ ಶಾಲೆಯ ಗೋಡೆಯ ಬಳಿ ಪತ್ತೆಯಾಗಿದೆ. ದೇಹದಾದ್ಯಂತ ರಕ್ತದ ಕಲೆಗಳು, ಮೂಗೇಟಿನ ಗುರುತುಗಳಿವೆ.
ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಇರ್ಷಾದ್ ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಸ್ವಲ್ಪ ಸಮಯದ ನಂತರ ಗೋಣಿಚೀಲದಲ್ಲಿ ಶವದೊಂದಿಗೆ ಹೊರಗೆ ಬರುತ್ತಿರುವುದು ಕಂಡುಬಂದಿದೆ. ಬಾಲಕಿಯ ಮೇಲೆ ಅತ್ಯಾಚಾರ ಎಸಗುವ ಯತ್ನವನ್ನು ವಿರೋಧಿಸಿದ ಇರ್ಷಾದ್ ಬಾಲಕಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದಾಗ, ಪಕ್ಕದ ಮನೆಯ ಇರ್ಷಾದ್ ಎಂಬಾತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿರುವುದು ದೃಢಪಟ್ಟಿದೆ. ಆಕೆ ತಡೆದ ಕಾರಣ ಕಲ್ಲಿನಿಂದ ಆಕೆಯನ್ನು ಕೊಂದು ಹಾಕಿದ್ದಾನೆ. ಶವವನ್ನು ಗೋಣಿಚೀಲದಲ್ಲಿ ಹಾಕಿ ಶಾಲೆಯ ಮುಂದೆ ಎಸೆದಿದ್ದಾನೆ ಎಂದು ವಾರಾಣಸಿ ಕಾಶಿ ವಲಯದ ಡಿಸಿಪಿ ಗೌರವ್ ಬನ್ಸ್ವಾಲ್ ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

ಬಾಲಕಿಯ ತಂದೆ ದಿವ್ಯಾಂಗರಾಗಿದ್ದು, ಆಟೋ ಚಾಲನೆ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಬಾಲಕಿ ಸಂಜೆ 6.30ರ ಸುಮಾರಿಗೆ ಸಮೀಪದ ಅಂಗಡಿಗೆ ಸೊಳ್ಳೆಬತ್ತಿಯನ್ನು ತರಲು ಹೋಗಿದ್ದಳು. ಆಕೆ ಮನೆಗೆ ಬಾರದೇ ಇದ್ದಾಗ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದರು. ಎಷ್ಟೇ ಹುಡುಕಿದರೂ ಸಿಗದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.
ಹತ್ತಿರದ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಕ್ಯಾನ್ ಮಾಡಿದ ನಂತರ, ಪೊಲೀಸರು ಶಂಕಿತ ಇರ್ಷಾದ್ನನ್ನು ಪತ್ತೆ ಮಾಡಿದ್ದಾರೆ. ಆತನನ್ನು ಬಂಧಿಸುವ ಕಾರ್ಯಾಚರಣೆ ವೇಳೆ ಇರ್ಷಾದ್ ಪೊಲೀಸ್ ತಂಡದತ್ತ ಗುಂಡು ಹಾರಿಸಿದ್ದಾನೆ. ಪ್ರತಿಯಾಗಿ ಪೊಲೀಸರೂ ಗುಂಡು ಹಾರಿಸಿದ್ದು, ಈ ವೇಳೆ ಇರ್ಷಾದ್ ಕಾಲಿಗೆ ಗುಂಡು ತಗುಲಿದೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!