8ರ ಬಾಲೆ ಅ*ಚಾರ ವಿರೋಧಿಸಿದ್ದಕ್ಕೆ ಕೊ* ಮಾಡಿದ್ದ ಆರೋಪಿಗೆ ಗುಂಡೇಟು.

ವಾರಾಣಸಿ:- ವಾರಾಣಸಿಯ ಶಾಲೆಯೊಂದರ ಬಳಿಕ ಗೋಣಿಚೀಲದಲ್ಲಿ 8 ವರ್ಷದ ಬಾಲಕಿಯ ಅರೆಬೆತ್ತಲೆ ಶವ ಪತ್ತೆಯಾಗಿತ್ತು. ಅತ್ಯಾಚಾರವನ್ನು ವಿರೋಧಿಸಿದ್ದಕ್ಕೆ ಆರೋಪಿ ಬಾಲಕಿಯನ್ನು ಕೊಂದು, ಗೋಣಿಚೀಲದಲ್ಲಿ ತುಂಬಿ ಎಸೆದು ಪರಾರಿಯಾಗಿದ್ದ. ಆರೋಪಿ ಇರ್ಷಾದ್ಗೆ ಗುಂಡು ಹಾರಿಸಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ವಾರಾಣಸಿಯ ಸುಜಾಬಾದ್ ಪ್ರದೇಶದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಯ ಶವ ಬಹದ್ದೂರ್ ಪ್ರಾಥಮಿಕ ಶಾಲೆಯ ಗೋಡೆಯ ಬಳಿ ಪತ್ತೆಯಾಗಿದೆ. ದೇಹದಾದ್ಯಂತ ರಕ್ತದ ಕಲೆಗಳು, ಮೂಗೇಟಿನ ಗುರುತುಗಳಿವೆ.
ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಇರ್ಷಾದ್ ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಸ್ವಲ್ಪ ಸಮಯದ ನಂತರ ಗೋಣಿಚೀಲದಲ್ಲಿ ಶವದೊಂದಿಗೆ ಹೊರಗೆ ಬರುತ್ತಿರುವುದು ಕಂಡುಬಂದಿದೆ. ಬಾಲಕಿಯ ಮೇಲೆ ಅತ್ಯಾಚಾರ ಎಸಗುವ ಯತ್ನವನ್ನು ವಿರೋಧಿಸಿದ ಇರ್ಷಾದ್ ಬಾಲಕಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದಾಗ, ಪಕ್ಕದ ಮನೆಯ ಇರ್ಷಾದ್ ಎಂಬಾತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿರುವುದು ದೃಢಪಟ್ಟಿದೆ. ಆಕೆ ತಡೆದ ಕಾರಣ ಕಲ್ಲಿನಿಂದ ಆಕೆಯನ್ನು ಕೊಂದು ಹಾಕಿದ್ದಾನೆ. ಶವವನ್ನು ಗೋಣಿಚೀಲದಲ್ಲಿ ಹಾಕಿ ಶಾಲೆಯ ಮುಂದೆ ಎಸೆದಿದ್ದಾನೆ ಎಂದು ವಾರಾಣಸಿ ಕಾಶಿ ವಲಯದ ಡಿಸಿಪಿ ಗೌರವ್ ಬನ್ಸ್ವಾಲ್ ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

ಬಾಲಕಿಯ ತಂದೆ ದಿವ್ಯಾಂಗರಾಗಿದ್ದು, ಆಟೋ ಚಾಲನೆ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಬಾಲಕಿ ಸಂಜೆ 6.30ರ ಸುಮಾರಿಗೆ ಸಮೀಪದ ಅಂಗಡಿಗೆ ಸೊಳ್ಳೆಬತ್ತಿಯನ್ನು ತರಲು ಹೋಗಿದ್ದಳು. ಆಕೆ ಮನೆಗೆ ಬಾರದೇ ಇದ್ದಾಗ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದರು. ಎಷ್ಟೇ ಹುಡುಕಿದರೂ ಸಿಗದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.
ಹತ್ತಿರದ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಕ್ಯಾನ್ ಮಾಡಿದ ನಂತರ, ಪೊಲೀಸರು ಶಂಕಿತ ಇರ್ಷಾದ್ನನ್ನು ಪತ್ತೆ ಮಾಡಿದ್ದಾರೆ. ಆತನನ್ನು ಬಂಧಿಸುವ ಕಾರ್ಯಾಚರಣೆ ವೇಳೆ ಇರ್ಷಾದ್ ಪೊಲೀಸ್ ತಂಡದತ್ತ ಗುಂಡು ಹಾರಿಸಿದ್ದಾನೆ. ಪ್ರತಿಯಾಗಿ ಪೊಲೀಸರೂ ಗುಂಡು ಹಾರಿಸಿದ್ದು, ಈ ವೇಳೆ ಇರ್ಷಾದ್ ಕಾಲಿಗೆ ಗುಂಡು ತಗುಲಿದೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!