9 ದಿನಗಳ ಕಾಲ ಹಾಲನೂರು ಶ್ರೀ ಮಲ್ಲೇಶ್ವರ ಸ್ವಾಮಿ, ಪಾರ್ವತಿದೇವಿ ಜಾತ್ರೆ.

ತುಮಕೂರು :- ತುಮಕೂರು ತಾಲ್ಲೂಕಿನ ಕಸಬಾ ಹೋಬಳಿ ಹಾಲನೂರು ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಮಲ್ಲೇಶ್ವರ ಸ್ವಾಮಿ, ಪಾರ್ವತಿದೇವಿ ಜಾತ್ರಾ ಮಹೋತ್ಸವ ಏಪ್ರಿಲ್ 8 ರಿಂದ ಏಪ್ರಿಲ್ 16ರವರೆಗೆ 9 ದಿನಗಳ ಕಾಲ ನಡೆಯಲಿದೆ.
ಜಿಲ್ಲಾಧಿಕಾರಿ ಶುಭ ಕಲ್ಯಾಣ್, ತಹಶೀಲ್ದಾರ್ ರಾಜೇಶ್ವರಿ, ಮುಜರಾಯಿ ಇಲಾಖೆ ಹಾಗೂ ಭಕ್ತಮಂಡಲಿ ,ಹಾಲನೂರು ಗ್ರಾಮದ ಯಜಮಾನರು, ಗ್ರಾಮಸ್ಥರ ನೇತೃತ್ವದಲ್ಲಿ ನಡೆಯಲಿರುವ ಜಾತ್ರಾ ಮಹೋತ್ಸವ ಏ.8 ರಂದು ಮಂಗಳವಾರ ಸಂಜೆ ಧ್ವಜಾರೋಹಣದೊಂದಿಗೆ ಚಾಲನೆಗೊಳ್ಳಲಿದೆ. ಏ.9 ರಂದು ಗ್ರಾಮದ ಎಲ್ಲಾ ಮನೆಗಳಿಂದ ಆರತಿಗಳು ಬರಲಿವೆ.ನಂತರ ಗಿರಿಜಾ ಕಲ್ಯಾಣ ನಡೆಯಲಿದೆ.
ಏ.10 ತ್ರಯೋದಶಿ ಗುರುವಾರ ಮಧ್ಯಾಹ್ನ 12-45 ಕ್ಕೆ ಬ್ರಹ್ಮ ರಥೋತ್ಸವ ನಡೆಯಲಿದೆ. ಬೆಳ್ಳಾವಿ ಮಠದ ಶ್ರೀ ಕಾರದ ವೀರಬಸವ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಏ.11 ರಂದು ಸಂಜೆ ಅಡ್ಡ ಪಲ್ಲಕ್ಕಿ ಉತ್ಸವ ಹಾಗೂ ಅದಲಾಪುರ ಮಹಾಲಕ್ಷ್ಮಿ ದೇವಿ ಮೆರವಣಿಗೆ ನೆರವೇರಲಿದೆ. ರಂಗೋಲಿ ಸ್ಪರ್ಧೆ ಸಹ ಏರ್ಪಡಿಸಲಾಗಿದೆ.
ಏ.12 ರಂದು ಹುಣ್ಣಿಮೆ ಶನಿವಾರದಂದು ಜಾತ್ರೆಯ ಮುಖ್ಯ ಆಕರ್ಷಣೆ ಉಪ್ಪರಿಗೆ ವಾಹನ ಉತ್ಸವ ನಡೆಯಲಿದ್ದು ,ಅಂದು ರಾತ್ರಿ ಶ್ರೀ ಮಲ್ಲೇಶ್ವರ ಕೃಪಾಪೋಷಿತ ನಾಟಕ ಮಂಡಳಿ ವತಿಯಿಂದ ಕುರುಕ್ಷೇತ್ರ ನಾಟಕ ಪ್ರದರ್ಶನವಾಗಲಿದೆ. ಏ.13 ರಂದು ರುದ್ರಾಕ್ಷಿ ಮಂಟಪ ಮೆರವಣಿಗೆ ಏ.16 ರಂದು ವಸಂತೋತ್ಸವ ಓಕುಳಿ ಆಚರಣೆ ಮೂಲಕ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ. ಜಾತ್ರೆ ನಡೆಯುವ 9 ದಿನವೂ ನಿರಂತರವಾಗಿ ಅನ್ನ ದಾಸೋಹ ನಡೆಯಲಿದೆ. ಮುಜರಾಯಿ ಇಲಾಖೆ ನೇತೃತ್ವದಲ್ಲಿ ನಡೆಯುವ ಸದರಿ ಜಾತ್ರಾ ಮಹೋತ್ಸವದ ವೇಳೆ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಇರುತ್ತದೆ.
ರಥ ಬೀದಿಯಲ್ಲಿ ನೂರಾರು ಅಂಗಡಿ ಮುಂಗಟ್ಟು ತೆರೆದು ಕೊಳ್ಳಲಿವೆ. ಸಹಸ್ರಾರು ಭಕ್ತಾದಿಗಳು ಭಾಗವಹಿಸಲಿದ್ದಾರೆ. ಪ್ರಮುಖವಾಗಿ ಹರಕೆ ಮಾಡಿಕೊಂಡವರು ಹಾಗೂ ಹರಕೆ ಮಾಡಿಕೊಳ್ಳುವವರು ಕುಟುಂಬ ಸಮೇತರಾಗಿ ಆಗಮಿಸಿ ಹರಕೆ ತೀರಿಸಲಿದ್ದಾರೆ. ಸಂತಾನ, ಆರೋಗ್ಯ,ವಿದ್ಯೆ, ಲಗ್ನ ಇತ್ಯಾದಿಗಳ ಈಡೇರಿಕೆಗೆ ಭಕ್ತರು ಹರಕೆ ಹೊತ್ತಿರುತ್ತಾರೆ. ಹರಕೆ ಈಡೇರಿದ ಮೇಲೆ ಹರಕೆ ತೀರಿಸುತ್ತಾರೆ. ಹಾಗೆಯೇ ಜಾತ್ರೆಗೆ ಬರುವ ಭಕ್ತಾದಿಗಳು ಹಾಲನೂರು ಸುತ್ತಮುತ್ತಲಿನ ಪುರಾಣ ಪ್ರಸಿದ್ಧ ದೇವಾಲಯಗಳಾದ ಅರೆಯೂರು ವೈದ್ಯನಾಥೇಶ್ವರ,ಕೈದಾಳ ಚನ್ನಕೇಶವ,ಗೂಳೂರು ಗಣೇಶ, ಹೆತ್ತೇನಹಳ್ಳಿ ಮಾರಮ್ಮನ ಶ್ರೀ ಕ್ಷೇತ್ರಗಳಿಗೆ ಭೇಟಿ ನೀಡಬಹುದಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!