9 ದಿನಗಳ ಕಾಲ ಹಾಲನೂರು ಶ್ರೀ ಮಲ್ಲೇಶ್ವರ ಸ್ವಾಮಿ, ಪಾರ್ವತಿದೇವಿ ಜಾತ್ರೆ.

ತುಮಕೂರು :- ತುಮಕೂರು ತಾಲ್ಲೂಕಿನ ಕಸಬಾ ಹೋಬಳಿ ಹಾಲನೂರು ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಮಲ್ಲೇಶ್ವರ ಸ್ವಾಮಿ, ಪಾರ್ವತಿದೇವಿ ಜಾತ್ರಾ ಮಹೋತ್ಸವ ಏಪ್ರಿಲ್ 8 ರಿಂದ ಏಪ್ರಿಲ್ 16ರವರೆಗೆ 9 ದಿನಗಳ ಕಾಲ ನಡೆಯಲಿದೆ.
ಜಿಲ್ಲಾಧಿಕಾರಿ ಶುಭ ಕಲ್ಯಾಣ್, ತಹಶೀಲ್ದಾರ್ ರಾಜೇಶ್ವರಿ, ಮುಜರಾಯಿ ಇಲಾಖೆ ಹಾಗೂ ಭಕ್ತಮಂಡಲಿ ,ಹಾಲನೂರು ಗ್ರಾಮದ ಯಜಮಾನರು, ಗ್ರಾಮಸ್ಥರ ನೇತೃತ್ವದಲ್ಲಿ ನಡೆಯಲಿರುವ ಜಾತ್ರಾ ಮಹೋತ್ಸವ ಏ.8 ರಂದು ಮಂಗಳವಾರ ಸಂಜೆ ಧ್ವಜಾರೋಹಣದೊಂದಿಗೆ ಚಾಲನೆಗೊಳ್ಳಲಿದೆ. ಏ.9 ರಂದು ಗ್ರಾಮದ ಎಲ್ಲಾ ಮನೆಗಳಿಂದ ಆರತಿಗಳು ಬರಲಿವೆ.ನಂತರ ಗಿರಿಜಾ ಕಲ್ಯಾಣ ನಡೆಯಲಿದೆ.
ಏ.10 ತ್ರಯೋದಶಿ ಗುರುವಾರ ಮಧ್ಯಾಹ್ನ 12-45 ಕ್ಕೆ ಬ್ರಹ್ಮ ರಥೋತ್ಸವ ನಡೆಯಲಿದೆ. ಬೆಳ್ಳಾವಿ ಮಠದ ಶ್ರೀ ಕಾರದ ವೀರಬಸವ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಏ.11 ರಂದು ಸಂಜೆ ಅಡ್ಡ ಪಲ್ಲಕ್ಕಿ ಉತ್ಸವ ಹಾಗೂ ಅದಲಾಪುರ ಮಹಾಲಕ್ಷ್ಮಿ ದೇವಿ ಮೆರವಣಿಗೆ ನೆರವೇರಲಿದೆ. ರಂಗೋಲಿ ಸ್ಪರ್ಧೆ ಸಹ ಏರ್ಪಡಿಸಲಾಗಿದೆ.
ಏ.12 ರಂದು ಹುಣ್ಣಿಮೆ ಶನಿವಾರದಂದು ಜಾತ್ರೆಯ ಮುಖ್ಯ ಆಕರ್ಷಣೆ ಉಪ್ಪರಿಗೆ ವಾಹನ ಉತ್ಸವ ನಡೆಯಲಿದ್ದು ,ಅಂದು ರಾತ್ರಿ ಶ್ರೀ ಮಲ್ಲೇಶ್ವರ ಕೃಪಾಪೋಷಿತ ನಾಟಕ ಮಂಡಳಿ ವತಿಯಿಂದ ಕುರುಕ್ಷೇತ್ರ ನಾಟಕ ಪ್ರದರ್ಶನವಾಗಲಿದೆ. ಏ.13 ರಂದು ರುದ್ರಾಕ್ಷಿ ಮಂಟಪ ಮೆರವಣಿಗೆ ಏ.16 ರಂದು ವಸಂತೋತ್ಸವ ಓಕುಳಿ ಆಚರಣೆ ಮೂಲಕ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ. ಜಾತ್ರೆ ನಡೆಯುವ 9 ದಿನವೂ ನಿರಂತರವಾಗಿ ಅನ್ನ ದಾಸೋಹ ನಡೆಯಲಿದೆ. ಮುಜರಾಯಿ ಇಲಾಖೆ ನೇತೃತ್ವದಲ್ಲಿ ನಡೆಯುವ ಸದರಿ ಜಾತ್ರಾ ಮಹೋತ್ಸವದ ವೇಳೆ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಇರುತ್ತದೆ.
ರಥ ಬೀದಿಯಲ್ಲಿ ನೂರಾರು ಅಂಗಡಿ ಮುಂಗಟ್ಟು ತೆರೆದು ಕೊಳ್ಳಲಿವೆ. ಸಹಸ್ರಾರು ಭಕ್ತಾದಿಗಳು ಭಾಗವಹಿಸಲಿದ್ದಾರೆ. ಪ್ರಮುಖವಾಗಿ ಹರಕೆ ಮಾಡಿಕೊಂಡವರು ಹಾಗೂ ಹರಕೆ ಮಾಡಿಕೊಳ್ಳುವವರು ಕುಟುಂಬ ಸಮೇತರಾಗಿ ಆಗಮಿಸಿ ಹರಕೆ ತೀರಿಸಲಿದ್ದಾರೆ. ಸಂತಾನ, ಆರೋಗ್ಯ,ವಿದ್ಯೆ, ಲಗ್ನ ಇತ್ಯಾದಿಗಳ ಈಡೇರಿಕೆಗೆ ಭಕ್ತರು ಹರಕೆ ಹೊತ್ತಿರುತ್ತಾರೆ. ಹರಕೆ ಈಡೇರಿದ ಮೇಲೆ ಹರಕೆ ತೀರಿಸುತ್ತಾರೆ. ಹಾಗೆಯೇ ಜಾತ್ರೆಗೆ ಬರುವ ಭಕ್ತಾದಿಗಳು ಹಾಲನೂರು ಸುತ್ತಮುತ್ತಲಿನ ಪುರಾಣ ಪ್ರಸಿದ್ಧ ದೇವಾಲಯಗಳಾದ ಅರೆಯೂರು ವೈದ್ಯನಾಥೇಶ್ವರ,ಕೈದಾಳ ಚನ್ನಕೇಶವ,ಗೂಳೂರು ಗಣೇಶ, ಹೆತ್ತೇನಹಳ್ಳಿ ಮಾರಮ್ಮನ ಶ್ರೀ ಕ್ಷೇತ್ರಗಳಿಗೆ ಭೇಟಿ ನೀಡಬಹುದಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!