ಮೈಸೂರಿನ ಕುಕ್ಕರಹಳ್ಳಿ ಕೆರೆ ಬಳಿ ರೈಲ್ವೆ ಅಂಡರ್ ಪಾಸ್ ನಿರ್ಮಾಣಕ್ಕೆ ಸಿದ್ಧತೆ!

 

ಕುಕ್ಕರಹಳ್ಳಿ ಕೆರೆ ಬಳಿ ರೈಲ್ವೆ ಅಂಡರ್ ಪಾಸ್ ನಿರ್ಮಾಣಕ್ಕೆ ಡಿಪಿಆರ್ ಸಿದ್ಧವಾಗಿದೆ. ಕಾಮಗಾರಿಗೆ ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.
ಪಾರಂಪರಿಕ ನಗರಿಯ ಜಲಮೂಲ ಹಾಗೂ ನಗರ ಸೌಂದರ್ಯದ ಮುಕುಟದಂತಿರುವ ಕುಕ್ಕರಹಳ್ಳಿ ಕೆರೆ ಬಳಿಯ ರೈಲ್ವೆ ಗೇಟಿನ ಕೆಳಭಾಗದಲ್ಲಿ ಕೆಳ ಸೇತುವೆ ಮಾಡಲು ಯೋಜನೆ ಸಿದ್ಧಪಡಿಸಲಾಗಿದೆ. ಇದಕ್ಕೆ ಪರಿಸರವಾದಿಗಳು ವಿರೋಧ ವ್ಯಕಪಡಿಸಿದರೆ, ಇನ್ನೊಂದೆಡೆ ಪರಿಸರಕ್ಕೆ ಯಾವುದೇ ಧಕ್ಕೆಯಾಗದಂತೆ ಕೆಳ ಸೇತುವೆ ನಿರ್ಮಾಣ ಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಅಶೋಕ್ ಪುರಂ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸಿದ ಬಳಿಕ ಕುಕ್ಕರಹಳ್ಳಿ ಬಳಿಯ ರೈಲ್ವೆ ಗೇಟ್ ಮೂಲಕ ಪ್ರತಿನಿತ್ಯ ಸುಮಾರು 20 ರೈಲುಗಳು ಅಶೋಕ್ ಪುರಂ ರೈಲ್ವೆ ನಿಲ್ದಾಣ ಹಾಗೂ ಚಾಮರಾಜನಗರಕ್ಕೆ ಓಡಾಡುತ್ತವೆ. ಅದರ ಜೊತೆಗೆ ಈ ರೈಲ್ವೆ ಹಳಿಗಳ ಮೇಲೆ ಬೋಗಾದಿ ಕಡೆ ಓಡಾಡುವ ನೂರಾರು ವಾಹನಗಳಿಂದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಇದನ್ನು ತಪ್ಪಿಸಲು ರೈಲ್ವೆ ಕ್ರಾಸಿಂಗ್​ಗೆ ಅಂಡರ್ ಪಾಸ್ ನಿರ್ಮಾಣ ಮಾಡಲು ಈಗಾಗಲೇ ಡಿಪಿಆರ್ ತಯಾರಿಸಲಾಗಿದೆ. ಸಂಸದ ಯದುವೀರ್ ಒಡೆಯರ್ ಹಾಗೂ ಅಧಿಕಾರಿಗಳ ತಂಡ ಅಂಡರ್ ಪಾಸ್ ನಿರ್ಮಾಣದ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದು, ಗುದ್ದಲಿ ಪೂಜೆಗೂ ಸಿದ್ಧತೆ ಮಾಡಿಕೊಳ್ಳಲಾಗಿದೆ.

80 ಮರಗಳನ್ನು ಗುರುತು ಮಾಡಲಾಗಿದೆ: ಮೈಸೂರು ವಿಶ್ವವಿದ್ಯಾಲಯದ ಕ್ರಾಫರ್ಡ್ ಭವನದಿಂದ ಕುಕ್ಕರಹಳ್ಳಿ ಕೆರೆಯ ಮುಂಭಾಗದವರೆಗೆ ರೈಲ್ವೆ ಅಂಡರ್ ಪಾಸ್ 588 ಮೀಟರ್ ಉದ್ದ ಇರಲಿದೆ. ಇದಕ್ಕಾಗಿ ಕ್ರಾಫರ್ಡ್ ಭವನ ಕಾಂಪೌಂಡ್ ಹಾಗೂ ಪಕ್ಕದ ಮೈದಾನದ ಕಾಂಪೌಂಡ್ ತೆರವುಗೊಳಿಸಬೇಕು. ಕುಕ್ಕರಹಳ್ಳಿ ಕೆರೆ ಜಂಕ್ಷನ್​ನ ಎರಡು ಬದಿಯ ಸುಮಾರು 30ರಿಂದ 100 ವರ್ಷ ಹಳೆಯದಾದ ಆಲ, ಛತ್ರಿ, ಹೊಂಗೆ, ತೇಗ, ಅರಳಿ ಹಾಗೂ ಬೇವು ಸೇರಿದಂತೆ 80ಕ್ಕೂ ಹೆಚ್ಚು ಮರಗಳಿವೆ. ಈ ಮರಗಳನ್ನ ಕಡಿದರೆ ಮೈಸೂರು ನಗರದ ಜಲಮೂಲ ಹಾಗೂ ಸೌಂದರ್ಯಕ್ಕೆ ಧಕ್ಕೆಯಾಗಲಿದೆ. ಆದ್ದರಿಂದ ಇಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂಡರ್ ಪಾಸ್ ರಸ್ತೆಯನ್ನ ಕೈ ಬಿಡಬೇಕೆಂಬುದು ಪರಿಸರವಾದಿಗಳ ಆಗ್ರಹ.

“ಸದಾ ವಾಹನ ದಟ್ಟಣೆಯಿಂದ ಕೂಡಿರುವ ಈ ರೈಲ್ವೆ ಕ್ರಾಸಿಂಗ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಬೇಡಿಕೆ ಇತ್ತು. ಆದ್ದರಿಂದ ಇಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಡಿಪಿಆರ್ ತಯಾರಿಸಲಾಗಿದ್ದು, ಸ್ಥಳ ಪರಿಶೀಲನೆ ಸಹ ನಡೆಸಲಾಗಿದೆ. ಕುಕ್ಕರಹಳ್ಳಿ ಕೆರೆಯ ಆವರಣದಲ್ಲಿರುವ ಕೆಲವು ಮರಗಳನ್ನ ಸ್ಥಳಾಂತರಿಸಲು ಚಿಂತನೆ ನಡೆಸಲಾಗಿದೆ. ಆದರೂ ಪರಿಸರವಾದಿಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸಭೆ ನಡೆಸಿ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಲಾಗುವುದು. ಆನಂತರ ಮುಂದುವರೆಯಲಾಗುವುದು” ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದರು.

ರಾಷ್ಟ್ರಕವಿ ಕುವೆಂಪು ಅವರ ವಾಕಿಂಗ್​ನ ನೆಚ್ಚಿನ ತಾಣ ಹಾಗೂ ಮೈಸೂರು ನಗರದ ಹೃದಯ ಭಾಗದಲ್ಲಿ ಇರುವ ಕುಕ್ಕರಹಳ್ಳಿ ಕೆರೆ ಇಂದಿಗೂ ಸಹ ಮೈಸೂರಿನ ನೆಚ್ಚಿನ ವಾಕಿಂಗ್ ಸ್ಥಳವಾಗಿದೆ. ಇಲ್ಲಿನ ಸುಂದರ ಪರಿಸರದಲ್ಲಿ ವಾಕಿಂಗ್ ಮಾಡಲು ಬೆಳಗ್ಗೆ ಮತ್ತು ಸಂಜೆ ಜನರು ಆಗಮಿಸುತ್ತಾರೆ. ಇಂತಹ ಪರಿಸರವನ್ನ ಹಾಳುಮಾಡಿ ರೈಲ್ವೆ ಅಂಡರ್ ಪಾಸ್ ನಿರ್ಮಾಣ ಬೇಡ ಹಾಗೂ ಈಗಾಗಲೇ ಪಕ್ಕದಲ್ಲೇ ಸರಸ್ವತಿ ಪುರಂ ಅಂಡರ್ ಪಾಸ್ ಇದೆ, ಜೊತೆಗೆ ಕಲಾಮಂದಿರ ರಸ್ತೆ ಇದೆ, ಮೈಸೂರು ಪಾರಂಪರಿಕ ನಗರವಾಗಿರಲು ಇಂತಹ ಕಾಮಗಾರಿಗಳು ಬೇಡ ಎನ್ನುತ್ತಾರೆ ಪರಿಸರವಾದಿಗಳು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು