ಮೈಸೂರಿನ ಕುಕ್ಕರಹಳ್ಳಿ ಕೆರೆ ಬಳಿ ರೈಲ್ವೆ ಅಂಡರ್ ಪಾಸ್ ನಿರ್ಮಾಣಕ್ಕೆ ಸಿದ್ಧತೆ!

 

ಕುಕ್ಕರಹಳ್ಳಿ ಕೆರೆ ಬಳಿ ರೈಲ್ವೆ ಅಂಡರ್ ಪಾಸ್ ನಿರ್ಮಾಣಕ್ಕೆ ಡಿಪಿಆರ್ ಸಿದ್ಧವಾಗಿದೆ. ಕಾಮಗಾರಿಗೆ ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.
ಪಾರಂಪರಿಕ ನಗರಿಯ ಜಲಮೂಲ ಹಾಗೂ ನಗರ ಸೌಂದರ್ಯದ ಮುಕುಟದಂತಿರುವ ಕುಕ್ಕರಹಳ್ಳಿ ಕೆರೆ ಬಳಿಯ ರೈಲ್ವೆ ಗೇಟಿನ ಕೆಳಭಾಗದಲ್ಲಿ ಕೆಳ ಸೇತುವೆ ಮಾಡಲು ಯೋಜನೆ ಸಿದ್ಧಪಡಿಸಲಾಗಿದೆ. ಇದಕ್ಕೆ ಪರಿಸರವಾದಿಗಳು ವಿರೋಧ ವ್ಯಕಪಡಿಸಿದರೆ, ಇನ್ನೊಂದೆಡೆ ಪರಿಸರಕ್ಕೆ ಯಾವುದೇ ಧಕ್ಕೆಯಾಗದಂತೆ ಕೆಳ ಸೇತುವೆ ನಿರ್ಮಾಣ ಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಅಶೋಕ್ ಪುರಂ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸಿದ ಬಳಿಕ ಕುಕ್ಕರಹಳ್ಳಿ ಬಳಿಯ ರೈಲ್ವೆ ಗೇಟ್ ಮೂಲಕ ಪ್ರತಿನಿತ್ಯ ಸುಮಾರು 20 ರೈಲುಗಳು ಅಶೋಕ್ ಪುರಂ ರೈಲ್ವೆ ನಿಲ್ದಾಣ ಹಾಗೂ ಚಾಮರಾಜನಗರಕ್ಕೆ ಓಡಾಡುತ್ತವೆ. ಅದರ ಜೊತೆಗೆ ಈ ರೈಲ್ವೆ ಹಳಿಗಳ ಮೇಲೆ ಬೋಗಾದಿ ಕಡೆ ಓಡಾಡುವ ನೂರಾರು ವಾಹನಗಳಿಂದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಇದನ್ನು ತಪ್ಪಿಸಲು ರೈಲ್ವೆ ಕ್ರಾಸಿಂಗ್​ಗೆ ಅಂಡರ್ ಪಾಸ್ ನಿರ್ಮಾಣ ಮಾಡಲು ಈಗಾಗಲೇ ಡಿಪಿಆರ್ ತಯಾರಿಸಲಾಗಿದೆ. ಸಂಸದ ಯದುವೀರ್ ಒಡೆಯರ್ ಹಾಗೂ ಅಧಿಕಾರಿಗಳ ತಂಡ ಅಂಡರ್ ಪಾಸ್ ನಿರ್ಮಾಣದ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದು, ಗುದ್ದಲಿ ಪೂಜೆಗೂ ಸಿದ್ಧತೆ ಮಾಡಿಕೊಳ್ಳಲಾಗಿದೆ.

80 ಮರಗಳನ್ನು ಗುರುತು ಮಾಡಲಾಗಿದೆ: ಮೈಸೂರು ವಿಶ್ವವಿದ್ಯಾಲಯದ ಕ್ರಾಫರ್ಡ್ ಭವನದಿಂದ ಕುಕ್ಕರಹಳ್ಳಿ ಕೆರೆಯ ಮುಂಭಾಗದವರೆಗೆ ರೈಲ್ವೆ ಅಂಡರ್ ಪಾಸ್ 588 ಮೀಟರ್ ಉದ್ದ ಇರಲಿದೆ. ಇದಕ್ಕಾಗಿ ಕ್ರಾಫರ್ಡ್ ಭವನ ಕಾಂಪೌಂಡ್ ಹಾಗೂ ಪಕ್ಕದ ಮೈದಾನದ ಕಾಂಪೌಂಡ್ ತೆರವುಗೊಳಿಸಬೇಕು. ಕುಕ್ಕರಹಳ್ಳಿ ಕೆರೆ ಜಂಕ್ಷನ್​ನ ಎರಡು ಬದಿಯ ಸುಮಾರು 30ರಿಂದ 100 ವರ್ಷ ಹಳೆಯದಾದ ಆಲ, ಛತ್ರಿ, ಹೊಂಗೆ, ತೇಗ, ಅರಳಿ ಹಾಗೂ ಬೇವು ಸೇರಿದಂತೆ 80ಕ್ಕೂ ಹೆಚ್ಚು ಮರಗಳಿವೆ. ಈ ಮರಗಳನ್ನ ಕಡಿದರೆ ಮೈಸೂರು ನಗರದ ಜಲಮೂಲ ಹಾಗೂ ಸೌಂದರ್ಯಕ್ಕೆ ಧಕ್ಕೆಯಾಗಲಿದೆ. ಆದ್ದರಿಂದ ಇಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂಡರ್ ಪಾಸ್ ರಸ್ತೆಯನ್ನ ಕೈ ಬಿಡಬೇಕೆಂಬುದು ಪರಿಸರವಾದಿಗಳ ಆಗ್ರಹ.

“ಸದಾ ವಾಹನ ದಟ್ಟಣೆಯಿಂದ ಕೂಡಿರುವ ಈ ರೈಲ್ವೆ ಕ್ರಾಸಿಂಗ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಬೇಡಿಕೆ ಇತ್ತು. ಆದ್ದರಿಂದ ಇಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಡಿಪಿಆರ್ ತಯಾರಿಸಲಾಗಿದ್ದು, ಸ್ಥಳ ಪರಿಶೀಲನೆ ಸಹ ನಡೆಸಲಾಗಿದೆ. ಕುಕ್ಕರಹಳ್ಳಿ ಕೆರೆಯ ಆವರಣದಲ್ಲಿರುವ ಕೆಲವು ಮರಗಳನ್ನ ಸ್ಥಳಾಂತರಿಸಲು ಚಿಂತನೆ ನಡೆಸಲಾಗಿದೆ. ಆದರೂ ಪರಿಸರವಾದಿಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸಭೆ ನಡೆಸಿ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಲಾಗುವುದು. ಆನಂತರ ಮುಂದುವರೆಯಲಾಗುವುದು” ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದರು.

ರಾಷ್ಟ್ರಕವಿ ಕುವೆಂಪು ಅವರ ವಾಕಿಂಗ್​ನ ನೆಚ್ಚಿನ ತಾಣ ಹಾಗೂ ಮೈಸೂರು ನಗರದ ಹೃದಯ ಭಾಗದಲ್ಲಿ ಇರುವ ಕುಕ್ಕರಹಳ್ಳಿ ಕೆರೆ ಇಂದಿಗೂ ಸಹ ಮೈಸೂರಿನ ನೆಚ್ಚಿನ ವಾಕಿಂಗ್ ಸ್ಥಳವಾಗಿದೆ. ಇಲ್ಲಿನ ಸುಂದರ ಪರಿಸರದಲ್ಲಿ ವಾಕಿಂಗ್ ಮಾಡಲು ಬೆಳಗ್ಗೆ ಮತ್ತು ಸಂಜೆ ಜನರು ಆಗಮಿಸುತ್ತಾರೆ. ಇಂತಹ ಪರಿಸರವನ್ನ ಹಾಳುಮಾಡಿ ರೈಲ್ವೆ ಅಂಡರ್ ಪಾಸ್ ನಿರ್ಮಾಣ ಬೇಡ ಹಾಗೂ ಈಗಾಗಲೇ ಪಕ್ಕದಲ್ಲೇ ಸರಸ್ವತಿ ಪುರಂ ಅಂಡರ್ ಪಾಸ್ ಇದೆ, ಜೊತೆಗೆ ಕಲಾಮಂದಿರ ರಸ್ತೆ ಇದೆ, ಮೈಸೂರು ಪಾರಂಪರಿಕ ನಗರವಾಗಿರಲು ಇಂತಹ ಕಾಮಗಾರಿಗಳು ಬೇಡ ಎನ್ನುತ್ತಾರೆ ಪರಿಸರವಾದಿಗಳು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 13 ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಸತತ 12 ಸೀಸನ್‌ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಮೊದಲ ಸೀಸನ್ ನೆನಪುಗಳು ಯಾವಾಗಲೂ ಅತ್ಯಂತ ಪ್ರಿಯವಾದವು. ಈ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!