ಇಂದು ಮುಂಜಾನೆ ರಿಲೀಸ್ ಆದ ಅಲ್ಲು ಅರ್ಜುನ್ ; ಮೊದಲ ರಿಯಾಕ್ಷನ್

ಹೈದರಾಬಾದ್ :- ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಎ11 ಆರೋಪಿ ಆಗಿರೋ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಈಗ ಅವರು ಮಧ್ಯಂತರ ಜಾಮೀನು ಪಡೆದು ಹೊರ ಬಂದಿದ್ದಾರೆ. ಜೈಲಿನಿಂದ ಇಂದು ಮುಂಜಾನೆ ರಿಲೀಸ್ ಆದ ಅವರು, ಪೊಲೀಸ್ ಭಧ್ರತೆಯೊಂದಿಗೆ ನೇರವಾಗಿ ಮನೆ ಸೇರಿದರು. ಅವರು ನಿವಾಸಕ್ಕೆ ಬಂದ ಬಳಿಕ ಮಾಧ್ಯಮಗಳಿಗೆ ರಿಯಾಕ್ಷನ್ ನೀಡಿದ್ದಾರೆ. ಅವರು ಅಭಿಮಾನಿಗಳಿಗೆ ಧನ್ಯವಾದ ಹೇಳುವುದನ್ನು ಮರೆತಿಲ್ಲ. ಜೊತೆಗೆ ಕಾನೂನಿಗೆ ತಲೆ ಬಾಗೋದಾಗಿ ಹೇಳಿದ್ದಾರೆ.

‘ಅಭಿಮಾನಿಗಳಿಗೆ ಧನ್ಯವಾದ. ನಾನು ಆರಾಮಗಿದ್ದೇನೆ. ಆ ಬಗ್ಗೆ ಚಿಂತಿಸೋದು ಬೇಡ. ನಾನು ಕಾನೂನನ್ನು ಗೌರವಿಸುತ್ತೇನೆ. ನಾನು ತನಿಖೆಗೆ ಸಹಕರಿಸುತ್ತೇನೆ’ ಎಂದು ಅಲ್ಲು ಅರ್ಜುನ್ ಪ್ರತಿಕ್ರಿಯಿಸಿದ್ದಾರೆ. ಈ ಸಂದರ್ಭದಲ್ಲಿ ಮೃತಪಟ್ಟ ರೇವತಿ ಕುಟುಂಬದವರ ಬಗ್ಗೆ ಮಾತನಾಡಲು ಮರೆತಿಲ್ಲ. ‘ನಾನು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಸಿನಿಮಾ ನೋಡಲು ಹೋದಾಗ ಈ ಘಟನೆ ನಡೆಯಿತು. ಅದು ಅಚಾನಕ್ಕಾಗಿ ಆಗಿದ್ದು. ಅದೊಂದು ಅಪಘಾತ’ ಎಂದಿದ್ದಾರೆ ಅಲ್ಲು ಅರ್ಜುನ್.
‘ಆ ರೀತಿ ಮಾಡಬೇಕು ಎಂಬ ಯಾವುದೇ ಉದ್ದೇಶ ಇರಲಿಲ್ಲ. ಅವರ ಕುಟುಂಬಕ್ಕೆ ನಾನು ಕ್ಷಮೆ ಕೇಳುತ್ತೇನೆ. ಅದು ನನ್ನ ವೈಯಕ್ತಿಕ ನಿಯಂತ್ರಣದಲ್ಲಿ ಇರಲಿಲ್ಲ. ನಾನು ಕಳೆದ 20 ವರ್ಷಗಳಿಂದ ಅಲ್ಲಿಗೆ ಸಿನಿಮಾ ನೋಡಲು ಹೋಗುತ್ತಿದ್ದೇನೆ. ನನ್ನದು ಮಾತ್ರವಲ್ಲದೆ, ನನ್ನ ಅಂಕಲ್ ಸಿನಿಮಾಗಳನ್ನೂ ಅಲ್ಲಿ ನೋಡಿದ್ದೇನೆ. 30ಕ್ಕೂ ಹೆಚ್ಚು ಬಾರಿ ಆ ಥಿಯೇಟರ್ಗೆ ಭೇಟಿ ಕೊಟ್ಟಿದ್ದೇನೆ. ಯಾವಾಗಲೂ ಈ ರೀತಿ ಆಗಿರಲಿಲ್ಲ. ಸಾವಿನ ನಷ್ಟ ತುಂಬಲು ಸಾಧ್ಯವಿಲ್ಲ. ಆದರೆ, ನನ್ನ ಕೈಲಾದ ಸಹಾಯ ಮಾಡುತ್ತೇನೆ’ ಎಂದು ಅಲ್ಲು ಅರ್ಜುನ್ ಭರವಸೆ ನೀಡಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!