ಮುಡಾಗೆ ಬಿಡಿಎ ರೂಪ ಪ್ರತ್ಯೇಕ ಕಾಯ್ದೆ ತರಲು ಸರ್ಕಾರ ನಿರ್ಧಾರ…

ಇನ್ನು ಕಂಡ ಕಂಡವರು ಸದಸ್ಯರಾಗುವಂತಿಲ್ಲ; ಸರ್ಕಾರದಿಂದ ಮೂರಾಲ್ಕು ಮಂದಿ ನಾಮನಿರ್ದೇಶನ
ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ಬೆಳಗಾವಿ ಅಧಿವೇಶನದಲ್ಲೇ ಮಸೂದೆ ಮಂಡನೆ ನಿರ್ಧಾರ

ಬೆಂಗಳೂರು, ಡಿ.14(ಕೆಎಂಶಿ)-ಭ್ರಷ್ಟಾಚಾರ ಹಗರಣಗಳ ಕೇಂದ್ರಬಿಂದು ಆಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ಕ್ಕೆ ಬಿಡಿಎ ಮಾದರಿಯಲ್ಲಿ ಪ್ರತ್ಯೇಕ ಕಾಯ್ದೆ ರೂಪಿಸಲು ಸರ್ಕಾರ ತೀರ್ಮಾನಿಸಿದೆ.ಬೆಳಗಾವಿಯ ಸುವರ್ಣಸೌಧದಲ್ಲಿ ನಿನ್ನೆ ರಾತ್ರಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಂಡಿರುವ ಸರ್ಕಾರ, ಚಳಿಗಾಲದ ಅಧಿವೇಶನದಲ್ಲೇ ಮಸೂದೆ ಮಂಡನೆ ಮಾಡಿ ಅಂಗೀಕಾರ ಪಡೆಯಲು ಸಮ್ಮತಿಸಿದೆ. ಕಾಯ್ದೆ ಜಾರಿಗೊಂಡ ನಂತರ ಭೂಸ್ವಾಧೀನ, ನಕ್ಷೆ, ನಿವೇಶನ ಹಂಚಿಕೆ ಸೇರಿದಂತೆ ಎಲ್ಲಾ ಕಾರ್ಯಗಳು ಬಿಡಿಎ ಮಾದರಿಯಲ್ಲೇ ನಡೆಯಲಿವೆ. ಭೂಸ್ವಾಧೀನ ನಂತರ ಮಾಲೀಕರಿಗೆ ಶೇ.50 ಇಲ್ಲವೇ 40ರಷ್ಟು ನಿವೇಶನ ಹಂಚಿಕೆ ಹಾಗೂ ಬೇಕಾಬಿಟ್ಟಿ ಬಿಡಿ ನಿವೇಶನಗಳನ್ನು ಹಂಚಿಕೆ ಮಾಡುವ ಸ್ವಾತಂತ್ರ್ಯಕ್ಕೆ ಕಡಿವಾಣ ಬೀಳಲಿದೆ. ಅಷ್ಟೇ ಅಲ್ಲ, ಪ್ರಾಧಿಕಾರಕ್ಕೆ ಕೇವಲ ಮೂರರಿಂದ ನಾಲ್ಕು ಮಂದಿ ನಾಮನಿರ್ದೇಶನ ಸದಸ್ಯರಿರುತ್ತಾರೆ.

ಈ ಮೊದಲು ಮುಡಾಕ್ಕೆ ನಾಮನಿರ್ದೇಶಿತರ ಸಂಖ್ಯೆ ಅಧಿಕವಿತ್ತು. ನಗರಾಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮುಡಾಕ್ಕೆ ಇನ್ನು ಮುಂದೆ ಬಿಗಿಯಾದ ಕಾನೂನಿನ ಕುಣಿಕೆ ಬೀಳಲಿದೆ. ಮುಡಾ 1987ರ ಕಾಯ್ದೆಯಡಿ ಕಾರ್ಯನಿರ್ವ ಹಿಸುತ್ತಿತ್ತು. ಮಸೂದೆಗೆ ಅನುಮತಿ ದೊರೆಯುತಿ ದ್ದಂತೆ ಎಲ್ಲವನ್ನೂ ಹೊಸ ಕಾಯ್ದೆಯಡಿಯಲ್ಲೇ ನಿರ್ವಹಿಸಬೇಕಾಗುತ್ತದೆ. ಪ್ರಾಧಿಕಾರ ಇದುವರುಮೈಸೂರು ನಗರದಲ್ಲಿ ಅನೇಕ ಹೊಸ ಹೊಸ ಬಡಾವಣೆ ಗಳನ್ನು ನಿರ್ಮಿಸಿ, ನಿವೇಶನಗಳನ್ನು ಹಂಚಿಕೆ ಮಾಡಿದೆ. ಆದರೆ, ಸಾವಿರಾರು ಬಿಡಿ ನಿವೇಶನಗಳನ್ನು ಆಡಳಿತ ಮಂಡಳಿಯೊಂದಿಗೆ ಅಧಿಕಾರಿಗಳು ಶಾಮೀಲಾಗಿ ಬೇಕಾ ಬಿಟ್ಟಿ ಹಂಚಿ, ಮುಡಾಗೆ ಸಾವಿರಾರು ಕೋಟಿ ರೂ. ನಷ್ಟ, ಉಂಟು ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ಅಭಿವೃದ್ಧಿ ಹೊಂದಿದ ಬಡಾವಣೆಯಲ್ಲಿ 14 ನಿವೇಶನಗಳನ್ನು ತಮ್ಮ ಜಮೀನಿನ ಸ್ವಾಧೀನಕ್ಕೆ ಬದಲಾಗಿ 4 ಪಡೆದುಕೊಂಡಿದ್ದೇ ಪ್ರಾಧಿಕಾರದಲ್ಲಿ ನಡೆದಿರುವ ಭ್ರಷ್ಟಾಚಾರಗಳು ಬಯಲಿಗೆ ಬರಲು ಕಾರಣವಾಗಿದ್ದು, ಈ ಬೆಳವಣಿಗೆ ನಂತರ ರಾಜಭವನ ಮಧ್ಯೆ ಪ್ರವೇಶಿಸಿ ನ್ಯಾಯಾಲಯದ ಆದೇಶದಂತೆ ತನಿಖೆಯೂ ನಡೆದಿದೆ. ಇದರ ನಡುವೆ ಜಾರಿ ನಿರ್ದೇಶನಾಲಯ ಪ್ರತ್ಯೇಕ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಮುಂದಿನ ದಿನಗಳಲ್ಲಿ ಸರ್ಕಾರದ ಮಟ್ಟದಲ್ಲಿ ದೊಡ್ಡ ಸಂಚಲನ ಉಂಟಾಗಲಿದೆ ಎಂಬ ಮಾತುಗಳು ಬಲವಾಗಿ ಕೇಳಿಬರುತ್ತಿವೆ

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!