14 ತಿಂಗಳ ಮಗು ವಿಕ್ಸ್ ಡಬ್ಬದ ಮುಚ್ಚಳ ನುಂಗಿ ಸಾ* ; 18ವರ್ಷಗಳ ಬಳಿಕ ಜನಿಸಿದ ಮಗುವಿನ ದುರಂತ ಅಂತ್ಯ

ರಾಜಸ್ಥಾನ: ಆಟವಾಡುತ್ತಲೇ ವಿಕ್ಸ್ ಡಬ್ಬದ ಮುಚ್ಚಳ ನುಂಗಿ 14 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದಿದೆ. ಮದುವೆಯಾಗಿ 18 ವರ್ಷಗಳ ಬಳಿಕ ಹುಟ್ಟಿದ ಮಗು ಈಗ ದುರಂತ ಅಂತ್ಯ ಕಂಡಿದ್ದು, ಪೋಷಕರ ಆಕ್ರೋಶ ಮುಗಿಲು ಮುಟ್ಟಿದೆ.

ಸರೆಡಿ ಗ್ರಾಮದ ನಿವಾಸಿ ಹೀರೆನ್ ಜೋಶಿ ಅವರ ಮಗ ಮಾನ್ವಿಕ್(14 ತಿಂಗಳು) ಸೋಮವಾರ ರಾತ್ರಿ ಮನೆಯಲ್ಲಿದ್ದ ವಿಕ್ಸ್ ಡಬ್ಬಿಯ ಜೊತೆಗೆ ಆಟವಾಡುತ್ತಿದ್ದನು. ಮಗು ಆಟವಾಡುತ್ತಿರುವುದನ್ನು ಗಮನಿಸದ ಪೋಷಕರು ತಮ್ಮದೇ ಕೆಲಸದಲ್ಲಿ ತೊಡಗಿದ್ದಾರೆ. ಆದರೆ ಇದಕ್ಕಿದ್ದಂತೆ ಮಗು ಉಸಿರಾಡಲು ಸಾಧ್ಯವಾಗದೇ ನೆಲದಲ್ಲಿ ಬಿದ್ದು ಹೊರಲಾಡುತ್ತಿರುವುದು ಕಂಡುಬಂದಿದೆ. ಈ ವೇಳೆ ಮಗುವಿನ ಪೋಷಕರು ಪರಿಶೀಲಿಸಿದಾಗ ಗಂಟಲಲ್ಲಿ ವಿಕ್ಸ್ ಡಬ್ಬದ ಮುಚ್ಚಳ ಪತ್ತೆಯಾಗಿದೆ. ಪ್ರಾರಂಭದಲ್ಲಿ ಮಗುವಿನ ಪೋಷಕರು ಮುಚ್ಚಳ ತೆಗೆಯಲು ಪ್ರಯತ್ನಿಸಿದ್ದಾರೆ, ಆದರೆ ಸಾಧ್ಯವಾಗದೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಿದ್ದಾರೆ. ಆದರೆ ಅಲ್ಲಿ ವೈದ್ಯರು ಸಿಗದ ಕಾರಣ ಪೋಷಕರು ಮಗುವನ್ನು ಬಾಂಸ್ವಾಡ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗಲೇ ದಾರಿ ಮಧ್ಯೆ ಮಗು ಉಸಿರು ಚೆಲ್ಲಿದೆ.
ವೈದ್ಯರಿಲ್ಲದ ಕಾರಣ ಸಕಾಲಕ್ಕೆ ಚಿಕಿತ್ಸೆ ದೊರೆಯದೆ ಮಗು ಪ್ರಾಣ ಕಳೆದುಕೊಂಡಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ತಡರಾತ್ರಿ ಕುಟುಂಬಸ್ಥರು ಹಾಗೂ ಸ್ಥಳೀಯರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದ್ದಾರೆ. ಮೃತ ಮಗುವಿನ ತಂದೆ ಹಿರೇನ್ ಜೋಶಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕ ರಾಗಿದ್ದು, ಇವರಿಗೆ ಈಗಾಗಲೇ ಎರಡು ಹೆಣ್ಣು ಮಕ್ಕಳಿದ್ದಾರೆ. ಆದರೆ ಗಂಡು ಮಗನಿಗಾಗಿ 18ವರ್ಷಗಳಿಂದ ಹಾತೊರೆಯುತ್ತಿದ್ದರು. ಅದರಂತೆ ಗಂಡು ಮಗು ಜನಿಸಿದ್ದು, ಇದೀಗ ಮಗುವಿನ ಅಕಾಲಿಕ ಸಾವು ತೀವ್ರ ಅಘಾತ ಉಂಟುಮಾಡಿದೆ.

Related Posts

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!