ಫೇರ್ನೆಸ್ ಕ್ರೀಮ್ 2 ಕೋಟಿ ರೂಪಾಯಿ ಜಾಹೀರಾತು ರಿಜೆಕ್ಟ್ ಮಾಡಿದ್ದ ಸಾಯಿ ಪಲ್ಲವಿ:

ದಕ್ಷಿಣ ಭಾರತದ ಪ್ರಸಿದ್ಧ ನಟಿ ಸಾಯಿ ಪಲ್ಲವಿ ಅವರು 2 ಕೋಟಿ ರೂಪಾಯಿ ಮೌಲ್ಯದ ಒಂದು ಫೇರ್ನೆಸ್ ಕ್ರೀಮ್ ಜಾಹೀರಾತನ್ನು ತಿರಸ್ಕರಿಸಿದ್ದಾರೆ. ಅವರ ಈ ನಿರ್ಧಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದಲ್ಲದೆ, ಅವರು ಬಾಲಿವುಡ್ನಲ್ಲಿ ತಮ್ಮ ಅಭಿನಯ ಪ್ರವೇಶಕ್ಕೆ ಸಿದ್ಧರಾಗಿದ್ದಾರೆ. ವೈದ್ಯಕೀಯ ಪದವೀಧರೆಯೂ ಆಗಿರುವ ಸಾಯಿ ಪಲ್ಲವಿ ಅವರ ಸರಳತೆ ಮತ್ತು ತತ್ವಗಳಿಗೆ ಈ ಘಟನೆ ಸಾಕ್ಷಿಯಾಗಿದೆ. ಅವರ ಮುಂದಿನ ಚಿತ್ರ ‘ರಾಮಾಯಣ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ದಕ್ಷಿಣ ಭಾರತದ ನಟಿ ಸಾಯಿ ಪಲ್ಲವಿ ಅವರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದವರು. ಅವರಿಗೆ ಹಲವು ಆಫರ್ಗಳು ಬಂದಿದ್ದವು. ಈ ಪೈಕಿ ಅವರು ಅಳೆದು ತೂಗಿ ಕೆಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಈ ಸುಂದರ ನಟಿ ವೈದ್ಯೆ ಕೂಡ ಹೌದು. ಅವರು ಎಂಬಿಬಿಎಸ್ ಕೂಡ ಓದಿದ್ದಾರೆ. ಸೌತ್ ನಂತರ ಬಾಲಿವುಡ್ನಲ್ಲಿ ಸದ್ದು ಮಾಡಲು ಸಾಯಿ ಪಲ್ಲವಿ ಸಜ್ಜಾಗಿದ್ದಾರೆ. ಈ ಮಧ್ಯೆ ಸಾಯಿ ಪಲ್ಲವಿ ಅವರ ಒಂದು ಅಪರೂಪದ ವಿಚಾರ ರಿವೀಲ್ ಆಗಿದೆ. ಅವರು ಬರೋಬ್ಬರಿ 2 ಕೋಟಿ ರೂಪಾಯಿ ಜಾಹೀರಾತನ್ನು ರಿಜೆಕ್ಟ್ ಮಾಡಿದ್ದರು ಎಂಬುದು ವಿಶೇಷ.
‘ಜಾಹೀರಾತುಗಳಿಂದ ಬಂದ ಹಣವನ್ನು ಏನು ಮಾಡೋದು. ನಾನು ಮನೆಗೆ ಹೋಗಿ ಮೂರು ಚಪಾತಿ ತಿನ್ನುತ್ತೇನೆ ಅಷ್ಟೆ. ನನಗೆ ದೊಡ್ಡ ಆಸೆಗಳಿಲ್ಲ’ ಎಂದು ಸಾಯಿ ಪಲ್ಲವಿ ಹೇಳಿದ್ದರು. ಈ ಮೂಲಕ ಅವರು ಎಲ್ಲ ವಿಚಾರಗಳಿಗೆ ಸ್ಪಷ್ಟನೆ ನೀಡಿದ್ದರು. ಸಾಯಿ ಪಲ್ಲವಿಗೆ ಫೇರ್ನೆಸ್ ಕ್ರೀಂ ಜಾಹೀರಾತಿಗೆ 2 ಕೋಟಿ ರೂ. ಸಿಕ್ಕಿತ್ತು. ಆದರೆ, ಇದನ್ನು ನಟಿ ತಿರಸ್ಕರಿಸಿದ್ದಾರೆ.
ಸದ್ಯ ಸಾಯಿ ಪಲ್ಲವಿ ಅವರು ‘ರಾಮಾಯಣ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ. 2026ರಲ್ಲಿ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ.

Related Posts

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

  ಒಡಿಶಾದ ಪುರಿಯಲ್ಲಿ ಭವ್ಯ ಜಗನ್ನಾಥ ರಥಯಾತ್ರೆ ಇಂದಿನಿಂದ ಆರಂಭಗೊಂಡಿದೆ. ಲಕ್ಷಾಂತರ ಭಕ್ತರು ‘ಜಯ ಜಗನ್ನಾಥ’ ಘೋಷಗಳೊಂದಿಗೆ ಈ ಮಹಾ ಉತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ಜಗನ್ನಾಥ ಸ್ವಾಮಿ, ಬಲಭದ್ರ ಮತ್ತು ಸುಭದ್ರಾ ದೇವಿ ದೇವಾಲಯದಿಂದ ಹೊರಬಂದು ಭಕ್ತರಿಗೆ ದರ್ಶನ ನೀಡುತ್ತಾರೆ. ಹೊಸ ರಥಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!