ಗ್ಯಾಸ್ ಸಿಲಿಂಡರ್ ಸ್ಫೋಟ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವು

ಹುಬ್ಬಳ್ಳಿ: ಇಲ್ಲಿನ ಉಣಕಲ್ನ ಅಚ್ಚವ್ವ ಕಾಲೋನಿಯಲ್ಲಿ ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಘಟನೆಯಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರಲ್ಲಿ ಅಜ್ಜಾಸ್ವಾಮಿ ಉರ್ಪ್ ನಿಂಗಪ್ಪ ಬೇಪಾರಿ(58) ಹಾಗೂ ಸಂಜಯ ಸವದತ್ತಿ (20) ಎಂಬ ಇಬ್ಬರು ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದರು. ಬಳಿಕ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ರಾಜು ಮೂಗೇರಿ (21) ಕೂಡ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.
ಇನ್ನುಳಿದ ಗಾಯಾಳುಗಳಾದ ವಿನಾಯಕ ಬಾತಕೇರ (12), ಪ್ರಕಾಶ ಬಾರಕೇರ (42), ಮಂಜು ತೋರದ (22), ಪ್ರವೀಣ ಚಲವಾದಿ (24), ತೇಜಸ್ ರೆಡ್ಡಿ (26) ಮತ್ತು ಶಂಕರ ರಾಯನಗೌಡ್ರ (29) ಇವರುಗಳ ಸ್ಥಿತಿ ಇನ್ನೂ ಗಂಭೀರವಾಗಿದ್ದು, ಕೆಎಂಸಿಆರ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಡಿಸೆಂಬರ್ 23ರಂದು ಎಂದಿನಂತೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ತಮ್ಮ ವ್ರತವನ್ನು ಮುಗಿಸಿ, ಅಯ್ಯಪ್ಪನಿಗೆ ಪೂಜೆ ಸಲ್ಲಿಸಿ ನಿದ್ರೆಗೆ ಜಾರಿದ್ದರು. ಈ ಸಂದರ್ಭದಲ್ಲಿ ಓರ್ವ ಅಯ್ಯಪ್ಪ ಮಾಲಾಧಾರಿಯ ಕಾಲು ಗ್ಯಾಸ್ ಸಿಲಿಂಡರ್ಗೆ ತಾಗಿದ ಪರಿಣಾಮ ಗ್ಯಾಸ್ ಸೋರಿಕೆಯಾಗಿದೆ. ದೇವರಿಗೆ ಹಚ್ಚಿದ್ದ ದೀಪ ಉರಿಯುತ್ತಿದ್ದರಿಂದ ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳಿಗೆ ಗಂಭೀರವಾಗಿ ಗಾಯಗಳಾಗಿದ್ದು, ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದರು. ಈ ಕುರಿತಂತೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುರುವಾರ ಮೃತಪಟ್ಟ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಕುಟುಂಬಗಳಿಗೆ ರಾಜ್ಯ ಸರ್ಕಾರವು ಈಗಾಗಲೇ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಕೆಎಂಸಿಆರ್ಐ ಆಸ್ಪತ್ರೆಯ ಶವಗಾರಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಈ ಘೋಷಣೆ ಮಾಡಿದ್ದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳುವ ಜೊತೆಗೆ ನಷ್ಟ ಎದುರಿಸುವ ಶಕ್ತಿ ಆ ದೇವರು ನೀಡಲಿ ಎಂದು ಅವರು ಪ್ರಾರ್ಥಿಸಿದ್ದರು.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಕರ್ನಾಟಕದ ತಮ್ಮ ಹುಟ್ಟೂರಿನಲ್ಲಿ ಇಂದಿಗೂ ಜಾತಿ ಪದ್ಧತಿ ಜೀವಂತವಾಗಿದ್ದು, ಊರಿನ ದೇವಸ್ಥಾನಕ್ಕೆ ತಮಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, 12 ವರ್ಷದವರಿದ್ದಾಗ ಹೋಟೆಲೊಂದರಲ್ಲಿ ಊಟ ಮಾಡಿದ ನಂತರ ಹಣ ನೀಡಿದರೂ ಸಹ, ಕೆಳಜಾತಿಯವರೆಂಬ ಕಾರಣಕ್ಕೆ ತಟ್ಟೆಯನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು